AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM MITRA ₹4,445 ಕೋಟಿ ವೆಚ್ಚದಲ್ಲಿ 7 ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ

Piyush Goyal " ಪಿಎಂ ಮಿತ್ರ (PM MITRA) ನೂಲುವ, ನೇಯ್ಗೆ, ಸಂಸ್ಕರಣೆ/ಡೈಯಿಂಗ್ ಮತ್ತು ಮುದ್ರಣದಿಂದ ಹಿಡಿದು ಬಟ್ಟೆ ತಯಾರಿಕೆವರೆಗೆ ಒಂದು ಸ್ಥಳದಲ್ಲಿ ಜವಳಿ ಮೌಲ್ಯ ಸರಪಳಿಯನ್ನು ರಚಿಸಲು ಒಂದು ಅವಕಾಶವನ್ನು ನೀಡುತ್ತದೆ" ಎಂದು ಜವಳಿ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ

PM MITRA ₹4,445 ಕೋಟಿ ವೆಚ್ಚದಲ್ಲಿ 7 ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ
ಪಿಯೂಷ್ ಗೋಯಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 06, 2021 | 4:36 PM

Share

ದೆಹಲಿ: ಐದು ವರ್ಷಗಳಲ್ಲಿ ಒಟ್ಟು 4,445 ಕೋಟಿ ರೂ. ವೆಚ್ಚದಲ್ಲಿ ಏಳು ಪ್ರಧಾನಿ ಮೆಗಾ ಇಂಟಿಗ್ರೇಟೆಡ್ ಜವಳಿ ಪ್ರದೇಶ ಮತ್ತು ಉಡುಪುಗಳ (PM MITRA) ಉದ್ಯಾನವನಗಳ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ” ಪಿಎಂ ಮಿತ್ರ (PM MITRA) ನೂಲುವ, ನೇಯ್ಗೆ, ಸಂಸ್ಕರಣೆ/ಡೈಯಿಂಗ್ ಮತ್ತು ಮುದ್ರಣದಿಂದ ಹಿಡಿದು ಬಟ್ಟೆ ತಯಾರಿಕೆವರೆಗೆ ಒಂದು ಸ್ಥಳದಲ್ಲಿ ಜವಳಿ ಮೌಲ್ಯ ಸರಪಳಿಯನ್ನು ರಚಿಸಲು ಒಂದು ಅವಕಾಶವನ್ನು ನೀಡುತ್ತದೆ” ಎಂದು ಜವಳಿ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಇದು ಉದ್ಯಮದ ಲಾಜಿಸ್ಟಿಕ್ಸ್ ವೆಚ್ಚವನ್ನು ಕಡಿಮೆ ಮಾಡುತ್ತದೆ  ಸರ್ಕಾರದ ಈ  ನಿರ್ಧಾರವು ಮೋದಿಯವರ  5 ಎಫ್ ವಿಷನ್​​ನಿಂದ ಸ್ಫೂರ್ತಿ ಪಡೆದಿದೆ. ಅಂದರೆ – ಫಾರ್ಮ್ ಟು ಫೈಬರ್ ಟು ಫ್ಯಾಕ್ಟರಿ ಟು ಫ್ಯಾಶನ್ ಟು ಫಾರಿನ್ ಎಂದು ಸಚಿವರು ಹೇಳಿದ್ದಾರೆ.

ಜವಳಿಗಳ ಸಂಪೂರ್ಣ ಮೌಲ್ಯ ಸರಪಳಿಯು ದೇಶದ ವಿವಿಧ ಭಾಗಗಳಲ್ಲಿ ಚದುರಿಹೋಗಿ ವಿಭಜನೆಯಾಗಿರುವಾಗ ಗೋಯಲ್ ಹೇಳಿಕೆಯು ಪ್ರಸ್ತುತ ಹೆಚ್ಚಿನ ಮಹತ್ವವನ್ನು ಪಡೆದುಕೊಳ್ಳುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಹತ್ತಿ ಬೆಳೆದರೆ, ತಮಿಳುನಾಡಿನಲ್ಲಿ ನೂಲುವಿಕೆ ನಡೆಯುತ್ತದೆ. ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ಸಂಸ್ಕರಣೆ ನಡೆಯುತ್ತದೆ. ಎನ್‌ಸಿಆರ್, ಬೆಂಗಳೂರು ಮತ್ತು ಕೋಲ್ಕತ್ತಾದಲ್ಲಿ ಸಂಗ್ರಹಣೆ ನಡೆದರೆ ಮುಂಬೈ ಮತ್ತು ಕಾಂಡ್ಲಾದಿಂದ ರಫ್ತು ಮಾಡಲಾಗುತ್ತದೆ.

2021-22ರ ಬಜೆಟ್‌ನಲ್ಲಿ ಮೊದಲು ಘೋಷಿಸಿದ ಪ್ರತಿ ಪಾರ್ಕ್ ಸುಮಾರು 1 ಲಕ್ಷ ನೇರ ಮತ್ತು 2 ಲಕ್ಷ ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ. 7 ಮಿತ್ರ ಪಾರ್ಕ್‌ಗಳನ್ನು ಗ್ರೀನ್‌ಫೀಲ್ಡ್ ಮತ್ತು ಬ್ರೌನ್‌ಫೀಲ್ಡ್ ಸೈಟ್‌ಗಳಲ್ಲಿ ಸ್ಥಾಪಿಸಲಾಗುವುದು.

ತಮಿಳುನಾಡು, ಪಂಜಾಬ್, ಒಡಿಶಾ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ಅಸ್ಸಾಂ, ಕರ್ನಾಟಕ, ಮಧ್ಯಪ್ರದೇಶ ಮತ್ತು ತೆಲಂಗಾಣಗಳು ಆಸಕ್ತಿಯನ್ನು ವ್ಯಕ್ತಪಡಿಸಿವೆ ಮತ್ತು ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ಚಾಲೆಂಜ್ ವಿಧಾನದ ಮೂಲಕ ಉದ್ಯಾನವನಗಳಿಗೆ ಸ್ಥಳಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Svamitva Yojana ಸ್ವಾಮಿತ್ವ ಯೋಜನೆ ಗ್ರಾಮೀಣ ಆರ್ಥಿಕತೆಯ ಬಲ ಹೆಚ್ಚಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಜಾರಿಗೊಳಿಸಲಾಗುವುದು: ಪ್ರಧಾನಿ ಮೋದಿ

Published On - 4:24 pm, Wed, 6 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ