AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜ್ವಲ ಯೋಜನೆಯಡಿಯಲ್ಲಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕ, ಇ-ಕೋರ್ಟ್ ಹಂತ 3 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಯೋಜನೆಯಡಿ ಇಂದಿನವರೆಗೆ 9.60 ಕೋಟಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಇನ್ನೂ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗುವುದು ಎಂದು ಘೋಷಿಸಲು ನಾನು ಸಂತೋಷಪಡುತ್ತೇನೆ, ಇದರಿಂದಾಗಿ ಹೆಚ್ಚಿನ ಬಡ ಮತ್ತು ಅಗತ್ಯವಿರುವ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುತ್ತಾರೆ ಎಂದ ಸಂಪುಟ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಉಜ್ವಲ ಯೋಜನೆಯಡಿಯಲ್ಲಿ 75 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕ, ಇ-ಕೋರ್ಟ್ ಹಂತ 3 ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ಅನುರಾಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on: Sep 13, 2023 | 4:36 PM

Share

ದೆಹಲಿ ಸೆಪ್ಟೆಂಬರ್ 13 : ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ (Pradhan Mantri Ujjwala Yojana) ಮಹಿಳೆಯರಿಗೆ ಎಲ್‌ಪಿಜಿ (LPG) ಸಂಪರ್ಕಗಳನ್ನು ಬೆಂಬಲಿಸಲು ಅನುದಾನ ಬಿಡುಗಡೆ ಮಾಡುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆಯಡಿಯಲ್ಲಿ, ಮೂರು ವರ್ಷಗಳಲ್ಲಿ, ಒಟ್ಟು 1,650 ಕೋಟಿ ವೆಚ್ಚದಲ್ಲಿ 75 ಲಕ್ಷ ಸಂಪರ್ಕಗಳನ್ನು ನೀಡಲಾಗುವುದು ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಉಜ್ವಲ ಯೋಜನೆಯಡಿ ಇಂದಿನವರೆಗೆ 9.60 ಕೋಟಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗಿದೆ. ಇನ್ನೂ 75 ಲಕ್ಷ ಉಚಿತ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗುವುದು ಎಂದು ಘೋಷಿಸಲು ನಾನು ಸಂತೋಷಪಡುತ್ತೇನೆ, ಇದರಿಂದಾಗಿ ಹೆಚ್ಚಿನ ಬಡ ಮತ್ತು ಅಗತ್ಯವಿರುವ ಮಹಿಳೆಯರು ಯೋಜನೆಯ ಪ್ರಯೋಜನ ಪಡೆಯುತ್ತಾರೆ ಎಂದ ಸಂಪುಟ ಸಭೆಯ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ವರದಿಯ ಪ್ರಕಾರ, ಉಜ್ವಲ ಯೋಜನೆಯಡಿ ಹೆಚ್ಚುವರಿ 75 ಲಕ್ಷ ಎಲ್‌ಪಿಜಿ ಸಂಪರ್ಕಗಳನ್ನು ನೀಡುವುದರೊಂದಿಗೆ ಕೇಂದ್ರ ಯೋಜನೆಯಡಿಯಲ್ಲಿ ಒಟ್ಟು ಫಲಾನುಭವಿಗಳ ಸಂಖ್ಯೆ 10.35 ಕೋಟಿಗೆ ಏರಲಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸಲು ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯನ್ನು ಮೇ 2016 ರಲ್ಲಿ ಪ್ರಧಾನಿ ಮೋದಿ ಅವರು ಪ್ರಾರಂಭಿಸಿದರು.

7,210 ಕೋಟಿ ರೂಪಾಯಿಗಳ ಹಣಕಾಸು ವೆಚ್ಚದೊಂದಿಗೆ ನಾಲ್ಕು ವರ್ಷಗಳಲ್ಲಿ ಜಾರಿಗೆ ತರಲು ಕೇಂದ್ರ ಯೋಜನೆಯಾಗಿ ಇ-ಕೋರ್ಟ್‌ಗಳ ಯೋಜನೆ ಹಂತ-III ಅನ್ನು ಸರ್ಕಾರ ಅನುಮೋದಿಸಿದೆ.

ರಾಷ್ಟ್ರೀಯ ಇ-ಆಡಳಿತ ಯೋಜನೆಯ ಭಾಗವಾಗಿ, ಇ-ನ್ಯಾಯಾಲಯಗಳ ಯೋಜನೆಯು 2007 ರಿಂದ ಜಾರಿಯಲ್ಲಿದೆ. ಯೋಜನೆಯ II ಹಂತವು 2023 ರಲ್ಲಿ ಮುಕ್ತಾಯವಾಯಿತು. ಭಾರತದಲ್ಲಿ 2023 ರಿಂದ ಪ್ರಾರಂಭವಾಗುವ ಇ-ಕೋರ್ಟ್ಸ್ ಪ್ರಾಜೆಕ್ಟ್‌ನ ಹಂತ III ಪ್ರವೇಶ ಸೇರ್ಪಡೆ ಮತ್ತು ಒಳಗೊಳ್ಳುವಿಕೆಯ ಉದ್ದೇಶ ಹೊಂದಿದೆ ಎಂದು ಸಚಿವರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿG20 Summit: G20 ಶೃಂಗಸಭೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದೆಹಲಿ ಪೊಲೀಸರೊಂದಿಗೆ ಪ್ರಧಾನಿ ಮೋದಿ ಔತಣಕೂಟ

ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಅನುರಾಗ್ ಠಾಕೂರ್ ಹೇಳಿದರು. ಸೈಪ್ರಸ್ ಮೂಲದ ಬೆರ್ಹ್ಯಾಂಡಾ ಲಿಮಿಟೆಡ್‌ನಿಂದ ಸುವೆನ್ ಫಾರ್ಮಾಸ್ಯುಟಿಕಲ್ಸ್‌ನಲ್ಲಿ 9,589 ಕೋಟಿ ರೂ.ವರೆಗಿನ ವಿದೇಶಿ ಹೂಡಿಕೆಗಗೂ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!