ರೈತರಿಗೆ ಒಳ್ಳೆ ಸುದ್ದಿ; ಕೇಂದ್ರ ಸರ್ಕಾರದಿಂದ ಚಳಿಗಾಲದ ಈ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಅನುಮೋದನೆ

ಗೋಧಿಯ ಎಂಎಸ್‌ಪಿ ಪ್ರತಿ ಕ್ವಿಂಟಾಲ್‌ಗೆ 150 ರೂ. ಆಗಿದ್ದು, ಬೆಲೆ 2,275 ರೂ.ನಿಂದ 2,425 ರೂ.ಗೆ ಏರಿಕೆಯಾಗಿದೆ. ಸಾಸಿವೆಗೆ ಎಂಎಸ್‌ಪಿ 300 ಆಗಿದ್ದು, ಬೆಲೆ 5,950 ರೂ.ಗೆ ಏರಿಕೆಯಾಗಿದೆ. ಚನಾ 210 ರೂ. ಎಂಎಸ್​ಪಿ ಆಗಿದ್ದು, ಬೆಲೆ 5,650 ರೂ. ಆಗಿದೆ. ಹಾಗೆಯೇ, ಬಾರ್ಲಿ, ಮಸೂರ್, ಕುಸುಬೆಗಳ ಮೇಲಿನ ಎಂಎಸ್‌ಪಿಯನ್ನು ಕ್ರಮವಾಗಿ 1,980 ರೂ., 6,700 ಮತ್ತು 5,940 ರೂ.ಗೆ ಹೆಚ್ಚಿಸಲಾಗಿದೆ.

ರೈತರಿಗೆ ಒಳ್ಳೆ ಸುದ್ದಿ; ಕೇಂದ್ರ ಸರ್ಕಾರದಿಂದ ಚಳಿಗಾಲದ ಈ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಅನುಮೋದನೆ
ಗೋಧಿ
Follow us
|

Updated on:Oct 16, 2024 | 3:57 PM

ನವದೆಹಲಿ: ಮುಂಬರುವ ಮಾರುಕಟ್ಟೆ ಋತು 2025-26ಕ್ಕೆ ರಾಬಿ ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ರೈತರಿಗೆ ಉತ್ತಮ ಆದಾಯವನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಬಿ ಋತುವಿನಲ್ಲಿ ಪ್ರಮುಖ ಬೆಳೆಗಳ ಕೃಷಿಯನ್ನು ಉತ್ತೇಜಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪರಿಷ್ಕೃತ ಎಂಎಸ್‌ಪಿ ದರಗಳು ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ನೀಡುವ ಗುರಿಯನ್ನು ಹೊಂದಿವೆ.

ಮಾನ್ಸೂನ್ ಮುಗಿದ ನಂತರ ಚಳಿಗಾಲದಲ್ಲಿ ರಾಬಿ ಬೆಳೆಯನ್ನು ಬಿತ್ತಲಾಗುತ್ತದೆ ಮತ್ತು ಬೇಸಿಗೆಯಲ್ಲಿ ಕೊಯ್ಲು ಮಾಡಲಾಗುತ್ತದೆ. ಅಕ್ಟೋಬರ್​ನಿಂದ ಏಪ್ರಿಲ್ ತಿಂಗಳವರೆಗೆ ಈ ಬೆಳೆಗಳ ಅವಧಿ ಇರುತ್ತದೆ. ಗೋಧಿ, ಬಾರ್ಲಿ, ಸಾಸಿವೆ, ಹಸಿರು ಬಟಾಣಿ, ಜೀರಿಗೆ, ಕೊತ್ತಂಬರಿ, ಓಟ್ಸ್ ಮುಂತಾದವು ರಾಬಿ ಬೆಳೆಗಳಾಗಿವೆ. 2025-26ರ ಮಾರ್ಕೆಟಿಂಗ್ ಸೀಸನ್‌ಗಾಗಿ ರಬಿ ಬೆಳೆಗಳಿಗೆ ಹೆಚ್ಚಿನ ಕನಿಷ್ಟ ಬೆಂಬಲ ಬೆಲೆ (MSP)ಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. ರೈತರಿಗೆ ಉತ್ತಮ ಆದಾಯವನ್ನು ನೀಡಲು ಮತ್ತು ರಾಬಿ ಋತುವಿನಲ್ಲಿ ಪ್ರಮುಖ ಬೆಳೆಗಳ ಕೃಷಿಯನ್ನು ಉತ್ತೇಜಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: ದೆಹಲಿಯ ಪ್ರಧಾನಮಂತ್ರಿ ಗತಿಶಕ್ತಿ ಅನುಭೂತಿ ಕೇಂದ್ರಕ್ಕೆ ಪ್ರಧಾನಿ ಮೋದಿ ದಿಢೀರ್​ ಭೇಟಿ

ಪ್ರಮುಖ ರಾಬಿ ಬೆಳೆಯಾದ ಗೋಧಿಗೆ MSPಯನ್ನು ಕ್ವಿಂಟಾಲ್‌ಗೆ 150 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಗೋಧಿ ಪ್ರತಿ ಕ್ವಿಂಟಾಲ್‌ಗೆ ಹೊಸ ಬೆಲೆ 2,425 ರೂ.ಗೆ ತಲುಪಿದೆ. ಹಿಂದಿನ ಹಂಗಾಮಿನಲ್ಲಿ 2,275 ರೂ. ಇತ್ತು. ದೇಶದ ಅನೇಕ ಭಾಗಗಳಲ್ಲಿ ಗೋಧಿ ಪ್ರಧಾನ ಬೆಳೆಯಾಗಿದೆ. ಹೀಗಾಗಿ, ಈ ಹೆಚ್ಚಳವು ರೈತರಿಗೆ ಪ್ರಯೋಜನವನ್ನು ನೀಡುತ್ತದೆ. ವಿಶೇಷವಾಗಿ ಗೋಧಿ ಪ್ರಮುಖ ಬೆಳೆಯಾಗಿರುವ ಉತ್ತರ ಭಾರತದ ರೈತರಿಗೆ ಇದರಿಂದ ಪ್ರಯೋಜನವಾಗಲಿದೆ.

ರಾಬಿ ಬೆಳೆಯಾದ ಸಾಸಿವೆ MSP 300 ರೂ.ಗಳಷ್ಟು ಹೆಚ್ಚಾಗಿದೆ. ಈ ಮೂಲಕ ಪ್ರತಿ ಕ್ವಿಂಟಾಲ್‌ಗೆ 5,650 ರೂ.ನಿಂದ 5,950 ರೂ. ಆಗಿದೆ. ಸಾಸಿವೆಯನ್ನು ರಾಜಸ್ಥಾನ, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದು ರೈತರು ಮತ್ತು ಗ್ರಾಹಕರು ಇಬ್ಬರಿಗೂ ಪ್ರಮುಖ ಎಣ್ಣೆಬೀಜದ ಬೆಳೆಯಾಗಿದೆ. ಸಾಸಿವೆಗೆ ಹೆಚ್ಚಿನ MSP ಸಿಕ್ಕಿರುವುದು ರೈತರಿಗೆ ಉತ್ತಮ ಆದಾಯವನ್ನು ನೀಡುತ್ತದೆ ಮತ್ತು ಈ ಎಣ್ಣೆಬೀಜದ ಹೆಚ್ಚಿನ ಕೃಷಿಯನ್ನು ಪ್ರೋತ್ಸಾಹಿಸುತ್ತದೆ.

ಇದನ್ನೂ ಓದಿ: ಭಾರತ ವಿಶ್ವದ 5G ಪವರ್​ಹೌಸ್ ಆಗಿ ಹೊರಹೊಮ್ಮಿದೆ; ಐಎಂಸಿಯಲ್ಲಿ ಪ್ರಧಾನಿ ಮೋದಿ

ಕಡಲೆಯ MSP 210 ರೂ. ಏರಿಕೆ ಕಂಡಿದೆ. ಹೊಸ ದರ ಕ್ವಿಂಟಾಲ್‌ಗೆ 5,650 ರೂ. ಆಗಿದೆ. ಕಡಲೆ ಕಾಳು ಭಾರತದಲ್ಲಿ ಪ್ರಮುಖ ದ್ವಿದಳ ಧಾನ್ಯವಾಗಿದೆ ಮತ್ತು ಇದನ್ನು ದೇಶಾದ್ಯಂತ ವ್ಯಾಪಕವಾಗಿ ಸೇವಿಸಲಾಗುತ್ತದೆ. ಈ ಹೆಚ್ಚಳದೊಂದಿಗೆ, ಭಾರತೀಯ ಆಹಾರದಲ್ಲಿ ಪ್ರೋಟೀನ್‌ನ ಪ್ರಮುಖ ಮೂಲವಾಗಿರುವ ಬೇಳೆಕಾಳುಗಳ ಹೆಚ್ಚಿನ ಉತ್ಪಾದನೆಯನ್ನು ಉತ್ತೇಜಿಸುವ ಗುರಿಯನ್ನು ಸರ್ಕಾರ ಹೊಂದಿದೆ. ವಿಶೇಷವಾಗಿ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಕಡಲೆಯನ್ನು ಬೆಳೆಯುವ ರೈತರು MSPಯ ಏರಿಕೆಯಿಂದ ಪ್ರಯೋಜನ ಪಡೆಯುತ್ತಾರೆ.

MSP ಅಥವಾ ಕನಿಷ್ಠ ಬೆಂಬಲ ಬೆಲೆ ಎಂಬುದು ರೈತರಿಂದ ಕೆಲವು ಕೃಷಿ ಉತ್ಪನ್ನಗಳನ್ನು ಖರೀದಿಸಲು ಸರ್ಕಾರ ನಿಗದಿಪಡಿಸಿದ ಬೆಲೆಯಾಗಿದೆ. ಇದರಿಂದ ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುತ್ತಾರೆ. ಮಾರುಕಟ್ಟೆ ಬೆಲೆಗಳು ಕಡಿಮೆಯಾಗಿದ್ದರೂ ಸಹ ಅವರು ಆರ್ಥಿಕ ನಷ್ಟಕ್ಕೆ ಒಳಗಾಗದಂತೆ ರಕ್ಷಿಸಲು ಈ ಎಂಎಸ್​ಪಿ ಸಹಾಯ ಮಾಡುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:53 pm, Wed, 16 October 24

ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಆತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ ಅಂತ ಹಾರಿಕೆ ಉತ್ತರಕ್ಕೆ ಶರಣಾದ ಶಿವಕುಮಾರ್
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡಗುಡೆ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ
ಇಂದಿರಾನಗರದಲ್ಲಿ ವರುಣಾರ್ಭಟ; 17ನೇ ಡಿ ಕ್ರಾಸ್ ಸಂಪೂರ್ಣ ಜಲಾವೃತ