AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದ ಮೊಪಾ ಗ್ರೀನ್​ಫೀಲ್ಡ್​ ಏರ್​ಪೋರ್ಟ್​​ಗೆ ಮನೋಹರ್ ಪರಿಕ್ಕರ್ ಹೆಸರಿಡಲು ಕೇಂದ್ರ ಸಂಪುಟ ಗ್ರೀನ್​ ಸಿಗ್ನಲ್

ಗೋವಾದ ಮೊಪಾದಲ್ಲಿರುವ ಗ್ರೀನ್​ಫೀಲ್ಡ್​ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಹೆಸರಿಡಲು ಕೇಂದ್ರ ಸಂಪುಟ ಗ್ರೀನ್ ​ಸಿಗ್ನಲ್ ನೀಡಿದೆ.

ಗೋವಾದ ಮೊಪಾ ಗ್ರೀನ್​ಫೀಲ್ಡ್​ ಏರ್​ಪೋರ್ಟ್​​ಗೆ ಮನೋಹರ್ ಪರಿಕ್ಕರ್ ಹೆಸರಿಡಲು ಕೇಂದ್ರ ಸಂಪುಟ  ಗ್ರೀನ್​ ಸಿಗ್ನಲ್
ಮನೋಹರ್ ಪರಿಕ್ಕರ್ Image Credit source: Mopa International Airport
TV9 Web
| Edited By: |

Updated on: Jan 04, 2023 | 10:29 PM

Share

ನವದೆಹಲಿ/ಪಣಜಿ: ಗೋವಾದ ಮೊಪಾದಲ್ಲಿರುವ ಗ್ರೀನ್​ಫೀಲ್ಡ್​ ವಿಮಾನ ನಿಲ್ದಾಣಕ್ಕೆ (Mopa Greenfield Airport) ಮಾಜಿ ಮುಖ್ಯಮಂತ್ರಿ, ಕೇಂದ್ರ ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್(Manohar Parrikar) ಹೆಸರಿಡಲು ಕೇಂದ್ರ ಸಂಪುಟ ಗ್ರೀನ್ ​ಸಿಗ್ನಲ್ ನೀಡಿದೆ. ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಗೋವಾದ ಮೊಪಾದಲ್ಲಿ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಏರ್​ಪೋರ್ಟ್ ಮೊದಲ ಹಂತವನ್ನು ಉದ್ಘಾಟಿಸಿದ್ದರು. ಇಂದು(ಜನವರಿ 04) ನಡೆದ ಕೇಂದ್ರ ಸಚಿವ ಸಂಪುಟ ಗ್ರೀನ್​ಫೀಲ್ಡ್ ಏರ್​ಪೋರ್ಟ್​ಗೆ ಮನೋಹರ್ ಪರಿಕ್ಕರ್ ಹೆಸರಿಡಲು ಅಧಿಕೃತವಾಗಿ ಅನುಮೋದನೆ ನೀಡಿದೆ.

ಇದನ್ನೂ ಓದಿ: ಗೋವಾದ ಮೊಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಿಕ್ಕರ್ ಹೆಸರು; ಏನಿದರ ವಿಶೇಷತೆ?

ಮಾಜಿ ರಕ್ಷಣಾ ಸಚಿವ ಮತ್ತು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಮನೋಹರ್ ಪರಿಕ್ಕರ್ ಅವರಿಗೆ ಗೌರವ ಸೂಚಕವಾಗಿ ಗೋವಾದ ಮೋಪಾದಲ್ಲಿರುವ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಲು ಇಂದು ಕೇಂದ್ರ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಈ ಹಿಂದೆ ದಿವಂಗತ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರು ವಿಮಾನ ನಿಲ್ದಾಣಕ್ಕೆ ತಮ್ಮ ತಂದೆಯ ಹೆಸರನ್ನು ಇಟ್ಟರೆ ಅದು “ಸಂತೋಷದ ಕ್ಷಣ” ಎಂದು ಹೇಳಿದ್ದರು.

ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ನಿಲ್ದಾಣ

2016ರಲ್ಲಿ ಈ ವಿಮಾನ ನಿಲ್ದಾಣದ ಶಂಕುಸ್ಥಾಪನೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, 2022ರ ಡಿಸೆಂಬರ್​ನಲ್ಲಿ ಗೋವಾದ ಮೊಪಾದಲ್ಲಿ (Mopa) ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದ್ದರು. ವಿಮಾನ ನಿಲ್ದಾಣವು ಮೊದಲ ಹಂತದಲ್ಲಿ ವರ್ಷಕ್ಕೆ 44 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದು, ಸಂಪೂರ್ಣ ಯೋಜನೆ ಪೂರ್ಣಗೊಂಡ ನಂತರ ಇದು ವರ್ಷಕ್ಕೆ ಒಂದು ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಲಿದೆ.

ಸುಮಾರು 2,870 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಈ ವಿಮಾನ ನಿಲ್ದಾಣವು ಸೌರ ವಿದ್ಯುತ್ ಸ್ಥಾವರ, ಹಸಿರು ಕಟ್ಟಡಗಳು, ರನ್​ವೇಯಲ್ಲಿ ಎಲ್ಇಡಿ ದೀಪಗಳು, ಮಳೆ ನೀರು ಕೊಯ್ಲು, ಮರುಬಳಕೆ ಸೌಲಭ್ಯಗಳೊಂದಿಗೆ ಅತ್ಯಾಧುನಿಕ ಒಳಚರಂಡಿ ಸಂಸ್ಕರಣಾ ಘಟಕವನ್ನು ಹೊಂದಿದೆ. ಇಷ್ಟೇ ಅಲ್ಲದೆ ಇನ್ನೂ ಅನೇಕ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ .

ವಿಮಾನ ನಿಲ್ದಾಣವು 3-D ಏಕಶಿಲೆಯ ಪ್ರೀಕಾಸ್ಟ್ ಕಟ್ಟಡಗಳು, ಸ್ಟೆಬಿಲ್ರೋಡ್, ರೋಬೋಮ್ಯಾಟಿಕ್ ಹಾಲೋ ಪ್ರಿಕಾಸ್ಟ್ ಗೋಡೆಗಳು, 5ಜಿ ಸಕ್ರಿಯವಾದ ಐಟಿ ಮೂಲಸೌಕರ್ಯಗಳಂತಹ ಕೆಲವು ಅತ್ಯುತ್ತಮ ದರ್ಜೆಯ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ. ವಿಮಾನ ನಿಲ್ದಾಣದ ಕೆಲವು ವೈಶಿಷ್ಟ್ಯಗಳಲ್ಲಿ ವಿಶ್ವದ ಅತಿದೊಡ್ಡ ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ರನ್​ವೇ, 14 ಪಾರ್ಕಿಂಗ್ ಬೇಗಳು ಜೊತೆಗೆ ವಿಮಾನಗಳಿಗೆ ರಾತ್ರಿ ಪಾರ್ಕಿಂಗ್ ಸೌಲಭ್ಯ, ಸ್ವಯಂ-ಬ್ಯಾಗೇಜ್ ಡ್ರಾಪ್ ಸೌಲಭ್ಯಗಳು, ಅತ್ಯಾಧುನಿಕ ಮತ್ತು ಸ್ವತಂತ್ರ ಏರ್ ನ್ಯಾವಿಗೇಷನ್ ಮೂಲಸೌಕರ್ಯಗಳು ಸೇರಿವೆ

Follow Us
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್