AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್​

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಈ ಅವಧಿಯ ಎನ್​ಡಿಎ ಸರ್ಕಾರದ ಕೊನೆ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ನ್ಯೂಸ್​ ನೀಡಿದೆ. ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕೊನೆಯ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.

ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 22, 2024 | 8:34 AM

Share

ನವದೆಹಲಿ, (ಫೆಬ್ರವರಿ 21): ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ(sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್‌ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್​ಆರ್​ಪಿ ಪ್ರತಿ ಕ್ವಿಂಟಲ್​ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಬ್ಬಿನ ದರ ಪ್ರತಿ ಕ್ವಿಂಟಾಲ್​ಗೆ 340 ರೂಪಾಯಿಗೆ ಹೆಚ್ಚಿಳ ಮಾಡಲಾಗಿದೆ.  ಇದು ಕಬ್ಬಿನ ಐತಿಹಾಸಿಕ ಬೆಲೆಯಾಗಿದ್ದು, ಇದು ಪ್ರಸಕ್ತ 2023-24 ರ ಹಂಗಾಮಿನ ಕಬ್ಬಿನ ಎಫ್‌ಆರ್‌ಪಿಗಿಂತ ಸುಮಾರು ಶೇ.8ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ FRP ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಬ್ಬನ್ನು ಮುಖ್ಯವಾಗಿ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. 2024-25ನೇ ಸಾಲಿಗೆ ಕಬ್ಬಿನ ಎಫ್ಆರ್ ಪಿಯನ್ನು ಪ್ರತಿ ಕ್ವಿಂಟಾಲ್ಗೆ 340 ರೂ.ಗಳಂತೆ ಶೇ.10.25 ರಷ್ಟು ಸಕ್ಕರೆ ಚೇತರಿಕೆ ದರದಲ್ಲಿ ಸಿಸಿಇಎ ಅನುಮೋದಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು.

ಪರಿಷ್ಕೃತ ಎಫ್ಆರ್ ಪಿ ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸುಗಳ ಆಧಾರದ ಮೇಲೆ ಎಫ್ಆರ್ ಪಿಯನ್ನು ನಿರ್ಧರಿಸಲಾಗಿದೆ.

ಮುಂದಿನ ಕಬ್ಬು ಹಂಗಾಮಿನ ವೇಳೆ ಅಂದರೆ 2024ರ ಅಕ್ಟೋಬರ್ 1ರಿಂದ 2025 ಸೆಪ್ಟಂಬರ್ 30ರ ಅವಧಿಗೆ ಕಬ್ಬು ಖರೀದಿ ದರವನ್ನು ಕ್ವಿಂಟಲ್‌ಗೆ 315 ರು.ನಿಂದ 340 ರು.ಗೆ ಹೆಚ್ಚಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 25 ರು. ಹೆಚ್ಚಳ ಮಾಡಲಾಗಿದೆ. ರೈತರಿಗೆ ನ್ಯಾಯಸಮ್ಮತ ಮತ್ತು ಸಮಂಜಸ ಬೆಲೆ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದು ನರೇಂದ್ರ ಮೋದಿ ಸರ್ಕಾರ ಒಂದೇ ಬಾರಿಗೆ ಕಬ್ಬು ಖರೀದಿ ದರದಲ್ಲಿ ಮಾಡಿದ ಗರಿಷ್ಠ ಏರಿಕೆ ಪ್ರಮಾಣವಾಗಿದೆ. ಈ ಏರಿಕೆಯ ಲಾಭ ಹೆಚ್ಚಿನ ಕಬ್ಬು ಬೆಳೆಯುವ ಕರ್ನಾಟಕ, ಮಹಾರಾಷ್ಟ್ರರ, ಉತ್ತರಪ್ರದೇಶದ ರಾಜ್ಯಗಳ ರೈತರಿಗೆ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ (ಸಿಸಿಇಎ) ಈ ನಿರ್ಧಾರ ಕೈಗೊಳ್ಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 pm, Wed, 21 February 24

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ