AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್​

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಈ ಅವಧಿಯ ಎನ್​ಡಿಎ ಸರ್ಕಾರದ ಕೊನೆ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ನ್ಯೂಸ್​ ನೀಡಿದೆ. ಕಬ್ಬಿನ ಖರೀದಿ ದರ ಹೆಚ್ಚಳಕ್ಕೆ ಕೊನೆಯ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.

ಈ ಅವಧಿಯ ಕೊನೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರಿಗೆ ಗುಡ್​ ನ್ಯೂಸ್​
ಪ್ರಾತಿನಿಧಿಕ ಚಿತ್ರ
TV9 Web
| Updated By: ನಯನಾ ರಾಜೀವ್|

Updated on:Feb 22, 2024 | 8:34 AM

Share

ನವದೆಹಲಿ, (ಫೆಬ್ರವರಿ 21): ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ(sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್‌ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್​ಆರ್​ಪಿ ಪ್ರತಿ ಕ್ವಿಂಟಲ್​ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಬ್ಬಿನ ದರ ಪ್ರತಿ ಕ್ವಿಂಟಾಲ್​ಗೆ 340 ರೂಪಾಯಿಗೆ ಹೆಚ್ಚಿಳ ಮಾಡಲಾಗಿದೆ.  ಇದು ಕಬ್ಬಿನ ಐತಿಹಾಸಿಕ ಬೆಲೆಯಾಗಿದ್ದು, ಇದು ಪ್ರಸಕ್ತ 2023-24 ರ ಹಂಗಾಮಿನ ಕಬ್ಬಿನ ಎಫ್‌ಆರ್‌ಪಿಗಿಂತ ಸುಮಾರು ಶೇ.8ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಸಭೆಯಲ್ಲಿ FRP ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಬ್ಬನ್ನು ಮುಖ್ಯವಾಗಿ ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ಬೆಳೆಯಲಾಗುತ್ತದೆ. 2024-25ನೇ ಸಾಲಿಗೆ ಕಬ್ಬಿನ ಎಫ್ಆರ್ ಪಿಯನ್ನು ಪ್ರತಿ ಕ್ವಿಂಟಾಲ್ಗೆ 340 ರೂ.ಗಳಂತೆ ಶೇ.10.25 ರಷ್ಟು ಸಕ್ಕರೆ ಚೇತರಿಕೆ ದರದಲ್ಲಿ ಸಿಸಿಇಎ ಅನುಮೋದಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದರು.

ಪರಿಷ್ಕೃತ ಎಫ್ಆರ್ ಪಿ ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿದೆ. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ (ಸಿಎಸಿಪಿ) ಶಿಫಾರಸುಗಳ ಆಧಾರದ ಮೇಲೆ ಎಫ್ಆರ್ ಪಿಯನ್ನು ನಿರ್ಧರಿಸಲಾಗಿದೆ.

ಮುಂದಿನ ಕಬ್ಬು ಹಂಗಾಮಿನ ವೇಳೆ ಅಂದರೆ 2024ರ ಅಕ್ಟೋಬರ್ 1ರಿಂದ 2025 ಸೆಪ್ಟಂಬರ್ 30ರ ಅವಧಿಗೆ ಕಬ್ಬು ಖರೀದಿ ದರವನ್ನು ಕ್ವಿಂಟಲ್‌ಗೆ 315 ರು.ನಿಂದ 340 ರು.ಗೆ ಹೆಚ್ಚಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 25 ರು. ಹೆಚ್ಚಳ ಮಾಡಲಾಗಿದೆ. ರೈತರಿಗೆ ನ್ಯಾಯಸಮ್ಮತ ಮತ್ತು ಸಮಂಜಸ ಬೆಲೆ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದು ನರೇಂದ್ರ ಮೋದಿ ಸರ್ಕಾರ ಒಂದೇ ಬಾರಿಗೆ ಕಬ್ಬು ಖರೀದಿ ದರದಲ್ಲಿ ಮಾಡಿದ ಗರಿಷ್ಠ ಏರಿಕೆ ಪ್ರಮಾಣವಾಗಿದೆ. ಈ ಏರಿಕೆಯ ಲಾಭ ಹೆಚ್ಚಿನ ಕಬ್ಬು ಬೆಳೆಯುವ ಕರ್ನಾಟಕ, ಮಹಾರಾಷ್ಟ್ರರ, ಉತ್ತರಪ್ರದೇಶದ ರಾಜ್ಯಗಳ ರೈತರಿಗೆ ಸಿಗಲಿದೆ ಎಂದು ಸರ್ಕಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ (ಸಿಸಿಇಎ) ಈ ನಿರ್ಧಾರ ಕೈಗೊಳ್ಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:59 pm, Wed, 21 February 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ