AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MPLAD ಯೋಜನೆಯನ್ನು ಮರುಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ: ಕೇಂದ್ರ ಸಚಿವ ಅನುರಾಗ್ ಠಾಕೂರ್

Anurag Thakur ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, 2021-22 ರ ಆರ್ಥಿಕ ವರ್ಷದ ಉಳಿದ ಭಾಗಕ್ಕೆ ಯೋಜನೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳಿದರು

MPLAD ಯೋಜನೆಯನ್ನು ಮರುಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
TV9 Web
| Edited By: |

Updated on:Nov 10, 2021 | 4:57 PM

Share

ದೆಹಲಿ: ಕೊವಿಡ್ -19 (Covid-19)  ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರದ್ದು ಮಾಡಲಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಮರುಸ್ಥಾಪನೆ ಮತ್ತು ಮುಂದುವರಿಕೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) 2021-22 ರ ಆರ್ಥಿಕ ವರ್ಷದ ಉಳಿದ ಭಾಗಕ್ಕೆ ಯೋಜನೆಯನ್ನು ಪುನಃಸ್ಥಾಪಿಸಲಾಗಿದೆ ಎಂದು ಹೇಳಿದರು. ಯೋಜನೆಯು 2025-26 ರವರೆಗೆ ಮುಂದುವರಿಯುತ್ತದೆ.  2021-22ರ ಉಳಿದ ಅವಧಿಗೆ ಪ್ರತಿ ಸಂಸದರಿಗೆ 2 ಕೋಟಿ ರೂ.ನಂತೆ ಒಂದೇ ಕಂತಿನಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದರು. 2022-23 ರಿಂದ 2025-26 ರವರೆಗೆ ಈ ಯೋಜನೆಯಡಿಯಲ್ಲಿ ಪ್ರತಿ ಸಂಸದರಿಗೆ ತಲಾ 2.5 ಕೋಟಿ ರೂ.ಗಳಂತೆ ಎರಡು ಕಂತುಗಳಲ್ಲಿ ವಾರ್ಷಿಕ 5 ಕೋಟಿ ರೂ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.  ಕಳೆದ ವರ್ಷ ಏಪ್ರಿಲ್‌ನಲ್ಲಿ, ಸರ್ಕಾರವು 2020-21 ಮತ್ತು 2021-22 ರ ಅವಧಿಯಲ್ಲಿ MPLADS ಅನ್ನು ಸ್ಥಗಿತಗೊಳಿಸಿದ್ದು ಹಣವನ್ನು ಆರೋಗ್ಯ ಸೇವೆಗಳನ್ನು ನಿರ್ವಹಿಸಲು ಮತ್ತು ದೇಶದಲ್ಲಿ ಕೊವಿಡ್ -19 ಸಾಂಕ್ರಾಮಿಕದ ಪ್ರತಿಕೂಲ ಪರಿಣಾಮಕ್ಕಾಗಿ ಬಳಸಲಾಗುವುದು ಎಂದು ಹೇಳಿತ್ತು. ಯೋಜನೆಯಡಿ, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಪ್ರತಿ ವರ್ಷ 5 ಕೋಟಿ ರೂಪಾಯಿ ವೆಚ್ಚವನ್ನು ಒಳಗೊಂಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಶಿಫಾರಸು ಮಾಡಬಹುದು.

ಸುದ್ದಿಗೋಷ್ಠಿಯ ಮುಖ್ಯಾಂಶಗಳು ಎಥೆನಾಲ್ ಮಿಶ್ರಿತ ಪೆಟ್ರೋಲ್ ಕಾರ್ಯಕ್ರಮದ ಅಡಿಯಲ್ಲಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳಿಂದ ಎಥೆನಾಲ್ ಅನ್ನು ಸಂಗ್ರಹಿಸುವ ಕಾರ್ಯವಿಧಾನವನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಸಿ ಹೆವಿ ಸಿ ಮೊಲಸಿಸ್ ನಿಂದ ಎಥೆನಾಲ್‌ನ ಬೆಲೆ ರೂ 46.66/ಲೀಟರ್‌ಗೆ ಏರಿಕೆಯಾಗಿದೆ. ಬಿ ಹೆವಿ ಸಿ ಮೊಲಸಿಸ್ ನಿಂದ ಎಥೆನಾಲ್‌ನ ಬೆಲೆ ಲೀಟರ್‌ಗೆ 59.08 ರೂ.ಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಜೂಟ್ ಪ್ಯಾಕೇಜಿಂಗ್ ಮೆಟೀರಿಯಲ್ ಆಕ್ಟ್, 1987 ರ ಅಡಿಯಲ್ಲಿ 2021-22 ರ ಸೆಣಬಿನ ಪ್ಯಾಕೇಜಿಂಗ್ ಮೆಟೀರಿಯಲ್‌ಗಳಿಗೆ ಮೀಸಲು ಮಾನದಂಡಗಳನ್ನು ಕ್ಯಾಬಿನೆಟ್ ಅನುಮೋದಿಸಿರುವುದರಿಂದ ಶೇ 100 ಆಹಾರ ಧಾನ್ಯಗಳು ಮತ್ತು ಶೇ20 ಸಕ್ಕರೆಯನ್ನು ಸೆಣಬಿನ ಚೀಲಗಳಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಭಾರತೀಯ ಹತ್ತಿ ನಿಗಮಕ್ಕೆ 17,408.85 ಕೋಟಿ ರೂ.ಗಳ ಬದ್ಧ ಬೆಲೆ ಬೆಂಬಲಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2014-15 ರಿಂದ 2020-21 ರವರೆಗಿನ ಹತ್ತಿ ಋತುವಿನಲ್ಲಿ (ಅಕ್ಟೋಬರ್‌ನಿಂದ ಸೆಪ್ಟೆಂಬರ್) ಹತ್ತಿಗೆ ಎಂಎಸ್​​ಪಿ ಆಪ್‌ಗಳ ಅಡಿಯಲ್ಲಿ ನಷ್ಟವನ್ನು ಮರುಪಾವತಿಸಲು ಸಿಸಿಇಎ (CCEA) ಅನುಮೋದಿಸಿದೆ.

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನವಾದ ನವೆಂಬರ್ 15 ಅನ್ನು ‘ಜನಜಾತಿಯ ಗೌರವ್ ದಿವಸ್’ ಎಂದು ಘೋಷಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಬುಡಕಟ್ಟು ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು 15-22 ನವೆಂಬರ್ 2021 ರಿಂದ ವಾರದ ಅವಧಿಯ ಆಚರಣೆಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ: Chennai Rain ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್; ಮಳೆಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ

Published On - 4:50 pm, Wed, 10 November 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್