Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಕೇಂದ್ರ ಸಚಿವ ಸಂಪುಟ

Cabinet Briefing: ಕೇಂದ್ರ ಸಚಿವ ಅನುರಾಗ್ ಠಾಕೂರ್ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಚಂದ್ರಯಾನದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತದೆ ಎಂದು ಮಾತು ಆರಂಭಿಸಿದ ಸಚಿವರು, ಈ ಯಶಸ್ಸಿನಲ್ಲಿ ಮಹಿಳಾ ವಿಜ್ಞಾನಿಗಳ  ಪಾಲು ಇದೆ. ಅವರ ಕೊಡುಗೆ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ ಎಂದಿದ್ದಾರೆ.

ಚಂದ್ರಯಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದ ಕೇಂದ್ರ ಸಚಿವ ಸಂಪುಟ
ಅನುಗಾರ್ ಠಾಕೂರ್
Follow us
ರಶ್ಮಿ ಕಲ್ಲಕಟ್ಟ
|

Updated on:Aug 29, 2023 | 4:21 PM

ದೆಹಲಿ ಆಗಸ್ಟ್ 29: ಚಂದ್ರಯಾನ-3 (Chandrayaan-3) ಮೂಲಕ ಭಾರತ ಮಹತ್ತರ ಸಾಧನೆಯನ್ನು ಮಾಡಿದೆ. ಇಸ್ರೋ ಸಂಸ್ಥೆಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ವಿಜ್ಞಾನಿಗಳ ಈ ಸಾಧನೆ ಎಲ್ಲರಿಗೂ ಪ್ರೇರಣೆ ಆಗಿದೆ. ಚಂದ್ರಯಾನದ ಯಶಸ್ಸಿನಲ್ಲಿ ಮಹಿಳಾ ವಿಜ್ಞಾನಿಗಳ  ಪಾಲು ಇದೆ. ಅವರ ಕೊಡುಗೆ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ನರೇಂದ್ರ ಮೋದಿ (Narendra Modi) ಅವರು ವಿಜ್ಞಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಎಂದು  ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿದ್ದಾರೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದನ್ನು ಗುರುತಿಸುವುದಕ್ಕಾಗಿ ಆಗಸ್ಟ್ 23 ನ್ನು ಕೇಂದ್ರ ಸಚಿವ ಸಂಪುಟ  ‘ರಾಷ್ಟ್ರೀಯ ಬಾಹ್ಯಾಕಾಶ ದಿನ'(National Space Day) ಎಂದು ಘೋಷಿಸಿದೆ.

ಚಂದ್ರಯಾನ-3 ಮಿಷನ್‌ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನು ಸಚಿವ ಸಂಪುಟ ಶ್ಲಾಘಿಸುತ್ತದೆ. ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಸಚಿವ  ಸಂಪುಟವು ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದರು.

ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ದೇಶವು ಇತಿಹಾಸ ಸೃಷ್ಟಿಸುತ್ತದೆ. ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಾವು  ನಮ್ಮ ಚಂದ್ರಯಾನ-3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸುತ್ತದೆ ಎಂದಿದ್ದಾರೆ ಠಾಕೂರ್.

ಭಾರತದ ಮೂರನೇ ಚಂದ್ರಯಾನ ಚಂದ್ರಯಾನ-3, 40 ದಿನಗಳ ಪ್ರಯಾಣದ ನಂತರ ಚಂದ್ರನ ಮೇಲ್ಮೈಯನ್ನು ತಲುಪಿತು.  ಚಂದ್ರಯಾನ-3 ಮಿಷನ್‌ನ ಐತಿಹಾಸಿಕ ಯಶಸ್ಸನ್ನು ಆಚರಿಸಲು ಕೇಂದ್ರ ಸಚಿವ ಸಂಪುಟ ದೇಶದ ಜನರೊಂದಿಗೆ ಸೇರುತ್ತದೆ. ನಮ್ಮ ವಿಜ್ಞಾನಿಗಳ ಸ್ಮರಣೀಯ ಸಾಧನೆಯನ್ನು ಸಚಿವ ಸಂಪುಟವೂ ಶ್ಲಾಘಿಸುತ್ತದೆ. ಇದು ನಮ್ಮ ಬಾಹ್ಯಾಕಾಶ ಏಜೆನ್ಸಿಯ ಗೆಲುವು ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಗತಿ ಮತ್ತು ಅಭಿವೃದ್ಧಿಯ ಸಂಕೇತವಾಗಿದೆ.

ಚಂದ್ರನ ಮೇಲಿರುವ ಎರಡು ಪಾಯಿಂಟ್​​ಗಳಿಗೆ ತಿರಂಗಾ ಮತ್ತು ಶಿವಶಕ್ತಿ ಎಂದು ಹೆಸರಿಸಿರುವ ಕುರಿತು ಮಾತನಾಡಿದ ಸಚಿವರು, ಈ ಹೆಸರುಗಳು ಆಧುನಿಕತೆಯ ಚೈತನ್ಯವನ್ನು ಅಳವಡಿಸಿಕೊಂಡು ನಮ್ಮ ಗತಕಾಲದ ಸಾರವನ್ನು ಬಿಂಬಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: LPG Prices: ಎಲ್​ಪಿಜಿ ಸಿಲಿಂಡರ್ ದರ 200 ರೂ ಇಳಿಕೆ; ಕೇಂದ್ರ ಸಂಪುಟದಿಂದ ಅನುಮೋದನೆ

ಅದೇ ವೇಳೆ ಎಲ್ಲಾ ಗ್ರಾಹಕರಿಗೆ ಪ್ರತಿ LPG ಸಿಲಿಂಡರ್‌ಗೆ ರೂ 200 ಹೆಚ್ಚುವರಿ ಸಬ್ಸಿಡಿಯನ್ನು ಕ್ಯಾಬಿನೆಟ್ ಅನುಮೋದಿಸಿದೆ. ಉಜ್ವಲ ಯೋಜನೆಯಡಿ 7.5 ಮಿಲಿಯನ್ ಹೊಸ ಗ್ಯಾಸ್ ಸಂಪರ್ಕಗಳಿಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂಪಾಯಿ ಹೆಚ್ಚುವರಿ ಸಬ್ಸಿಡಿ ಇಂದಿನಿಂದ ಜಾರಿಗೆ ಬಂದಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Tue, 29 August 23

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ