AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Cabinet Expansion: ನಾಳೆಯಲ್ಲ, ನಾಡಿದ್ದು ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ

PM Modi Cabinet: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಸರ್ಕಾರಕ್ಕೆ ನೂತನ ಸಚಿವರು ಸೇರ್ಪಡೆಗೊಳ್ಳಲಿದ್ದಾರೆ. ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ‌ ಇಬ್ಬರಿಗೆ‌ ಸಚಿವ ಸ್ಥಾನ‌‌ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Union Cabinet Expansion: ನಾಳೆಯಲ್ಲ, ನಾಡಿದ್ದು ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ
ಪ್ರಧಾನಿ ನರೇಂದ್ರ ಮೋದಿ ಲೆಕ್ಕಾಚಾರವೇನು?
TV9 Web
| Edited By: |

Updated on:Jul 06, 2021 | 3:02 PM

Share

ದೆಹಲಿ: ಜುಲೈ 8ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಕೇಂದ್ರ ಸಂಪುಟ ವಿಸ್ತರಣೆಯಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಸರ್ಕಾರಕ್ಕೆ ನೂತನ ಸಚಿವರು ಸೇರ್ಪಡೆಗೊಳ್ಳಲಿದ್ದಾರೆ. ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ‌ ಇಬ್ಬರಿಗೆ‌ ಸಚಿವ ಸ್ಥಾನ‌‌ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ವರಿಷ್ಠರು ಬುಲಾವ್ ನೀಡಿದ ಹಿನ್ನೆಲೆ ಮಧ್ಯಾಹ್ನ ದೆಹಲಿಗೆ ತೆರಳಲು ನಾರಾಯಣಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪತ್ನಿ ವಿಜಯ ಮತ್ತು ಪುತ್ರಿ ಶೀತಲ್ ಸೇರಿ ಕುಟುಂಬ ಸಮೇತ ದೆಹಲಿಗೆ ತೆರಳಲಿದ್ದಾರೆ.

ಮೊದಲ ಬಾರಿಗೆ ಸಂಸದರಾಗಿರುವ ಎಡಗೈ ಸಮುದಾಯದ ನಾಯಕ ನಾರಾಯಣಸ್ವಾಮಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗುತ್ತಾ? ಎಂದು ನೋಡಬೇಕಿದೆ. ನಾರಾಯಣಸ್ವಾಮಿಗೆ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಸಚಿವ ಸ್ಥಾನ ಒಲಿಯುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿ ಎಡಗೈ ಸಮೂದಾಯಕ್ಕೆ ಸೇರಿರುವುದರಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳು ಅವಕಾಶ ಇದೆ.

ಇನ್ನು ಜೆಡಿಯು ಪಕ್ಷದ ಲಾಲನ್ ಸಿಂಗ್, ಮಹಾರಾಷ್ಟ್ರದ ನಾರಾಯಣ್ ರಾಣೆ, ಅಸ್ಸಾಂ ಸರ್ಬಾನಂದ ಸೋನವಾಲ್ ಕೂಡ ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಲಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಬಹುತೇಕ ಖಚಿತವಾಗಿದೆ. ಹೀಗಾಗಿ ಜ್ಯೋತಿರಾದಿತ್ಯ ಮಧ್ಯಪ್ರದೇಶ ಇಂದೋರ್ನಿಂದ ದೆಹಲಿಗೆ ಆಗಮಿಸಿದ್ದಾರೆ.

ಇನ್ನು ದಿವಂಗತ ರಾಮವಿಲಾಸ್ ಪಾಸ್ವಾನ್ ಸೋದರ ಪಶುಪತಿ ಪಾರಸ್ ಕುರ್ತಾ ಖರೀದಿ ಮಾಡುತ್ತಿದ್ದಾರೆ. ಕೇಂದ್ರದ ಕ್ಯಾಬಿನೆಟ್ನಲ್ಲಿ ಎಲ್ಜೆಪಿ ಪಕ್ಷದ ಕೋಟಾದಲ್ಲಿ ಪಶುಪತಿ‌ಪಾರಸ್ಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಬಿಹಾರದ ಜೆಡಿಯು ಪಕ್ಷದ ಸಿ.ಪಿ.ಸಿಂಗ್ ಕೂಡ ದೆಹಲಿಗೆ ಆಗಮಿಸಲಿದ್ದಾರೆ. ಜೆಡಿಯು ಕೋಟಾದಲ್ಲಿ ಸಿ.ಪಿ.ಸಿಂಗ್ಗೆ ಸಚಿವ ಸ್ಥಾನ ಸಾಧ್ಯತೆ‌ ಇದೆ. ಇಂದು ಸಂಜೆ 5 ಗಂಟೆಗೆ ಮೋದಿ ಕರೆದಿದ್ದ ಸಚಿವರ ಸಭೆ ರದ್ದಾಗಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರಿಗೆ ದೆಹಲಿಗೆ ಬರುವಂತೆ ಸೂಚನೆ ಹಿನ್ನೆಲೆಯಲ್ಲಿ ಎಲ್ಲರೂ ಆಗಮಿಸಲಿದ್ದಾರೆ.

ಇದನ್ನೂ ಓದಿ: 

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ

Syama Prasad Mookerjee ಶ್ಯಾಮ ಪ್ರಸಾದ್ ಮುಖರ್ಜಿ 120 ನೇ ಜನ್ಮ ದಿನಾಚರಣೆ: ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

(Union Cabinet expansion to be held on July 8 morning says source)

Published On - 2:50 pm, Tue, 6 July 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ