AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEP ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಧರ್ಮೇಂದ್ರ ಪ್ರಧಾನ್ ಟೀಕೆ

ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿದ ಧರ್ಮೇಂದ್ರ ಪ್ರಧಾನ್ "ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆ, ಹಿಂಚಲನೆ ಅಲ್ಲಲ್ಲ. NEP ಎಲ್ಲರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ವರ್ಷಗಳ ಸಮಾಲೋಚನೆಯ ಫಲಿತಾಂಶವಾಗಿದೆ. ಕಾಂಗ್ರೆಸ್ ಪಕ್ಷ  ಸುಧಾರಣೆ-ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಎಂಬುದನ್ನು ಈ ಕ್ರಮ ಪ್ರತಿಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.

NEP ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಧರ್ಮೇಂದ್ರ ಪ್ರಧಾನ್ ಟೀಕೆ
ಧರ್ಮೇಂದ್ರ ಪ್ರಧಾನ್
ರಶ್ಮಿ ಕಲ್ಲಕಟ್ಟ
|

Updated on: Aug 18, 2023 | 3:28 PM

Share

ದೆಹಲಿ ಆಗಸ್ಟ್ 18: ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಕೈಬಿಡುವ ಕರ್ನಾಟಕ ಸರ್ಕಾರದ (Karnataka) ನಿರ್ಧಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan)ಟೀಕಿಸಿದ್ದು, ಇದು”ರಾಜಕೀಯ ಪ್ರೇರಿತ” ಎಂದು ಹೇಳಿದ್ದಾರೆ. ಶಿಕ್ಷಣವು ರಾಜಕೀಯ ಸಾಧನವಾಗಿರದೆ ಪ್ರಗತಿಯ ದಾರಿದೀಪವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ್ ಒತ್ತಿ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿದ ಅವರು “ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆ, ಹಿಂಚಲನೆ ಅಲ್ಲಲ್ಲ. NEP ಎಲ್ಲರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ವರ್ಷಗಳ ಸಮಾಲೋಚನೆಯ ಫಲಿತಾಂಶವಾಗಿದೆ. ಕಾಂಗ್ರೆಸ್ ಪಕ್ಷ  ಸುಧಾರಣೆ-ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಎಂಬುದನ್ನು ಈ ಕ್ರಮ ಪ್ರತಿಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.

ರಾಜಕೀಯ ವಿಚಾರಗಳಿಗಿಂತ ವಿದ್ಯಾರ್ಥಿಗಳು ಮತ್ತು ಅವರ ಕಲ್ಯಾಣಕ್ಕೆ ಆದ್ಯತೆ ನೀಡುವ ಮಹತ್ವವನ್ನು ಪ್ರಧಾನ್ ಒತ್ತಿ ಹೇಳಿದರು. ಅವರು ಕ್ಷುಲ್ಲಕ ರಾಜಕೀಯವನ್ನು ಬಿಟ್ಟು, ಪ್ರಗತಿ ಮತ್ತು ಒಳಗೊಳ್ಳುವಿಕೆಯನ್ನು ಮೌಲ್ಯೀಕರಿಸುವ ನಾಯಕತ್ವಕ್ಕಾಗಿ ಅವರು ಒತ್ತಾಯಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎನ್‌ಇಪಿ ರದ್ದುಗೊಳಿಸುವ ನಿರ್ಧಾರವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಪ್ರಕಟಿಸಿದ್ದರು. ಸಂವಿಧಾನಕ್ಕೆ ಅನುಗುಣವಾಗಿ ಶಿಕ್ಷಣವನ್ನು ಒದಗಿಸುವ ತಮ್ಮ ಸರ್ಕಾರದ ಉದ್ದೇಶವನ್ನು ಒತ್ತಿ ಹೇಳಿದ ಸಿದ್ದರಾಮಯ್ಯ, ಬಿಜೆಪಿಯ “ಮನುವಾದ” (ಕೆಲವು ಜಾತಿ ಆಧಾರಿತ ಸಿದ್ಧಾಂತಗಳ ಉಲ್ಲೇಖ)ವನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಕಾಂಗ್ರೆಸ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಎನ್‌ಇಪಿ ಅಳವಡಿಕೆ ಪ್ರಾರಂಭವಾದಾಗ, ಅದನ್ನು ನಿಲ್ಲಿಸುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ ಚುನಾವಣಾ ಫಲಿತಾಂಶ ಪ್ರಕಟಗೊಂಡು ಸರ್ಕಾರ ರಚನೆಯಾಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ವರ್ಷದ ಮಧ್ಯದಲ್ಲಿ ಅಡ್ಡಿಯಾಗುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಎನ್‌ಇಪಿ ಅನುಷ್ಠಾನಕ್ಕೆ ಕರ್ನಾಟಕದ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಮತ್ತು ಶಿಕ್ಷಕರಿಂದ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಇತರ ರಾಜ್ಯಗಳಿಗಿಂತ ಎನ್‌ಇಪಿ ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಬಲಿಕೊಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಕರ್ನಾಟಕವು ಉನ್ನತ ಶಿಕ್ಷಣದಲ್ಲಿ ಎನ್ ಇಪಿ ಅನ್ನು ಜಾರಿಗೆ ತಂದ ಮೊದಲ ರಾಜ್ಯವಾಗಿದೆ. ಆಗ ಅದನ್ನು ಟೀಕಿಸಿದ್ದ ಕಾಂಗ್ರೆಸ್, ಇದು ಆರ್​​ಎಸ್​ಎಸ್​​ನ “ನಾಗ್ಪುರ ಶಿಕ್ಷಣ ನೀತಿ”ಎಂದಿದ್ದಾರೆ.

ಇದನ್ನೂ ಓದಿ:2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್​​ಇಪಿ ಇರಲ್ಲ; ಸಿಎಂ ಸಿದ್ದರಾಮಯ್ಯ ಘೋಷಣೆ

ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನ್ಇಪಿ ರದ್ದು ಮಾಡುವುದಾಗಿ ಹೇಳಿತ್ತು. ಇತ್ತೀಚಿನ ಬಜೆಟ್ ಘೋಷಣೆಯ ಸಮಯದಲ್ಲಿ ಸಿಎಂ ಎನ್ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು ತರುವುದಾಗಿ ಹೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ