AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುವನೇಶ್ವರದ ಐಎಚ್ಎಸ್ ಶಿಕ್ಷಣ ಸಂಸ್ಥೆಗೆ ಭೇಟಿ; ಇದು ಸ್ಮರಣೀಯ ದಿನ ಎಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಸಂಸ್ಥೆಯ ವಿದ್ಯಾರ್ಥಿಗಳು, ತರಬೇತುದಾರರು ಮತ್ತು ಅಧ್ಯಾಪಕರೊಂದಿಗೆ ಕಳೆದದ್ದು ಸ್ಮರಣೀಯ ದಿನ. ಹೆಚ್ಚು ಸಮಾನ ಮತ್ತು ಅಂತರ್ಗತ ಜಗತ್ತನ್ನು ನಿರ್ಮಿಸುವುದಕ್ಕಾಗಿ ಭುವನೇಶ್ವರ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ ಎಲ್ಲಾ ತರಬೇತುದಾರರು ಮತ್ತು ಅಧ್ಯಾಪಕರ ಬದ್ಧತೆಗೆ ನಾನು ನಮಿಸುತ್ತೇನೆ ಎಂದು ಧರ್ಮೇಂದ್ರ ಪ್ರಧಾನ್ ಟ್ವೀಟ್ ಮಾಡಿದ್ದಾರೆ.

ಭುವನೇಶ್ವರದ ಐಎಚ್ಎಸ್ ಶಿಕ್ಷಣ ಸಂಸ್ಥೆಗೆ ಭೇಟಿ; ಇದು ಸ್ಮರಣೀಯ ದಿನ ಎಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
ರಶ್ಮಿ ಕಲ್ಲಕಟ್ಟ
|

Updated on: Jul 08, 2023 | 8:55 PM

Share

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಭುವನೇಶ್ವರದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ (Institute of Health Sciences) ಎಂಬ ವಿಶೇಷಚೇತನರ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಸಚಿವರು, ಸಂಸ್ಥೆಯ ವಿದ್ಯಾರ್ಥಿಗಳು, ತರಬೇತುದಾರರು ಮತ್ತು ಅಧ್ಯಾಪಕರೊಂದಿಗೆ ಕಳೆದದ್ದು ಸ್ಮರಣೀಯ ದಿನ. ಹೆಚ್ಚು ಸಮಾನ ಮತ್ತು ಅಂತರ್ಗತ ಜಗತ್ತನ್ನು ನಿರ್ಮಿಸುವುದಕ್ಕಾಗಿ ಭುವನೇಶ್ವರ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸಸ್ ಎಲ್ಲಾ ತರಬೇತುದಾರರು ಮತ್ತು ಅಧ್ಯಾಪಕರ ಬದ್ಧತೆಗೆ ನಾನು ನಮಿಸುತ್ತೇನೆ ಎಂದು ಹೇಳಿದ್ದಾರೆ.

ಸಂಸ್ಥೆಯು ತನ್ನ ಶೈಕ್ಷಣಿಕ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಉಪಕ್ರಮಗಳ ಮೂಲಕ ಅಂಗವೈಕಲ್ಯವಿರುವವರ ಪುನರ್ವಸತಿಗಾಗಿ, ಅವರ ಅಭಿವೃದ್ಧಿಗೆ ಮತ್ತು ವಿಶೇಷ ಅಗತ್ಯತೆಗಳಿರುವ ಜನರಿಗೆ ಅವಕಾಶಗಳ ಅಡೆತಡೆಗಳನ್ನು ನಿವಾರಿಸಲು ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ.

ಯುಜಿಸಿ IHS ಗೆ ಸ್ವಾಯತ್ತ ಸ್ಥಾನಮಾನ ನೀಡುವ ಮೂಲಕ ವಿಶೇಷ ಚೇತನರ ಸಬಲೀಕರಣಕ್ಕಾಗಿ ಹೊಸ ಮಾರ್ಗಗಳ ಸೃಷ್ಟಿಗೆ ದಾರಿ ಮಾಡಿಕೊಟ್ಟಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಚೆನ್ನೈನ ಐಸಿಎಫ್‌ಗೆ ಭೇಟಿ ನೀಡಿ ವಂದೇ ಭಾರತ್ ರೈಲು ಪರಿಶೀಲಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಇನ್ನೊಂದು ಟ್ವೀಟ್ ನಲ್ಲಿ ಸಚಿವರು, ನಾನು ಭುವನೇಶ್ವರದಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್​​ಸ್ ಭೇಟಿ ನೀಡಿದ್ದೆ. ಈ ಸಂದರ್ಭದಲ್ಲಿ, ನಾನು ವಿಕಲಚೇತನ ಮಕ್ಕಳ ಮಾದರಿ ಕೇಂದ್ರ, ಸಮಗ್ರ ಪುನರ್ವಸತಿ ಕೇಂದ್ರ, ಕ್ಲಿನಿಕ್ ಬ್ಲಾಕ್, ಶೈಕ್ಷಣಿಕ ಬ್ಲಾಕ್, ಬಲ್ಮುಕುಂದ್ ರೆಹ್ಯಾಬ್ ಆಸ್ಪತ್ರೆಗೆ ಭೇಟಿ ನೀಡಿ ಕ್ಯಾಂಪಸ್‌ನಲ್ಲಿರುವ ವಿಕಲಚೇತನ ವಿದ್ಯಾರ್ಥಿಗಳು ಮತ್ತು ತರಬೇತುದಾರರನ್ನು ಭೇಟಿ ಮಾಡಿದ್ದೇನೆ. ಇಂದು ನನ್ನ ಪಾಲಿಗೆ ಸ್ಮರಣೀಯ ದಿನ. ಶಿಕ್ಷಣ ಸಂಸ್ಥೆಗಳ ಅನುಕೂಲಕರ ಕಲಿಕೆಯ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ವಿವಿಧ ಚಿಕಿತ್ಸೆಗಳು ಮತ್ತು ಚಿಕಿತ್ಸೆಗಳೊಂದಿಗೆ ಸಮಾಜದ ಮುಖ್ಯವಾಹಿನಿಗೆ ವಿಶೇಷಚೇತನರನ್ನು ಸೇರಿಸುವ ಪ್ರಯತ್ನಗಳು ಹೆಚ್ಚು ಶ್ಲಾಘನೀಯ ಎಂದು  ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್