AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

2019 ರ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಡೀಸೆಲ್​ ಮಾರಾಟದಲ್ಲಿ ಸುಮಾರು 1 ಕೋಟಿ ಟನ್​ ಮತ್ತು ಪೆಟ್ರೋಲ್​ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್​ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಮೇಲೆ ವಿಧಿಸುವ ಅಬಕಾರಿ ಸುಂಕ ಏರಿಸಿದ ಪರಿಣಾಮ ಲಾಭಾಂಶದಲ್ಲಿ ಭಾರೀ ಏರಿಕೆ ಕಂಡಿದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!
ಸಾಂದರ್ಭಿಕ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Jan 18, 2021 | 5:02 PM

Share

ದೆಹಲಿ: ಕೊರೊನಾ ಆರ್ಭಟದಿಂದಾಗಿ 2020ರಲ್ಲಿ ಜನಜೀವನ ಸಂಪೂರ್ಣ ಏರುಪೇರಾಗಿತ್ತು. ವಾಣಿಜ್ಯ ಚಟುವಟಿಕೆ, ವಾಹನ ಸಂಚಾರ ಎಲ್ಲವೂ ಸ್ತಬ್ಧವಾಗಿತ್ತು. ವಿಪರ್ಯಾಸವೆಂದರೆ ಆರೆಂಟು ತಿಂಗಳು ಕಾಲ ವಾಹನಗಳು ರಸ್ತೆಗಿಳಿಯದಿದ್ದರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್​, ಡೀಸೆಲ್​ ಮಾರಾಟದಿಂದ ಹೆಚ್ಚುವರಿಯಾಗಿ ₹ 63,000 ಕೋಟಿ ಆದಾಯ ಗಳಿಸಿರುವುದಾಗಿ ತಿಳಿಸಿದೆ.

ಮಾರಾಟ ಮಾಡಿದ ತೈಲ ಪ್ರಮಾಣ ಕಡಿಮೆಯಿದ್ದರೂ ಹೀಗೆ ಭರ್ಜರಿ ಲಾಭ ಗಳಿಸಲು ಕಾರಣ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಏರಿಸಿರುವುದು. 2020ನೇ ಸಾಲಿನ ಏಪ್ರಿಲ್​-ನವೆಂಬರ್​ ಅವಧಿಯಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಅಬಕಾರಿ ಸುಂಕದಿಂದ ₹ 1,96,342 ಕೋಟಿ ಆದಾಯ ಗಳಿಸಿದೆ. ಆದರೆ, 2019ರ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಈ ಆದಾಯ ₹ 1,32,899 ಕೋಟಿ ಇತ್ತು ಎಂದು ಕಂಟ್ರೋಲರ್​ ಜನರಲ್ ಆಫ್​ ಅಕೌಂಟ್ಸ್​ (ಸಿಜಿಎ) ಅಂಕಿಅಂಶಗಳ ಆಧಾರಿತ ಮಾಹಿತಿ ನೀಡಿದೆ.

ಕೊರೊನಾ ಲಾಕ್​ಡೌನ್​ ಇದ್ದ ಕಾರಣ ವಾಹನ ಸಂಚಾರ ಕಡಿಮೆಯಾಗಿ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಡೀಸೆಲ್​ ಮಾರಾಟದಲ್ಲಿ ಸುಮಾರು 1 ಕೋಟಿ ಟನ್​ನಷ್ಟು ಕುಸಿತ ಮತ್ತು ಪೆಟ್ರೋಲ್​ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್​ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಮೇಲೆ ವಿಧಿಸುವ ಅಬಕಾರಿ ಸುಂಕ ಏರಿಸಿದ ಪರಿಣಾಮ ಲಾಭಾಂಶದಲ್ಲಿ ಭಾರೀ ಏರಿಕೆ ಕಂಡಿದೆ.

ಕಳೆದ ವರ್ಷ ಅಂತಾರಾಷ್ಟ್ರೀಯ ಕಚ್ಚಾತೈಲ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ಆ ಸಂದರ್ಭವನ್ನು ಉಪಯೋಗಿಸಿಕೊಂಡ ಕೇಂದ್ರ ಸರ್ಕಾರ ಎರಡು ಸಲ ಪೆಟ್ರೋಲ್​, ಡೀಸೆಲ್​ ಮೇಲಿನ ಸುಂಕ ಏರಿಸಿತ್ತು. ಪ್ರತಿ ಲೀಟರ್​ ಪೆಟ್ರೋಲ್​ಗೆ ₹ 13 ಮತ್ತು ಪ್ರತಿ ಲೀಟರ್​ ಡೀಸೆಲ್​ಗೆ ₹ 16ರಷ್ಟು ಏರಿಕೆಯಾಗಿತ್ತು. ತೈಲೋತ್ಪನ್ನಗಳು ಇನ್ನೂ ಜಿಎಸ್​ಟಿ ವ್ಯಾಪ್ತಿಯಲ್ಲಿ ಸೇರದ ಕಾರಣ ಅವುಗಳ ಮೇಲಿನ ಅಬಕಾರಿ ಸುಂಕ ಸಂಪೂರ್ಣವಾಗಿ ಕೇಂದ್ರ ಸರ್ಕಾರಕ್ಕೆ ಮತ್ತು ವ್ಯಾಟ್​ ತೆರಿಗೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸೇರುತ್ತದೆ.

ಒಂದುವೇಳೆ ಲಾಕ್​ಡೌನ್​ ಇಲ್ಲದೇ ವಾಹನ ಸಂಚಾರ ಯಥಾಸ್ಥಿತಿಯಲ್ಲಿ ಸಾಗಿದ್ದರೆ ಪೆಟ್ರೋಲ್​ ಮತ್ತು ಡೀಸೆಲ್​ ಮಾರಾಟದಿಂದ ಕೇಂದ್ರ ಸರ್ಕಾರ ಅತ್ಯಂತ ದೊಡ್ಡ ಪ್ರಮಾಣದ ಸುಂಕ ಸಂಗ್ರಹಿಸಿ ಲಾಭ ಗಳಿಸುತ್ತಿತ್ತು ಎಂಬ ಲೆಕ್ಕಾಚಾರದ ಮಾತುಗಳೂ ಈಗ ಕೇಳಿಬರುತ್ತಿವೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ