AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

2019 ರ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಡೀಸೆಲ್​ ಮಾರಾಟದಲ್ಲಿ ಸುಮಾರು 1 ಕೋಟಿ ಟನ್​ ಮತ್ತು ಪೆಟ್ರೋಲ್​ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್​ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಮೇಲೆ ವಿಧಿಸುವ ಅಬಕಾರಿ ಸುಂಕ ಏರಿಸಿದ ಪರಿಣಾಮ ಲಾಭಾಂಶದಲ್ಲಿ ಭಾರೀ ಏರಿಕೆ ಕಂಡಿದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Jan 18, 2021 | 5:02 PM

ದೆಹಲಿ: ಕೊರೊನಾ ಆರ್ಭಟದಿಂದಾಗಿ 2020ರಲ್ಲಿ ಜನಜೀವನ ಸಂಪೂರ್ಣ ಏರುಪೇರಾಗಿತ್ತು. ವಾಣಿಜ್ಯ ಚಟುವಟಿಕೆ, ವಾಹನ ಸಂಚಾರ ಎಲ್ಲವೂ ಸ್ತಬ್ಧವಾಗಿತ್ತು. ವಿಪರ್ಯಾಸವೆಂದರೆ ಆರೆಂಟು ತಿಂಗಳು ಕಾಲ ವಾಹನಗಳು ರಸ್ತೆಗಿಳಿಯದಿದ್ದರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್​, ಡೀಸೆಲ್​ ಮಾರಾಟದಿಂದ ಹೆಚ್ಚುವರಿಯಾಗಿ ₹ 63,000 ಕೋಟಿ ಆದಾಯ ಗಳಿಸಿರುವುದಾಗಿ ತಿಳಿಸಿದೆ.

ಮಾರಾಟ ಮಾಡಿದ ತೈಲ ಪ್ರಮಾಣ ಕಡಿಮೆಯಿದ್ದರೂ ಹೀಗೆ ಭರ್ಜರಿ ಲಾಭ ಗಳಿಸಲು ಕಾರಣ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಏರಿಸಿರುವುದು. 2020ನೇ ಸಾಲಿನ ಏಪ್ರಿಲ್​-ನವೆಂಬರ್​ ಅವಧಿಯಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಅಬಕಾರಿ ಸುಂಕದಿಂದ ₹ 1,96,342 ಕೋಟಿ ಆದಾಯ ಗಳಿಸಿದೆ. ಆದರೆ, 2019ರ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಈ ಆದಾಯ ₹ 1,32,899 ಕೋಟಿ ಇತ್ತು ಎಂದು ಕಂಟ್ರೋಲರ್​ ಜನರಲ್ ಆಫ್​ ಅಕೌಂಟ್ಸ್​ (ಸಿಜಿಎ) ಅಂಕಿಅಂಶಗಳ ಆಧಾರಿತ ಮಾಹಿತಿ ನೀಡಿದೆ.

ಕೊರೊನಾ ಲಾಕ್​ಡೌನ್​ ಇದ್ದ ಕಾರಣ ವಾಹನ ಸಂಚಾರ ಕಡಿಮೆಯಾಗಿ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಡೀಸೆಲ್​ ಮಾರಾಟದಲ್ಲಿ ಸುಮಾರು 1 ಕೋಟಿ ಟನ್​ನಷ್ಟು ಕುಸಿತ ಮತ್ತು ಪೆಟ್ರೋಲ್​ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್​ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಮೇಲೆ ವಿಧಿಸುವ ಅಬಕಾರಿ ಸುಂಕ ಏರಿಸಿದ ಪರಿಣಾಮ ಲಾಭಾಂಶದಲ್ಲಿ ಭಾರೀ ಏರಿಕೆ ಕಂಡಿದೆ.

ಕಳೆದ ವರ್ಷ ಅಂತಾರಾಷ್ಟ್ರೀಯ ಕಚ್ಚಾತೈಲ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ಆ ಸಂದರ್ಭವನ್ನು ಉಪಯೋಗಿಸಿಕೊಂಡ ಕೇಂದ್ರ ಸರ್ಕಾರ ಎರಡು ಸಲ ಪೆಟ್ರೋಲ್​, ಡೀಸೆಲ್​ ಮೇಲಿನ ಸುಂಕ ಏರಿಸಿತ್ತು. ಪ್ರತಿ ಲೀಟರ್​ ಪೆಟ್ರೋಲ್​ಗೆ ₹ 13 ಮತ್ತು ಪ್ರತಿ ಲೀಟರ್​ ಡೀಸೆಲ್​ಗೆ ₹ 16ರಷ್ಟು ಏರಿಕೆಯಾಗಿತ್ತು. ತೈಲೋತ್ಪನ್ನಗಳು ಇನ್ನೂ ಜಿಎಸ್​ಟಿ ವ್ಯಾಪ್ತಿಯಲ್ಲಿ ಸೇರದ ಕಾರಣ ಅವುಗಳ ಮೇಲಿನ ಅಬಕಾರಿ ಸುಂಕ ಸಂಪೂರ್ಣವಾಗಿ ಕೇಂದ್ರ ಸರ್ಕಾರಕ್ಕೆ ಮತ್ತು ವ್ಯಾಟ್​ ತೆರಿಗೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸೇರುತ್ತದೆ.

ಒಂದುವೇಳೆ ಲಾಕ್​ಡೌನ್​ ಇಲ್ಲದೇ ವಾಹನ ಸಂಚಾರ ಯಥಾಸ್ಥಿತಿಯಲ್ಲಿ ಸಾಗಿದ್ದರೆ ಪೆಟ್ರೋಲ್​ ಮತ್ತು ಡೀಸೆಲ್​ ಮಾರಾಟದಿಂದ ಕೇಂದ್ರ ಸರ್ಕಾರ ಅತ್ಯಂತ ದೊಡ್ಡ ಪ್ರಮಾಣದ ಸುಂಕ ಸಂಗ್ರಹಿಸಿ ಲಾಭ ಗಳಿಸುತ್ತಿತ್ತು ಎಂಬ ಲೆಕ್ಕಾಚಾರದ ಮಾತುಗಳೂ ಈಗ ಕೇಳಿಬರುತ್ತಿವೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ