AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!

2019 ರ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಡೀಸೆಲ್​ ಮಾರಾಟದಲ್ಲಿ ಸುಮಾರು 1 ಕೋಟಿ ಟನ್​ ಮತ್ತು ಪೆಟ್ರೋಲ್​ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್​ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಮೇಲೆ ವಿಧಿಸುವ ಅಬಕಾರಿ ಸುಂಕ ಏರಿಸಿದ ಪರಿಣಾಮ ಲಾಭಾಂಶದಲ್ಲಿ ಭಾರೀ ಏರಿಕೆ ಕಂಡಿದೆ.

ಜನರಿಗೆ ಬರೆ.. ಆದರೆ ಪೆಟ್ರೋಲ್, ಡೀಸೆಲ್ ಮಾರಾಟದಿಂದ ಕೇಂದ್ರಕ್ಕೆ ಭರ್ಜರಿ ಲಾಭ!
ಸಾಂದರ್ಭಿಕ ಚಿತ್ರ
Skanda
| Updated By: ಸಾಧು ಶ್ರೀನಾಥ್​|

Updated on: Jan 18, 2021 | 5:02 PM

Share

ದೆಹಲಿ: ಕೊರೊನಾ ಆರ್ಭಟದಿಂದಾಗಿ 2020ರಲ್ಲಿ ಜನಜೀವನ ಸಂಪೂರ್ಣ ಏರುಪೇರಾಗಿತ್ತು. ವಾಣಿಜ್ಯ ಚಟುವಟಿಕೆ, ವಾಹನ ಸಂಚಾರ ಎಲ್ಲವೂ ಸ್ತಬ್ಧವಾಗಿತ್ತು. ವಿಪರ್ಯಾಸವೆಂದರೆ ಆರೆಂಟು ತಿಂಗಳು ಕಾಲ ವಾಹನಗಳು ರಸ್ತೆಗಿಳಿಯದಿದ್ದರೂ ಕೇಂದ್ರ ಸರ್ಕಾರ ಮಾತ್ರ ಪೆಟ್ರೋಲ್​, ಡೀಸೆಲ್​ ಮಾರಾಟದಿಂದ ಹೆಚ್ಚುವರಿಯಾಗಿ ₹ 63,000 ಕೋಟಿ ಆದಾಯ ಗಳಿಸಿರುವುದಾಗಿ ತಿಳಿಸಿದೆ.

ಮಾರಾಟ ಮಾಡಿದ ತೈಲ ಪ್ರಮಾಣ ಕಡಿಮೆಯಿದ್ದರೂ ಹೀಗೆ ಭರ್ಜರಿ ಲಾಭ ಗಳಿಸಲು ಕಾರಣ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಏರಿಸಿರುವುದು. 2020ನೇ ಸಾಲಿನ ಏಪ್ರಿಲ್​-ನವೆಂಬರ್​ ಅವಧಿಯಲ್ಲಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಅಬಕಾರಿ ಸುಂಕದಿಂದ ₹ 1,96,342 ಕೋಟಿ ಆದಾಯ ಗಳಿಸಿದೆ. ಆದರೆ, 2019ರ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಈ ಆದಾಯ ₹ 1,32,899 ಕೋಟಿ ಇತ್ತು ಎಂದು ಕಂಟ್ರೋಲರ್​ ಜನರಲ್ ಆಫ್​ ಅಕೌಂಟ್ಸ್​ (ಸಿಜಿಎ) ಅಂಕಿಅಂಶಗಳ ಆಧಾರಿತ ಮಾಹಿತಿ ನೀಡಿದೆ.

ಕೊರೊನಾ ಲಾಕ್​ಡೌನ್​ ಇದ್ದ ಕಾರಣ ವಾಹನ ಸಂಚಾರ ಕಡಿಮೆಯಾಗಿ ಏಪ್ರಿಲ್-ನವೆಂಬರ್​ ಅವಧಿಯಲ್ಲಿ ಡೀಸೆಲ್​ ಮಾರಾಟದಲ್ಲಿ ಸುಮಾರು 1 ಕೋಟಿ ಟನ್​ನಷ್ಟು ಕುಸಿತ ಮತ್ತು ಪೆಟ್ರೋಲ್​ ಮಾರಾಟದಲ್ಲಿ ಸುಮಾರು 30 ಲಕ್ಷ ಟನ್​ ಕುಸಿತವಾಗಿತ್ತು. ಇಷ್ಟಾಗ್ಯೂ, ಕೇಂದ್ರ ಸರ್ಕಾರ ಪೆಟ್ರೋಲ್​, ಡೀಸೆಲ್​ ಮೇಲೆ ವಿಧಿಸುವ ಅಬಕಾರಿ ಸುಂಕ ಏರಿಸಿದ ಪರಿಣಾಮ ಲಾಭಾಂಶದಲ್ಲಿ ಭಾರೀ ಏರಿಕೆ ಕಂಡಿದೆ.

ಕಳೆದ ವರ್ಷ ಅಂತಾರಾಷ್ಟ್ರೀಯ ಕಚ್ಚಾತೈಲ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾದಾಗ ಆ ಸಂದರ್ಭವನ್ನು ಉಪಯೋಗಿಸಿಕೊಂಡ ಕೇಂದ್ರ ಸರ್ಕಾರ ಎರಡು ಸಲ ಪೆಟ್ರೋಲ್​, ಡೀಸೆಲ್​ ಮೇಲಿನ ಸುಂಕ ಏರಿಸಿತ್ತು. ಪ್ರತಿ ಲೀಟರ್​ ಪೆಟ್ರೋಲ್​ಗೆ ₹ 13 ಮತ್ತು ಪ್ರತಿ ಲೀಟರ್​ ಡೀಸೆಲ್​ಗೆ ₹ 16ರಷ್ಟು ಏರಿಕೆಯಾಗಿತ್ತು. ತೈಲೋತ್ಪನ್ನಗಳು ಇನ್ನೂ ಜಿಎಸ್​ಟಿ ವ್ಯಾಪ್ತಿಯಲ್ಲಿ ಸೇರದ ಕಾರಣ ಅವುಗಳ ಮೇಲಿನ ಅಬಕಾರಿ ಸುಂಕ ಸಂಪೂರ್ಣವಾಗಿ ಕೇಂದ್ರ ಸರ್ಕಾರಕ್ಕೆ ಮತ್ತು ವ್ಯಾಟ್​ ತೆರಿಗೆ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸೇರುತ್ತದೆ.

ಒಂದುವೇಳೆ ಲಾಕ್​ಡೌನ್​ ಇಲ್ಲದೇ ವಾಹನ ಸಂಚಾರ ಯಥಾಸ್ಥಿತಿಯಲ್ಲಿ ಸಾಗಿದ್ದರೆ ಪೆಟ್ರೋಲ್​ ಮತ್ತು ಡೀಸೆಲ್​ ಮಾರಾಟದಿಂದ ಕೇಂದ್ರ ಸರ್ಕಾರ ಅತ್ಯಂತ ದೊಡ್ಡ ಪ್ರಮಾಣದ ಸುಂಕ ಸಂಗ್ರಹಿಸಿ ಲಾಭ ಗಳಿಸುತ್ತಿತ್ತು ಎಂಬ ಲೆಕ್ಕಾಚಾರದ ಮಾತುಗಳೂ ಈಗ ಕೇಳಿಬರುತ್ತಿವೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್