AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಕ್ಕೆ ನ.26ರವರೆಗೆ ಸಮಯಕೊಟ್ಟ ರೈತ ಸಂಘಟನೆಗಳು; ಗಡುವು ಯಾವುದಕ್ಕೆಂದು ಸ್ಪಷ್ಟನೆಯಿಲ್ಲ !

ರಾಕೇಶ್​ ಟಿಕಾಯತ್​ ಟ್ವೀಟ್​​ನಲ್ಲಿ ನವೆಂಬರ್​ 26ರವರೆಗೆ ಕೇಂದ್ರ ಸರ್ಕಾರಕ್ಕೆ ಸಮಯವಿದೆ ಎಂದು ಹೇಳಿದ್ದಾರೆ. ಆದರೆ ಯಾವುದಕ್ಕೆ ಗಡುವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಕೇಂದ್ರ ಸರ್ಕಾರಕ್ಕೆ ನ.26ರವರೆಗೆ ಸಮಯಕೊಟ್ಟ ರೈತ ಸಂಘಟನೆಗಳು; ಗಡುವು ಯಾವುದಕ್ಕೆಂದು ಸ್ಪಷ್ಟನೆಯಿಲ್ಲ !
ರಾಕೇಶ್​ ಟಿಕಾಯತ್
TV9 Web
| Edited By: |

Updated on: Nov 01, 2021 | 2:56 PM

Share

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ (Farm Laws) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಗಡಿ ಭಾಗಗಳಿಂದ ಎಬ್ಬಿಸಿ ಕಳಿಸಿದರೆ ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುತ್ತೇವೆ ಎಂದು ಇತ್ತೀಚೆಗೆಷ್ಟೇ ಎಚ್ಚರಿಕೆ ನೀಡಿರುವ ರೈತ ನಾಯಕ ರಾಕೇಶ್​ ಟಿಕಾಯತ್ (Rakesh Tikait)​ ಇದೀಗ ಕೇಂದ್ರ ಸರ್ಕಾರಕ್ಕೆ ನವೆಂಬರ್​ 26ರವರೆಗೆ ಗಡುವು ನೀಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ನವೆಂಬರ್​ 26ರವರೆಗೆ ಸಮಯ ಕೊಡುತ್ತೇವೆ, ಅದಾದ ಮೇಲೆ ರೈತರು ದೆಹಲಿಯ ಪ್ರತಿಭಟನಾ ಸ್ಥಳಗಳನ್ನು ತಲುಪುತ್ತಾರೆ ಮತ್ತು ಆಂದೋಲನವನ್ನು ಇನ್ನಷ್ಟು ಬಲಪಡಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್​ ಮಾಡಿರುವ ರಾಕೇಶ್ ಟಿಕಾಯತ್​, ಸರ್ಕಾರಕ್ಕೆ ನವೆಂಬರ್​ 26ರವರೆಗೆ ಸಮಯವಿದೆ. ನವೆಂಬರ್​ 27ರಿಂದ ಹಳ್ಳಿಹಳ್ಳಿಗಳಿಂದ ರೈತರು ಟ್ರ್ಯಾಕ್ಟರ್ ತೆಗೆದುಕೊಂಡು ದೆಹಲಿಯ ಪ್ರತಿಭಟನಾ ಸ್ಥಳಗಳಿಗೆ ಬರುತ್ತಾರೆ.  ರೈತರ ಸಂಖ್ಯೆ ಹೆಚ್ಚುತ್ತದೆ ಮತ್ತು ಕೃಷಿ ಕಾಯ್ದೆಗಳ ವಿರುದ್ಧದ ಆಂದೋಲನ ಇನ್ನಷ್ಟು ತೀವ್ರವಾಗುತ್ತದೆ ಎಂದು ತಿಳಿಸಿದ್ದಾರೆ.

ರಾಕೇಶ್​ ಟಿಕಾಯತ್​ ಟ್ವೀಟ್​​ನಲ್ಲಿ ನವೆಂಬರ್​ 26ರವರೆಗೆ ಕೇಂದ್ರ ಸರ್ಕಾರಕ್ಕೆ ಸಮಯವಿದೆ ಎಂದು ಹೇಳಿದ್ದಾರೆ. ಆದರೆ ಯಾವುದಕ್ಕೆ ಗಡುವು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರಕ್ಕೆ ಕೊಟ್ಟ ಗಡುವೋ? ಅಥವಾ ರೈತರನ್ನು ಮತ್ತೊಂದು ಸುತ್ತಿನ ಮಾತುಕತೆಗೆ ಆಹ್ವಾನಿಸಲು ಕೊಟ್ಟ ಸಮಯವೋ ಎಂಬಿತ್ಯಾದಿ ಗೊಂದಲಗಳು ಬಾಕಿ ಇವೆ.  ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ನವೆಂಬರ್​ನಿಂದ ದೆಹಲಿಯ ಸುತ್ತಲಿನ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ 11 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಒಂದು ಸೂಕ್ತ ನಿರ್ಣಯ ಹೊರಬಿದ್ದಿಲ್ಲ. ಹೀಗಾಗಿ ಇನ್ನೂ ರೈತರು ಪ್ರತಿಭಟನೆ ಹಿಂಪಡೆದಿಲ್ಲ.

ಇದನ್ನೂ ಓದಿ: T20 World Cup 2021: ಕೊಹ್ಲಿ ನಿರ್ಧಾರಗಳೇ ಕಾರಣ! ಟೀಂ ಇಂಡಿಯಾ ಸೋಲಿನ ಪೋಸ್ಟ್ ಮಾರ್ಟಂ ಮಾಡಿದ ಗಂಭೀರ್

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!