AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರಕ್ಕೆ ನ.26ರವರೆಗೆ ಸಮಯಕೊಟ್ಟ ರೈತ ಸಂಘಟನೆಗಳು; ಗಡುವು ಯಾವುದಕ್ಕೆಂದು ಸ್ಪಷ್ಟನೆಯಿಲ್ಲ !

ರಾಕೇಶ್​ ಟಿಕಾಯತ್​ ಟ್ವೀಟ್​​ನಲ್ಲಿ ನವೆಂಬರ್​ 26ರವರೆಗೆ ಕೇಂದ್ರ ಸರ್ಕಾರಕ್ಕೆ ಸಮಯವಿದೆ ಎಂದು ಹೇಳಿದ್ದಾರೆ. ಆದರೆ ಯಾವುದಕ್ಕೆ ಗಡುವು ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಕೇಂದ್ರ ಸರ್ಕಾರಕ್ಕೆ ನ.26ರವರೆಗೆ ಸಮಯಕೊಟ್ಟ ರೈತ ಸಂಘಟನೆಗಳು; ಗಡುವು ಯಾವುದಕ್ಕೆಂದು ಸ್ಪಷ್ಟನೆಯಿಲ್ಲ !
ರಾಕೇಶ್​ ಟಿಕಾಯತ್
TV9 Web
| Edited By: |

Updated on: Nov 01, 2021 | 2:56 PM

Share

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ (Farm Laws) ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಗಡಿ ಭಾಗಗಳಿಂದ ಎಬ್ಬಿಸಿ ಕಳಿಸಿದರೆ ದೇಶಾದ್ಯಂತ ಸರ್ಕಾರಿ ಕಚೇರಿಗಳನ್ನು ಗಲ್ಲ ಮಂಡಿಗಳನ್ನಾಗಿ ಪರಿವರ್ತಿಸುತ್ತೇವೆ ಎಂದು ಇತ್ತೀಚೆಗೆಷ್ಟೇ ಎಚ್ಚರಿಕೆ ನೀಡಿರುವ ರೈತ ನಾಯಕ ರಾಕೇಶ್​ ಟಿಕಾಯತ್ (Rakesh Tikait)​ ಇದೀಗ ಕೇಂದ್ರ ಸರ್ಕಾರಕ್ಕೆ ನವೆಂಬರ್​ 26ರವರೆಗೆ ಗಡುವು ನೀಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ನವೆಂಬರ್​ 26ರವರೆಗೆ ಸಮಯ ಕೊಡುತ್ತೇವೆ, ಅದಾದ ಮೇಲೆ ರೈತರು ದೆಹಲಿಯ ಪ್ರತಿಭಟನಾ ಸ್ಥಳಗಳನ್ನು ತಲುಪುತ್ತಾರೆ ಮತ್ತು ಆಂದೋಲನವನ್ನು ಇನ್ನಷ್ಟು ಬಲಪಡಿಸುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಟ್ವೀಟ್​ ಮಾಡಿರುವ ರಾಕೇಶ್ ಟಿಕಾಯತ್​, ಸರ್ಕಾರಕ್ಕೆ ನವೆಂಬರ್​ 26ರವರೆಗೆ ಸಮಯವಿದೆ. ನವೆಂಬರ್​ 27ರಿಂದ ಹಳ್ಳಿಹಳ್ಳಿಗಳಿಂದ ರೈತರು ಟ್ರ್ಯಾಕ್ಟರ್ ತೆಗೆದುಕೊಂಡು ದೆಹಲಿಯ ಪ್ರತಿಭಟನಾ ಸ್ಥಳಗಳಿಗೆ ಬರುತ್ತಾರೆ.  ರೈತರ ಸಂಖ್ಯೆ ಹೆಚ್ಚುತ್ತದೆ ಮತ್ತು ಕೃಷಿ ಕಾಯ್ದೆಗಳ ವಿರುದ್ಧದ ಆಂದೋಲನ ಇನ್ನಷ್ಟು ತೀವ್ರವಾಗುತ್ತದೆ ಎಂದು ತಿಳಿಸಿದ್ದಾರೆ.

ರಾಕೇಶ್​ ಟಿಕಾಯತ್​ ಟ್ವೀಟ್​​ನಲ್ಲಿ ನವೆಂಬರ್​ 26ರವರೆಗೆ ಕೇಂದ್ರ ಸರ್ಕಾರಕ್ಕೆ ಸಮಯವಿದೆ ಎಂದು ಹೇಳಿದ್ದಾರೆ. ಆದರೆ ಯಾವುದಕ್ಕೆ ಗಡುವು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರಕ್ಕೆ ಕೊಟ್ಟ ಗಡುವೋ? ಅಥವಾ ರೈತರನ್ನು ಮತ್ತೊಂದು ಸುತ್ತಿನ ಮಾತುಕತೆಗೆ ಆಹ್ವಾನಿಸಲು ಕೊಟ್ಟ ಸಮಯವೋ ಎಂಬಿತ್ಯಾದಿ ಗೊಂದಲಗಳು ಬಾಕಿ ಇವೆ.  ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ನವೆಂಬರ್​ನಿಂದ ದೆಹಲಿಯ ಸುತ್ತಲಿನ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ 11 ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ ಒಂದು ಸೂಕ್ತ ನಿರ್ಣಯ ಹೊರಬಿದ್ದಿಲ್ಲ. ಹೀಗಾಗಿ ಇನ್ನೂ ರೈತರು ಪ್ರತಿಭಟನೆ ಹಿಂಪಡೆದಿಲ್ಲ.

ಇದನ್ನೂ ಓದಿ: T20 World Cup 2021: ಕೊಹ್ಲಿ ನಿರ್ಧಾರಗಳೇ ಕಾರಣ! ಟೀಂ ಇಂಡಿಯಾ ಸೋಲಿನ ಪೋಸ್ಟ್ ಮಾರ್ಟಂ ಮಾಡಿದ ಗಂಭೀರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್