AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ 2ನೇ ಡೋಸ್​ಗೂ-3ನೇ ಡೋಸ್​​ಗೂ ನಡುವಿನ ಅವಧಿ 6ತಿಂಗಳಿಗೆ ಇಳಿಯುವ ಸಾಧ್ಯತೆ; ಶೀಘ್ರವೇ ಕೇಂದ್ರದಿಂದ ನಿರ್ಧಾರ

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿರುವ ಬೆನ್ನಲ್ಲೇ ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ಕೊರೊನಾ ಲಸಿಕೆ 2ನೇ ಡೋಸ್​ಗೂ-3ನೇ ಡೋಸ್​​ಗೂ ನಡುವಿನ ಅವಧಿ 6ತಿಂಗಳಿಗೆ ಇಳಿಯುವ ಸಾಧ್ಯತೆ; ಶೀಘ್ರವೇ ಕೇಂದ್ರದಿಂದ ನಿರ್ಧಾರ
ಲಸಿಕೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Praveen Sahu

Updated on:Apr 28, 2022 | 12:53 PM

ಸದ್ಯ ದೇಶದ ಜನರಿಗೆ ಕೊರೊನಾ ಲಸಿಕೆ ಮೂರನೇ ಡೋಸ್ ನೀಡುವ ಅಭಿಯಾನ ಶುರುವಾಗಿದೆ. ಎರಡನೇ ಡೋಸ್ ತೆಗೆದುಕೊಂಡು 9 ತಿಂಗಳು ಪೂರ್ಣಗೊಂಡ, 18 ವರ್ಷ ಮೇಲ್ಪಟ್ಟ ಎಲ್ಲರೂ ಕೊರೊನಾ ಲಸಿಕೆ ಮೂರನೇ ಡೋಸ್ ತೆಗೆದುಕೊಳ್ಳಲು ಅರ್ಹರು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೆ ಈ ಎರಡನೇ ಡೋಸ್ ಮತ್ತು ಮೂರನೇ ಡೋಸ್​ ನಡುವಿನ ಸಮಯದ ಅಂತರವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದಾಗಿ ಪಿಟಿಐ ವರದಿ ಮಾಡಿದೆ. ಈ ಅವಧಿ 9 ತಿಂಗಳು ಇದ್ದಿದ್ದನ್ನು 6 ತಿಂಗಳಿಗೆ ಇಳಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದ್ದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಎರಡನೇ ಡೋಸ್​ ಮತ್ತು 3ನೇ ಡೋಸ್​ ನಡುವಿನ ಅಂತರವನ್ನು 6ತಿಂಗಳಿಗೆ ಇಳಿಸುವ ನಿಟ್ಟಿನಲ್ಲಿ ಸಮಗ್ರವಾಗಿ ಚರ್ಚಿಸಲು, ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (NTAGEI) ಏಪ್ರಿಲ್​ 29ರಂದು ಸಭೆ ನಡೆಸಲಿದೆ ಎಂದು ಹೇಳಲಾಗಿದೆ.

ದೇಶದಲ್ಲಿ ಕೊರೊನಾ ವೈರಸ್​ ಹೆಚ್ಚುತ್ತಿರುವ ಬೆನ್ನಲ್ಲೇ ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಕಳೆದ ಎರಡು ವಾರಗಳಿಂದ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್​​ಗಳನ್ನು ಮರೆಯಬಾರದು. ಹಾಗೇ, ಸದ್ಯದ ಮಟ್ಟಿಗೆ ಕೊರೊನಾದಿಂದ ಪಾರು ಮಾಡುವ ಅತ್ಯಂತ ದೊಡ್ಡ ರಕ್ಷಣಾ ಸಾಧನವೆಂದರೆ ಅದು ಲಸಿಕೆ ಮಾತ್ರ ಎಂದು ಹೇಳಿದ್ದರು. ಸದ್ಯ ದೇಶದಲ್ಲಿ 47,36,567  ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ 74,47,184 ಮಂದಿ, 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 1,45,45,595 ಜನರು ಈಗಾಗಲೇ ಕೊರೊನಾ ಲಸಿಕೆ ಬೂಸ್ಟರ್ ಡೋಸ್ ಪಡೆದಿದ್ದಾರೆ. ಹಾಗೇ, ಮಂಗಳವಾರದವರೆಗೆ 18-59 ವರ್ಷದವರೆಗಿನ 5,17,547 ಜನರಿಗೆ ಮೂರನೇ ಡೋಸ್​ ಲಸಿಕೆ ನೀಡಿಕೆಯಾಗಿದೆ.

ಇಲ್ಲಿಯವರೆಗೆ ಎರಡನೇ ಡೋಸ್ ಪಡೆದು 9 ತಿಂಗಳು ಕಳೆದವರಿಗೆ ಮೂರನೇ ಡೋಸ್ ನೀಡಲಾಗುತ್ತಿತ್ತು. ಆದರೆ ಅಂತಾರಾಷ್ಟ್ರೀಯವಾಗಿ ಮತ್ತು ಸ್ಥಳೀಯವಾಗಿ ನಡೆಸಿದ ಕೆಲವು ಅಧ್ಯಯನಗಳು ಮತ್ತು ವೈಜ್ಞಾನಿಕ ಪುರಾವೆಗಳನ್ನು ಆಧರಿಸಿ, ಕೊವಿಡ್​ 19 ಎರಡನೇ ಡೋಸ್​​ಗಳೂ-ಮೂರನೇ ಡೋಸ್​ಗಳು ನಡುವಿನ ಅಂತರ ಕಡಿಮೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. NTAGI  ಶುಕ್ರವಾರ ಈ ಬಗ್ಗೆ ಸಭೆ ನಡೆಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ಪಿಟಿಐ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ
Image
World Day of Safety and Health at Work 2022: ಕೆಲಸದ ಸ್ಥಳದಲ್ಲಿ ಸುರಕ್ಷತೆ ಮತ್ತು ಆರೋಗ್ಯದ ಅಂತರಾಷ್ಟ್ರೀಯ ದಿನ ಇಂದು; ಏನಿದರ ಮಹತ್ವ?
Image
ಅಸ್ಸಾಂನಲ್ಲಿ ಇಂದು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ
Image
ಮಧುಮೇಹದಿಂದ ಬಳಲುತ್ತಿರುವಿರೇ? ನಿಮ್ಮ ಆಹಾರ ಕ್ರಮ ಬದಲಿಸಿಕೊಳ್ಳಿ ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞೆ ಅಂಜಲಿ ಮುಖರ್ಜಿ
Image
Covid 19: ಕೊವಿಡ್ ಸೋಂಕಿತರಿಗೆ ಭವಿಷ್ಯದಲ್ಲಿ ಅಡ್ಡಪರಿಣಾಮಗಳು ಉಂಟಾಗುತ್ತವೆಯೇ? ಸಂಶೋಧನೆಯಲ್ಲಿ ಮಾಹಿತಿ ಬಹಿರಂಗ

ಇದನ್ನೂ ಓದಿ: ಪ್ರೀತಿಸಲು ನಿರಾಕರಿಸಿದ್ದಕ್ಕೆ ಬೆಂಗಳೂರಿನಲ್ಲಿ ಯುವತಿ ಮೇಲೆ ಆ್ಯಸಿಡ್ ದಾಳಿ! ಆರೋಪಿ ಪರಾರಿ

Published On - 11:06 am, Thu, 28 April 22

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ