AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janaushadhi Kendras: 2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಿಸಲು ಕೇಂದ್ರ ಚಿಂತನೆ

ಭಾರತೀಯ ಜನೌಷಧ ಕೇಂದ್ರಗಳಲ್ಲಿ ಔಷಧಗಳನ್ನು ಮಾರುಕಟ್ಟೆ ಮಾರಾಟ ದರಕ್ಕಿಂತ ಶೇಕಡಾ 50ರಿಂದ 90ರ ವರೆಗೂ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. 1,759ರಷ್ಟು ಔಷಧಗಳು, 280 ಶಸ್ತ್ರಚಿಕಿತ್ಸೆ ಉಪಕರಣಗಳು ಜನೌಷಧ ಕೇಂದ್ರಗಳಲ್ಲಿ ಲಭ್ಯವಿವೆ.

Janaushadhi Kendras: 2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಿಸಲು ಕೇಂದ್ರ ಚಿಂತನೆ
ಜನೌಷಧ ಕೇಂದ್ರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 31, 2022 | 4:29 PM

Share

ನವದೆಹಲಿ: ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳ ಸಂಖ್ಯೆಯನ್ನು (PMBJKs) 2024ರ ಮಾರ್ಚ್ ಒಳಗಾಗಿ 10,000ಕ್ಕೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಕಳೆದ 8 ವರ್ಷಗಳಲ್ಲಿ 18,000 ಕೋಟಿ ರೂ. ಉಳಿತಾಯವಾಗಿದೆ. ದೇಶದಾದ್ಯಂತ 743 ಜಿಲ್ಲೆಗಳಲ್ಲಿ 9,000 ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

ಭಾರತೀಯ ಜನೌಷಧ ಕೇಂದ್ರಗಳಲ್ಲಿ ಔಷಧಗಳನ್ನು ಮಾರುಕಟ್ಟೆ ಮಾರಾಟ ದರಕ್ಕಿಂತ ಶೇಕಡಾ 50ರಿಂದ 90ರ ವರೆಗೂ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. 1,759ರಷ್ಟು ಔಷಧಗಳು, 280 ಶಸ್ತ್ರಚಿಕಿತ್ಸೆ ಉಪಕರಣಗಳು ಜನೌಷಧ ಕೇಂದ್ರಗಳಲ್ಲಿ ಲಭ್ಯವಿವೆ.

ಇದನ್ನೂ ಓದಿ: Jan Aushadhi Kendra: ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಫಾರ್ಮಾಸ್ಯುಟಿಕಲ್ಸ್, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಜನೌಷಧ ಕೇಂದ್ರಗಳನ್ನು ಆರಂಭಿಸಿತ್ತು. 2017ರ ಡಿಸೆಂಬರ್ ವೇಳೆಗೆ 3,000 ಕೇಂದ್ರಗಳನ್ನು ತೆರೆಯಲಾಗಿತ್ತು. 2020ರ ಮಾರ್ಚ್ ವೇಳೆಗೆ 6,000 ಕೇಂದ್ರಗಳನ್ನು ತೆರೆಯಲಾಗಿತ್ತು.

ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರಗಳ ಸಂಖ್ಯೆಯನ್ನು 8,610ರಿಂದ 9,000ಕ್ಕೆ ಹೆಚ್ಚಿಸಲಾಗಿದೆ. ದೇಶದ 743 ಜಿಲ್ಲೆಗಳಲ್ಲಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ