AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂಲ್​ಕಿಟ್​ ಟ್ವೀಟ್​ಗಳಿಂದ ‘ಮ್ಯಾನಿಪುಲೇಟೆಡ್ ಮಿಡಿಯಾ’ ತೆಗೆದುಹಾಕುವಂತೆ ಟ್ವಿಟ್ಟರ್​ಗೆ ಸೂಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪ್ರಮುಖ ಮೈಕ್ರೊಬ್ಲಾಗಿಂಗ್ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಟ್ವಿಟ್ಟರ್​ ಸಂಸ್ಥೆಗೆ ಭಾರತ ಸರ್ಕಾರವು ಕೊವಿಡ್ ಪಿಡುಗಿನ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಟೂಲ್​ಕಿಟ್​ ಒಂದನ್ನು ಸೃಷ್ಟಿಸಿ ಅದನ್ನು ದುರ್ಬಲಗೊಳಿಸಲು, ಹಳಿ ತಪ್ಪಿಸಲು ಮತ್ತು ಅಪಖ್ಯಾತಿಗೊಳಿಸಲು ಕೆಲ ರಾಜಕೀಯ ನಾಯಕರು ಕುಯಕ್ತಿಯ ಮಿಡಿಯಾ ಟ್ಯಾಗ್ ಬಳಸಿ ಮಾಡುತ್ತಿರುವ ಪ್ರಯತ್ನಗಳ ಕುರಿತು ಕಠಿಣ ಪದಗಳ ಒಂದು ಸೂಚನೆಯನ್ನು ಕಳಿಸಿದೆ. ಸದರಿ ವಿಷಯದ ಬಗ್ಗೆ ಸಮಗ್ರ ಮಾಹಿತಿ ಹೊಂದಿರುವ ಅಧಿಕಾರಿಯೊಬ್ಬರು, ಈಗಾಗಲೇ ಈ ಬಗ್ಗೆ ಸಂಬಂಧಪಟ್ಟ […]

ಟೂಲ್​ಕಿಟ್​ ಟ್ವೀಟ್​ಗಳಿಂದ ‘ಮ್ಯಾನಿಪುಲೇಟೆಡ್ ಮಿಡಿಯಾ’ ತೆಗೆದುಹಾಕುವಂತೆ ಟ್ವಿಟ್ಟರ್​ಗೆ ಸೂಚಿಸಿದ ಕೇಂದ್ರ ಸರ್ಕಾರ
ಟ್ವಿಟ್ಟರ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:May 22, 2021 | 12:40 AM

Share

ನವದೆಹಲಿ: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಪ್ರಮುಖ ಮೈಕ್ರೊಬ್ಲಾಗಿಂಗ್ ಪ್ಲಾಟ್​ಫಾರ್ಮ್​ ಎನಿಸಿಕೊಂಡಿರುವ ಟ್ವಿಟ್ಟರ್​ ಸಂಸ್ಥೆಗೆ ಭಾರತ ಸರ್ಕಾರವು ಕೊವಿಡ್ ಪಿಡುಗಿನ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಟೂಲ್​ಕಿಟ್​ ಒಂದನ್ನು ಸೃಷ್ಟಿಸಿ ಅದನ್ನು ದುರ್ಬಲಗೊಳಿಸಲು, ಹಳಿ ತಪ್ಪಿಸಲು ಮತ್ತು ಅಪಖ್ಯಾತಿಗೊಳಿಸಲು ಕೆಲ ರಾಜಕೀಯ ನಾಯಕರು ಕುಯಕ್ತಿಯ ಮಿಡಿಯಾ ಟ್ಯಾಗ್ ಬಳಸಿ ಮಾಡುತ್ತಿರುವ ಪ್ರಯತ್ನಗಳ ಕುರಿತು ಕಠಿಣ ಪದಗಳ ಒಂದು ಸೂಚನೆಯನ್ನು ಕಳಿಸಿದೆ.

ಸದರಿ ವಿಷಯದ ಬಗ್ಗೆ ಸಮಗ್ರ ಮಾಹಿತಿ ಹೊಂದಿರುವ ಅಧಿಕಾರಿಯೊಬ್ಬರು, ಈಗಾಗಲೇ ಈ ಬಗ್ಗೆ ಸಂಬಂಧಪಟ್ಟ ಪಾರ್ಟಿಯಿಂದ ಸ್ಥಳೀಯ ಕಾನೂನು ಎಜೆನ್ಸಿಯೊಂದಿಗೆ ದೂರನ್ನು ದಾಖಲಿಸಲಾಗಿದ್ದು ಟೂಲ್​ಕಿಟ್​ನ ಸತ್ಯಾಸತ್ಯತೆ ಬಗ್ಗೆ ತನಿಖೆ ಜಾರಿಯಲ್ಲಿದೆ ಎಮದು ಸಚಿವಾಲಯ ತಿಳಿಸಿದೆ ಎಂದು ಹೇಳಿದರು.

‘ಕುಯುಕ್ತಿಯ ಮಿಡಿಯಾ ಟ್ಯಾಗ್ ಬಳಸುವ ಟ್ವಿಟ್ಟರ್​ ಸಂಸ್ಥೆಯ ನಿರ್ಧಾರ ಒಂದು ತೀರ್ಪಿನಂತಿದ್ದು, ಪೂರ್ವಾಗ್ರಹ ಪೀಡಿತವಾಗಿದೆ, ಸ್ಥಳೀಯ ಕಾನೂನು ಏಜೆನ್ಸಿಯು ತನೀಖೆಯುನ್ನು ಕೈಗೆತ್ತಿಕೊಳ್ಳುತ್ತಿದೆ ಮತ್ತು ಅದರ ಸತ್ಯಾಸತ್ಯತೆಯನ್ನು ಪತ್ತೆ ಮಾಡಲಿದೆ. ಈ ವಿಷಯದಲ್ಲಿ ಟ್ವಿಟ್ಟರ್ ಏಕಪಕ್ಷೀಯವಾಗಿ ನಿರ್ಣಯಕ್ಕೆ ಬಂದು ವಿವೇಚನೆಯಿಲ್ಲದೆ ‘ಮ್ಯಾನಿಪುಲೇಟೆಡ್ ಮಿಡಿಯಾ’ ಎಂದು ಟ್ಯಾಗ್ ಮಾಡಿದೆ, ಟ್ವಿಟ್ಟರ್​ನ ಈ ಟ್ಯಾಗಿಂಗ್, ಪೂರ್ವಾಗ್ರಹ ಪೀಡಿತವಾಗಿದೆ ಮತ್ತು ಸ್ಥಳೀಯ ಕಾನೂನು ಏಜೆನ್ಸಿ ನಡೆಸುತ್ತಿರುವ ತನಿಖೆಗೆ ಬಣ್ಣ ಬಳಿಯುವ ಪ್ರಯತ್ನವಾಗಿದೆ,’ ಅಂತ ಸಚಿವಾಲಯ ನೋಟೀಸ್​ನಲ್ಲಿ ಹೇಳಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಿಜೆಪಿಯ ವಕ್ತಾರ ಸಂಬಿತ್ ಪಾತ್ರಾ ಅವರು ಮೇ 18ರಂದು ಮಾಡಿದ ಪೋಸ್ಟ್​ಗೆ ‘ಮ್ಯಾನಿಪುಲೇಟೆಡ್ ಮೀಡಿಯಾ’ ಎಂದು ಟ್ವಿಟ್ಟರ್ ಟ್ಯಾಗ್ ಮಾಡಿದ ಕೆಲವೇ ಗಂಟೆಗಳ ನಂತರ ಸರ್ಕಾರದಿಂದ ನಿರ್ದೇಶನ ಹೊರಬಿದ್ದಿದೆ. ತಮ್ಮ ಟ್ವೀಟ್​ನಲ್ಲಿ ಪಾತ್ರಾ ಅವರು ಕಾಂಗ್ರೆಸ್ ಪಕ್ಷವು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಮಸಿ ಬಳಿಯುವಂಥ ಒಂದು ಪತ್ರವನ್ನು ಸರ್ಕ್ಯುಲೇಟ್​ ಮಾಡುತ್ತಿದೆ ಎಂದು ಅರೋಪಿಸಿದ್ದರು. ಈ ಟೂಲ್​ಕಿಟ್​ ಕೋವಿಡ್​ ವಿರುದ್ಧ ಭಾರತ ಸರ್ಕಾರ ನಡೆಸುತ್ತಿರುವ ಮತ್ತು ಅದನ್ನು ನಿರ್ವಹಿಸುತ್ತಿರುವ ರೀತಿ, ಕೇಂದ್ರೀಯ ವಿಸ್ತಾ ಯೋಜನೆಗಳ ಬಗ್ಗೆ ನೆಗೆಟಿವ್ ಅಭಿಪ್ರಾಯ ಹುಟ್ಟಿಸಲು ಹರಿಬಿಡಲಾಗಿದೆ ಎಂದು ಪಾತ್ರ ಆರೋಪಿಸಿದ್ದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾಗಿರುವ ಸ್ಮೃತಿ ಇರಾನಿ, ರವಿಶಂಕರ ಪ್ರಸಾದ್, ಹರ್ದೀಪ್ ಪುರಿ, ಅನುರಾಗ್ ಠಾಕೂರ್ ಮತ್ತು ಪಿಯುಷ್ ಗೋಯೆಲ್ ಪಾತ್ರಾ ಅವರ ಟ್ವೀಟನ್ನು ಪುಷ್ಠೀಕರಿಸಿದ್ದರು.

ಇದಕ್ಕೆ ಉತ್ತರವಾಗಿ ಕಾಂಗ್ರೆಸ್, ಕೊವಿಡ್​-19 ಮೇಲಿನ ಡಾಕ್ಯುಮೆಂಟನ್ನು ಸಲ್ಲದ ರೀತಿಯಲ್ಲಿ ಅರ್ಥೈಸಿ ವಿರೋಧ ಪಕ್ಷದ ಹೆಸರಿಗೆ ಕಳಂಕ ತರುವ ಪ್ರಯತ್ನ ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದೆ. ಪ್ಲಾಟ್​ಫಾರ್ಮ್ ಅನ್ನು ದುರುಪಯೋಗಪಡಿಸಿಕೊಂಡಿರುವುದಕ್ಕೆ ಪಾತ್ರಾ ಮತ್ತು ಬಿಜೆಪಿ ನಾಯಕರ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಅದು ಟ್ವಿಟ್ಟರ್​ಗೆ ಪತ್ರ ಬರೆದಿದೆ.

‘ಟ್ವಿಟ್ಟರ್​ನ ಏಕಪಕ್ಷೀಯ ಕ್ರಮವು ನ್ಯಾಯಸಮ್ಮತವಾದ ತನಿಖಾ ಪ್ರಕ್ರಿಯೆ ಮೇಲೆ ಪ್ರಭಾವ ಬೀರುವದರಿಂದ ಅದು ಅನಿಚಿತವೆನಿಸುತ್ತದೆ, ಅಸಲಿಗೆ ಅದರ ಅಗತ್ಯವೇ ಇಲ್ಲ,’ ಎಂದು ಸಚಿವಾಲಯದ ನೋಟಿಸ್​ನಲ್ಲಿ ಹೇಳಲಾಗಿದೆ. ಟ್ವಿಟ್ಟರ್​ನ ಕ್ರಮವು ಅದರ ವಿಶ್ವಾಸಾರ್ಹತೆಗೆ ಧಕ್ಕೆ ತಂದೊಡ್ಡಲಿದೆ ಎಂದು ಸಹ ಸಚಿವಾಲಯ ಹೇಳಿದೆ.

ಟ್ವಿಟ್ಟರ್​ ಪ್ಲಾಟ್​ಫಾರ್ಮ್ ಮೂಲಕ ತಮ್ಮ ವಿಚಾರಧಾರೆಗಳನ್ನು ಹಂಚಿಕೊಳ್ಳುತ್ತಿರುವವರಿಗೆ ಈ ಕ್ರಮದಿಂದ ಅದರ ವಿಶ್ವಾಸಾರ್ಹತೆ ಮತ್ತು ತಟಸ್ಥ ವೇದಿಕೆ ಎನ್ನುವುದರ ಬಗ್ಗೆ ಸಂಶಯ ಹುಟ್ಟಿಕೊಳ್ಳುತ್ತದೆ. ಜನಗಳ ನಡುವೆ ‘ಮಧ್ಯಸ್ಥಿಕೆ’ ನಿಭಾಯಿಸುವ ಅದರ ಪ್ರತಿಷ್ಠೆಯ ಮೇಲೂ ಪ್ರಶ್ನೆಯೇಳುತ್ತದೆ ಎಂದು ನೋಟಿಸ್​ನಲ್ಲಿ ಹೇಳಲಾಗಿದೆ.

ನ್ಯಾಯಯುತ ಮತ್ತು ಸಮಾನತೆ ದೃಷ್ಟಿಯಿಂದ ಪೂರ್ವಾಗ್ರಹಪೀಡಿತ ಟ್ಯಾಗನ್ನು ತೆಗೆದು ಹಾಕುವಂತೆ ಸಚಿವಾಲಯವು ಟ್ವಿಟ್ಟರ್​ಗೆ ಸೂಚಿಸಿದೆ.

ಪಾತ್ರಾ ಅವರ ಮೇ 18 ರ ಟ್ವೀಟ್ ಹೀಗಿತ್ತು: ‘ಪಿಡುಗಿನ ಈ ಸಂದರ್ಭದಲ್ಲಿ ತೊಂದರೆಯಲ್ಲಿರುವವರಿಗೆ ನೆರವು ಒದಗಿಸುವ #CongressToolKit ಅನ್ನು ನೋಡಿ ಸ್ನೇಹಿತರೇ. ಇದು ತನ್ನೊಂದಿಗೆ ಸ್ನೇಹದಿಂದಿರುವ ಪತ್ರಕರ್ತರು ಮತ್ತು ಪ್ರಭಾವಿಗಳ ನೆರವಿನಿಂದ ಒಂದು ಪಿಅರ್ ಚಟುವಟಿಕೆಯಂತೆ ಕಾಣುತ್ತದೆಯೇ ಹೊರತು ಆತ್ಮಪ್ರೇರೇಪಣೆಯಿಂದ ಮಾಡಿರುವ ಪ್ರಯತ್ನವೆನಿಸುವುದಿಲ್ಲ. ಕಾಂಗ್ರೆಸ್ ಅಜೆಂಡಾವನ್ನು ನೀವೊಮ್ಮೆ ಓದಿ: #CongressToolKitExposed’.f

ಇದನ್ನೂ ಓದಿ: Steroids in Covid: ಸ್ಟಿರಾಯ್ಡ್ ಎಂದರೇನು? ಕೊರೊನಾ ಸೋಂಕು ಚಿಕಿತ್ಸೆಯಲ್ಲಿ ಈ ಔಷಧವನ್ನು ಹೇಗೆ ಬಳಸಲಾಗುತ್ತದೆ?

Published On - 12:39 am, Sat, 22 May 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!