AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ ಫಂಡ್​ನಿಂದ ಪ್ರತಿ ತಿಂಗಳು ಸ್ಟೈಫಂಡ್, ಉಚಿತ ಶಿಕ್ಷಣ ನೀಡಲು ನಿರ್ಧರಿಸಿದ ಕೇಂದ್ರ ಸರ್ಕಾರ

PM Cares Fund: ಪಿಎಂ ಕೇರ್ಸ್ ಫಂಡ್​ನಿಂದ ಮಕ್ಕಳು 18 ವರ್ಷ ತುಂಬಿದ ನಂತರ ಮಾಸಿಕ ಸ್ಟೈಫಂಡ್ ನೀಡಲು ಸರ್ಕಾರ ನಿರ್ಧರಿಸಿದ್ದು,  23 ನೇ ವರ್ಷಕ್ಕೆ ಕಾಲಿಟ್ಟಾಗ 10 ಲಕ್ಷ ರೂ ವಿಮೆ ಒದಗಿಸುವುದಾಗಿ ಪ್ರಧಾನಿ ಮಂತ್ರಿ ಕಾರ್ಯಾಲಯದಿಂದ ಘೋಷಿಸಲಾಗಿದೆ.

ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ಪಿಎಂ ಕೇರ್ ಫಂಡ್​ನಿಂದ ಪ್ರತಿ ತಿಂಗಳು ಸ್ಟೈಫಂಡ್, ಉಚಿತ ಶಿಕ್ಷಣ ನೀಡಲು ನಿರ್ಧರಿಸಿದ ಕೇಂದ್ರ ಸರ್ಕಾರ
ಪ್ರಧಾನಿ ನರೇಂದ್ರ ಮೋದಿ
Follow us
guruganesh bhat
|

Updated on:May 29, 2021 | 6:52 PM

ದೆಹಲಿ: ಕೊವಿಡ್‌ನಿಂದ ತಂದೆ ತಾಯಿ ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು ಹಣ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಪಿಎಂ ಕೇರ್ ಫಂಡ್‌ನಿಂದ ಹಣ ನೀಡಲು ಕೇಂದ್ರ ನಿರ್ಧಾರ ನಿರ್ಧರಿಸಿದ್ದು, ಕೊವಿಡ್​ ಸೋಂಕಿನಿಂದ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಒದಗಿಸಲು ಸಹ ಕೇಂದ್ರ ಸರ್ಕಾರ ನಿರ್ಧರಿಸಿದೆ. ಪಿಎಂ ಕೇರ್ಸ್ ಫಂಡ್​ನಿಂದ ಮಕ್ಕಳು 18 ವರ್ಷ ತುಂಬಿದ ನಂತರ ಮಾಸಿಕ ಸ್ಟೈಫಂಡ್ ನೀಡಲು ಸರ್ಕಾರ ನಿರ್ಧರಿಸಿದ್ದು,  23 ನೇ ವರ್ಷಕ್ಕೆ ಕಾಲಿಟ್ಟಾಗ 10 ಲಕ್ಷ ರೂ ವಿಮೆ ಒದಗಿಸುವುದಾಗಿ ಪ್ರಧಾನಿ ಮಂತ್ರಿ ಕಾರ್ಯಾಲಯದಿಂದ ಘೋಷಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕೊವಿಡ್​ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳ ಭವಿಷ್ಯವನ್ನು ರಕ್ಷಿಸುವುದು ಸರ್ಕಾರದ ಜವಾಬ್ಧಾರಿಯಾಗಿದ್ದು, ಅಂತಹ ಮಕ್ಕಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.

ಕೊವಿಡ್​ನಿಂದ ಅನಾಥರಾದ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಾಲ ಒದಗಿಸಿ, ಸಾಲದ ಬಡ್ಡಿಯನ್ನು ಪಿಎಂ ಕೇರ್ಸ್ ಫಂಡ್​ನಿಂದ ಭರಿಸಲಾಗುವುದು. 18 ವರ್ಷದವರೆಗೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ 5 ಲಕ್ಷಗಳ ಆರೋಗ್ಯ ವಿಮೆಯನ್ನು ಸಹ ಕೊವಿಡ್​ನಿಂದ ಅನಾಥರಾದ ಮಕ್ಕಳಿಗೆ ಒದಗಿಸಲಾಗುವುದು ಎಂದು ತಿಳಿಸಿಲಾಗಿದೆ.

10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಹತ್ತಿರದ ಕೇಂದ್ರೀಯ ವಿದ್ಯಾಲಯ ಅಥವಾ ಖಾಸಗಿ ಶಾಲೆಗೆ ಸೇರಿಸಲಾಗುವುದು.  ಖಾಸಗಿ ಶಾಲೆಗೆ ಸೇರಿದಲ್ಲಿ ಆರ್​ಟಿಇ ಯೋಜನೆಯಡಿ ಪಿಎಂ ಕೇರ್ಸ್​ ಫಂಡ್​ನಿಂದ ಮಕ್ಕಳ ಫೀಸ್ ಭರಿಸಲಾಗುವುದು. ಮಕ್ಕಳ ಶಾಲಾ ಸಮವಸ್ತ್ರ, ನೋಟ್​ಬುಕ್ ಮತ್ತಿತರ ಶೈಕ್ಷಣಿಕ ಅಗತ್ಯ ವಸ್ತುಗಳ ವೆಚ್ಚವನ್ನು ಸಹ ಪಿಎಂ ಕೇರ್ಸ್​ ಫಂಡ್​ನಿಂದ ಭರಿಸಲಾಗುವುದು. 11ರಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಹತ್ತಿರದ ಕೇಂದ್ರೀಯ ವಿದ್ಯಾಲಯ ಅಥವಾ ಸೈನಿಕ ಶಾಲೆಗಳಲ್ಲಿ ಪ್ರವೇಶಾತಿ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಘೋಷಿಸಿದೆ.

ಕೊವಿಡ್​ ಸೋಂಕಿನಿಂದ ಅದೆಷ್ಟೋ ಪೋಷಕರು ಬಲಿಯಾಗಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ದೇಶದಲ್ಲಿ ಸರಿಸುಮಾರು 2021ರ  ಏಪ್ರಿಲ್​ 1ರಿಂದ ಇಲ್ಲಿಯವರೆಗೆ 577 ಮಕ್ಕಳು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಸಮೀಕ್ಷೆಯೊಂದರ  ವರದಿ ಉಲ್ಲೇಖಿಸಿ ಇತ್ತೀಚಿಗೆ ತಿಳಿಸಿದ್ದರು.

ಮಕ್ಕಳ ಹೊಣೆ ಜಿಲ್ಲಾಡಳಿತದ್ದು: ಸುಪ್ರೀಂ ಕೊರೊನಾದಿಂದ ಅನಾಥರಾದ ಮಕ್ಕಳ ಪಾಲನೆ ಹೊಣೆಯನ್ನು ಜಿಲ್ಲಾಡಳಿತಗಳು ವಹಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ದೇಶದ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿತ್ತು. ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡು ಅನಾಥ ಮಕ್ಕಳ ಅಗತ್ಯತೆಗಳನ್ನು ತಕ್ಷಣವೇ ಪೂರೈಸಲು ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ದೇಶಾದ್ಯಂತ ಕೊರೊನಾದಿಂದ ಅನಾಥರಾದ ಮಕ್ಕಳ ವಿವರ, ಅಂಕಿಅಂಶ ನೀಡಲು ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ ತಿಳಿಸಿದ್ದು, ಎಲ್ಲ ರಾಜ್ಯಗಳು ಮಕ್ಕಳು ಹಸಿವಿನಿಂದ ಇರದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾದಿಂದ ಅನಾಥರಾದ ಮಕ್ಕಳನ್ನು ಗುರುತಿಸಿ ಶನಿವಾರ ಸಂಜೆಯೊಳಗೆ ಅವರ ವಿವರವನ್ನು NCPCR ವೆಬ್ ಸೈಟ್ ಗೆ ಅಪ್ಲೋಡ್ ಮಾಡುವಂತೆ ಜಿಲ್ಲಾಡಳಿತಗಳಿಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಜತೆಗೆ ಅನಾಥ ಮಕ್ಕಳ ಬಗ್ಗೆ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಯದೇ ಮಕ್ಕಳನ್ನ ನೋಡಿಕೊಳ್ಳಬೇಕು ಎಂದು ಸಹ ತಿಳಿಸಿರುವ ಕೋರ್ಟ್, ಮುಂದಿನ ಮಂಗಳವಾರ ಈ ಕುರಿತು ವಿಚಾರಣೆ ಮುಂದುವರೆಸುವುದಾಗಿ ತಿಳಿಸಿದೆ.

ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿಗೆ ವಿಶೇಷ ಪರಿಹಾರ ನೀಡುವ ಬಗ್ಗೆ ನಿನ್ನೆಯ (ಮೇ 27) ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿತ್ತು. ಕೇಂದ್ರದಿಂದ ಈ ಬಗ್ಗೆ ಹೊಸ ಮಾರ್ಗಸೂಚಿ ಬರಲಿದೆ. ಆ ಬಳಿಕ ಬಂದ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದರು. ಇದೀಗ ಸುಪ್ರೀಂಕೋರ್ಟ್ ಈ ಕುರಿತು ನಿರ್ದೇಶನ ನೀಡಿರುವುದರಿಂದ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯ ಸರ್ಕಾರಗಳು ಮಕ್ಕಳನ್ನು ಕಾಪಾಡುವ ನಿಟ್ಟಿನಲ್ಲಿ ತ್ವರಿತ ಗತಿಯಲ್ಲಿ ಪ್ಯಾಕೇಜ್ ಘೋಷಿಸುವ ನಿರೀಕ್ಷೆ ಇದೆ.

(Union Government to provide support to Orphaned Kids due to Covid pandemic by PM Cares Fund)

Published On - 6:40 pm, Sat, 29 May 21

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್