AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆಯ ಮುಂಜಾಗರೂಕತೆ ಡೋಸ್‌ ಪಡೆಯಲು ಅರ್ಹ ಹಿರಿಯ ನಾಗರಿಕರಿಗೆ ಸಂದೇಶ ಕಳಿಸಲಿದೆ ಕೇಂದ್ರ

ಕೊವಿಡ್-19ನ ಮುಂಜಾಗರೂಕತೆ ಲಸಿಕೆ ತೆಗೆದುಕೊಳ್ಳುವುದನ್ನು ನೆನಪಿಸಲು ಅರ್ಹ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರವು ಸಂದೇಶ (SMS) ಕಳುಹಿಸಲಿದೆ.

ಕೊವಿಡ್ ಲಸಿಕೆಯ ಮುಂಜಾಗರೂಕತೆ ಡೋಸ್‌ ಪಡೆಯಲು ಅರ್ಹ ಹಿರಿಯ ನಾಗರಿಕರಿಗೆ ಸಂದೇಶ ಕಳಿಸಲಿದೆ ಕೇಂದ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 10:45 AM

Share

ದೆಹಲಿ: ಜನವರಿ 10 ರಿಂದ ಪ್ರಾರಂಭವಾಗುವ ಕೊವಿಡ್-19ನ (Covid 19) ಮುಂಜಾಗರೂಕತೆ ಲಸಿಕೆ ಡೋಸ್ (precautionary dose) ತೆಗೆದುಕೊಳ್ಳುವುದನ್ನು ನೆನಪಿಸಲು ಅರ್ಹ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರವು ಸಂದೇಶ (SMS) ಕಳುಹಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಗುರುವಾರ ತಿಳಿಸಿದೆ. ಹೊಸ ಒಮಿಕ್ರಾನ್ (omicron) ರೂಪಾಂತರದ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡುಬಂದಿರುವುದರಿಂದ ದೇಶವು ದೈನಂದಿನ ಕೊವಿಡ್ ಸೋಂಕುಗಳಲ್ಲಿ ತೀವ್ರ ಹೆಚ್ಚಳವನ್ನು ಎದುರಿಸುತ್ತಿರುವ ಮಧ್ಯೆ ಇದು ಬಂದಿದೆ. ಕೊವಿಡ್-19 ಲಸಿಕೆಯ ಮುಂಜಾಗರೂಕತೆ ಡೋಸ್ ಪ್ರಾಥಮಿಕವಾಗಿ ಸೋಂಕು, ಆಸ್ಪತ್ರೆಗೆ ದಾಖಲು ಮತ್ತು ಸಾವಿನ ತೀವ್ರತೆಯನ್ನು ತಗ್ಗಿಸಲು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು(Narendra Modi) ಡಿಸೆಂಬರ್ 25 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಒಮಿಕ್ರಾನ್ ಉಲ್ಬಣದ ಹಿನ್ನೆಲೆಯಲ್ಲಿ ಮಕ್ಕಳಿಗೆ ಲಸಿಕೆ ಮತ್ತು ವಯಸ್ಕರಿಗೆ ಬೂಸ್ಟರ್ ಡೋಸ್‌ಗಳ ಮುಂದಿನ ಹಂತಗಳನ್ನು ಘೋಷಿಸಿದ್ದರು.

“ಜನವರಿ 10 ರಿಂದ ಭಾರತವು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ‘ಮುಂಜಾಗರೂಕತೆ’ ಲಸಿಕೆ ಡೋಸ್ ನೀಡಲು ಪ್ರಾರಂಭಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. ಕೇಂದ್ರದ ಪ್ರಕಾರ, ದೇಶದ ವಯಸ್ಕ ಜನಸಂಖ್ಯೆಯ ಸರಿಸುಮಾರು 90 ಪ್ರತಿಶತದಷ್ಟು ಜನರು ಕೊವಿಡ್19 ವಿರುದ್ಧ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ.

“ಭಾರತದ ವಯಸ್ಕ ಜನಸಂಖ್ಯೆಯ ಸರಿಸುಮಾರು 90 ಪ್ರತಿಶತದಷ್ಟು ಜನರು ಕೊವಿಡ್-19 ವಿರುದ್ಧ ಮೊದಲ ಡೋಸ್‌ ಲಸಿಕೆ ಹಾಕಿದ್ದಾರೆ. ಸರಾಸರಿಯಾಗಿ, ಭಾರತವು ಕಳೆದ ವಾರ ದಿನಕ್ಕೆ 8,000 ಕ್ಕಿಂತ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದೆ. ಒಟ್ಟಾರೆ ಪ್ರಕರಣದ ಧನಾತ್ಮಕತೆಯ ಪ್ರಮಾಣವು 0.92 ಶೇಕಡಾ. ಡಿಸೆಂಬರ್ 26 ರಿಂದ ನಂತರ, ದೇಶವು ಪ್ರತಿದಿನ 10,000 ಪ್ರಕರಣಗಳನ್ನು ವರದಿ ಮಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

‘8 ಜಿಲ್ಲೆಗಳಲ್ಲಿ ಕೊವಿಡ್ ಪಾಸಿಟಿವಿಟಿ ದರ ಶೇ 10 ಕ್ಕಿಂತ ಹೆಚ್ಚು’ ಮಿಜೋರಾಂನ ಆರು ಜಿಲ್ಲೆಗಳು, ಅರುಣಾಚಲ ಪ್ರದೇಶದ ಒಂದು ಮತ್ತು ಪಶ್ಚಿಮ ಬಂಗಾಳದ ಕೋಲ್ಕತ್ತಾ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಸಾಪ್ತಾಹಿಕ ಕೊವಿಡ್ ಪಾಸಿಟಿವಿಟಿ ದರವು ಶೇಕಡಾ 10 ಕ್ಕಿಂತ ಹೆಚ್ಚು ಎಂದು ಅಗರ್ವಾಲ್ ಹೇಳಿದರು.

“ದೇಶದ 14 ಜಿಲ್ಲೆಗಳಲ್ಲಿ ಸಾಪ್ತಾಹಿಕ ಕೇಸ್ ಪಾಸಿಟಿವಿಟಿ ದರವು ಶೇಕಡಾ 5-10 ರ ನಡುವೆ ಇದೆ. ಭಾರತದಲ್ಲಿ ಕೊರೊನಾವೈರಸ್‌ನ ಒಮಿಕ್ರಾನ್ ರೂಪಾಂತರದ 961 ಪ್ರಕರಣಗಳಿವೆ, ಅದರಲ್ಲಿ 320 ರೋಗಿಗಳು ಚೇತರಿಸಿಕೊಂಡಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ  ಓದಿ: ಒಮಿಕ್ರಾನ್​ ಒಂದು ಪ್ರಾಕೃತಿಕ ಲಸಿಕೆ, ಇದು ಕೊವಿಡ್​ 19ನ ಅಂತಿಮ ಹಂತ: ಬೂಸ್ಟರ್​ ಡೋಸ್​ ಬೇಡವೆಂದ ಡಾ. ಅಮಿತಾವ್​ ಬ್ಯಾನರ್ಜಿ

Published On - 10:35 am, Fri, 31 December 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ