AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

ಜಂಟಿ ಸಂಸದೀಯ ಸಮಿತಿಯ ಶಿಫಾರಸುಗಳ ಪ್ರಕಾರ ಹೊಸ ಮಸೂದೆಯನ್ನು ತರಲು ಕೇಂದ್ರವು ಈಗ ಸಮಗ್ರ ಕಾನೂನು ಚೌಕಟ್ಟಿನ ಮೇಲೆ ಕಾರ್ಯನಿರ್ವಹಿಸುತ್ತಿದೆ

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ
ಅಶ್ವಿನಿ ವೈಷ್ಣವ್
TV9 Web
| Edited By: |

Updated on:Aug 03, 2022 | 7:35 PM

Share

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಗೆ (Personal Data Protection Bill) ಜಂಟಿ ಸಂಸದೀಯ ಸಮಿತಿ (joint parliamentary committee) 81 ತಿದ್ದುಪಡಿಗಳನ್ನು ಸೂಚಿಸಿದ ನಂತರ ಕೇಂದ್ರ ಸರ್ಕಾರ ಬುಧವಾರ ಅದನ್ನು ಹಿಂಪಡೆದಿದೆ. ಜಂಟಿ ಸಂಸದೀಯ ಸಮಿತಿಯ ಶಿಫಾರಸುಗಳ ಪ್ರಕಾರ ಹೊಸ ಮಸೂದೆಯನ್ನು ತರಲು ಕೇಂದ್ರವು ಈಗ ಸಮಗ್ರ ಕಾನೂನು ಚೌಕಟ್ಟಿನ ಮೇಲೆ ಕಾರ್ಯನಿರ್ವಹಿಸುತ್ತಿದೆ. ಸಾಮಾಜಿಕ ಮಾಧ್ಯಮ ಕಂಪನಿಗಳು ಮತ್ತು ಡೇಟಾ ಕಾರ್ಯಕರ್ತರು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಮತ್ತೊಮ್ಮೆ ಸಮಾಲೋಚನೆ ನಡೆಸಲಾಗುವುದು. ಜೆಸಿಪಿಯ ವರದಿಯನ್ನು ಪರಿಗಣಿಸಿ, ಸಮಗ್ರ ಕಾನೂನು ಚೌಕಟ್ಟಿನ ಮೇಲೆ ಕಾರ್ಯ ನಿರ್ವಹಿಸಲಾಗುವುದು. ಆದ್ದರಿಂದ ಈ ಹೊತ್ತಲ್ಲಿ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ, 2019 ಅನ್ನು ಹಿಂತೆಗೆದುಕೊಳ್ಳಲು ಮತ್ತು ಸಮಗ್ರ ಕಾನೂನು ಚೌಕಟ್ಟಿಗೆ ಹೊಂದಿಕೊಳ್ಳುವ ಹೊಸ ಮಸೂದೆಯನ್ನು ಪ್ರಸ್ತುತಪಡಿಸಲು ಪ್ರಸ್ತಾಪಿಸಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw)ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಸಂಸತ್ ಅಧಿವೇಶನದಲ್ಲಿ ಹೊಸ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಹಿಂತೆಗೆದುಕೊಳ್ಳುವ ಕೇಂದ್ರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ನಾವು ಮೊದಲಿನಿಂದಲೂ ಮಸೂದೆಯನ್ನು ತಿರಸ್ಕರಿಸುತ್ತಾ ಬಂದಿದ್ದೇವೆ. ಇದು ಸಂಸತ್ತಿನಲ್ಲಿ ಚರ್ಚೆಯಾಗಿದ್ದರೆ ಉತ್ತಮ ಕಾನೂನು ಹೊರಹೊಮ್ಮುತ್ತಿತ್ತು ಎಂದು ಹೇಳಿದ್ದಾರೆ.

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಹಿಂತೆಗೆದುಕೊಳ್ಳುವ ಕೇಂದ್ರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ನಾವು ಮೊದಲಿನಿಂದಲೂ ಮಸೂದೆಯನ್ನು ತಿರಸ್ಕರಿಸುತ್ತಾ ಬಂದಿದ್ದೇವೆ. ಇದು ಸಂಸತ್ತಿನಲ್ಲಿ ಚರ್ಚೆಯಾಗಿದ್ದರೆ ಉತ್ತಮ ಕಾನೂನು ಹೊರಹೊಮ್ಮುತ್ತಿತ್ತು ಎಂದು ಅವರು ಹೇಳಿದರು. ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಮೊದಲು 2018 ರಲ್ಲಿ ನ್ಯಾಯಮೂರ್ತಿ ಬಿಎನ್ ಶ್ರೀಕೃಷ್ಣ ನೇತೃತ್ವದ ಪರಿಣಿತ ಸಮಿತಿಯು ರಚಿಸಿತು. ಕೇಂದ್ರವು 2019 ರಲ್ಲಿ ಮಸೂದೆಯ ಕರಡನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಅದನ್ನು ಅದೇ ವರ್ಷ ಡಿಸೆಂಬರ್‌ನಲ್ಲಿ ಜಂಟಿ ಸಂಸದೀಯ ಸಮಿತಿಯ ಮುಂದಿಡಲಾಯಿತು. ಸಮಿತಿಯ ವರದಿಗೆ ತಿದ್ದುಪಡಿ ಸೂಚಿಸಿದ ನಂತರ ಡಿಸೆಂಬರ್ 2021 ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾಯಿತು.

Published On - 7:05 pm, Wed, 3 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ