AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ತಯಾರಾಗಲಿವೆ: ಆರೋಗ್ಯ ಸಚಿವ ಹರ್ಷ ವರ್ಧನ್ ಘೋಷಣೆ

ಭಾರತವು ಕೊರೊನಾ ವಿರುದ್ಧ 2 ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. 71 ದೇಶಗಳಿಗೂ ಲಸಿಕೆ ಒದಗಿಸಿದೆ. ಕೆನಡಾ, ಬ್ರೆಜಿಲ್ ಹಾಗೂ ಇತರ ಅಭಿವೃದ್ಧಿ ಹೊಂದಿದ ದೇಶಗಳಿಗೂ ಭಾರತ ಕೊರೊನಾ ಲಸಿಕೆ ಕಳುಹಿಸಿದೆ.

ಭಾರತದಲ್ಲಿ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ತಯಾರಾಗಲಿವೆ: ಆರೋಗ್ಯ ಸಚಿವ ಹರ್ಷ ವರ್ಧನ್ ಘೋಷಣೆ
ಡಾ. ಹರ್ಷ್ ವರ್ಧನ್
Follow us
TV9 Web
| Updated By: ganapathi bhat

Updated on:Apr 06, 2022 | 7:11 PM

ಭೋಪಾಲ್: ಕೊವಿಡ್-19 ವಿರುದ್ಧ ಈಗಾಗಲೇ ಎರಡು ಲಸಿಕೆಗಳಿಗೆ ಅನುಮೋದನೆ ನೀಡಿರುವ ಭಾರತದಲ್ಲಿ, ಮುಂದೆ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ಬರಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇಂದು (ಮಾರ್ಚ್ 13) ಘೋಷಣೆ ಮಾಡಿದ್ದಾರೆ. ಈವರೆಗೆ ಒಟ್ಟು 1.84 ಕೋಟಿ ಕೊವಿಡ್-19 ಲಸಿಕೆ ಡೋಸ್​ಗಳನ್ನು ಜನರಿಗೆ ನೀಡಲಾಗಿದೆ. 23 ಕೋಟಿ ಕೊವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತವು ಕೊರೊನಾ ವಿರುದ್ಧ 2 ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. 71 ದೇಶಗಳಿಗೂ ಲಸಿಕೆ ಒದಗಿಸಿದೆ. ಕೆನಡಾ, ಬ್ರೆಜಿಲ್ ಹಾಗೂ ಇತರ ಅಭಿವೃದ್ಧಿ ಹೊಂದಿದ ದೇಶಗಳಿಗೂ ಭಾರತ ಕೊರೊನಾ ಲಸಿಕೆ ಕಳುಹಿಸಿದೆ ಎಂದು ರಾಷ್ಟ್ರೀಯ ಪರಿಸರ ಆರೋಗ್ಯ ಅಧ್ಯಯನ ಸಂಸ್ಥೆಯ ಗ್ರೀನ್ ಕ್ಯಾಂಪಸ್ ಉದ್ಘಾಟಿಸಿ ಹರ್ಷ ವರ್ಧನ್ ಮಾತನಾಡಿದ್ದಾರೆ.

ಅರ್ಧ ಡಜನ್​ಗೂ ಹೆಚ್ಚು ಲಸಿಕೆಗಳು ಭಾರತದಲ್ಲಿ ಬರಲಿವೆ ಎಂದು ಹೇಳಿದ ಅವರು ಶನಿವಾರ ಬೆಳಗಿನವರೆಗೆ ಒಟ್ಟು 1.84 ಕೋಟಿ ಲಸಿಕೆ ಡೋಸ್​ಗಳನ್ನು ವಿತರಿಸಲಾಗಿದೆ. ನಿನ್ನೆ (ಮಾರ್ಚ್ 12) 20 ಲಕ್ಷ ಜನರು ಲಸಿಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನವ ಭಾರತವನ್ನು ನಿರ್ಮಾಣ ಮಾಡಲು, ಭಾರತವನ್ನು ವಿಶ್ವ ಗುರುವಾಗಿಸಲು ಬಯಸಿದ್ದಾರೆ. ಲಸಿಕೆ, ವಿಜ್ಞಾನವನ್ನು ಗೌರವಿಸಿ. ಲಸಿಕೆ ವಿಚಾರದಲ್ಲಿ ರಾಜಕೀಯ ತರುವುದನ್ನು ಕೊನೆಗೊಳಿಸಬೇಕಾಗಿದೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ನಾವು ಈ ದೂರ ಕ್ರಮಿಸಿದ್ದೇವೆ. 2020 ಕೊವಿಡ್-19 ಹೊರತಾಗಿ ವಿಜ್ಞಾನ ಮತ್ತು ವಿಜ್ಞಾನಿಗಳ ವರ್ಷವೂ ಆಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಮೊದಲು ಕೊವಿಡ್-19 ಪರೀಕ್ಷೆ ಮಾಡಲು ಭಾರತದಲ್ಲಿ ಒಂದೇ ಪ್ರಯೋಗಾಲಯವಿತ್ತು. ಆದರೆ, ಈಗ ಒಟ್ಟು 2,412 ಕೊವಿಡ್ ಪರೀಕ್ಷಾ ಕೇಂದ್ರಗಳಿವೆ. ಕೊರೊನಾ ರೂಪಾಂತರ ತಡೆಗಟ್ಟಲು ಕ್ರಮ ಕೈಗೊಂಡ ಮೊದಲ ದೇಶ ಭಾರತ. ಕೆಲವರು ಗೊಂದಲ ಸೃಷ್ಟಿಮಾಡಲು ಪ್ರಯತ್ನಿಸಿದರು. ಆದರೆ, ಸತ್ಯ ಯಾವತ್ತೂ ಸೋಲುವುದಿಲ್ಲ ಎಂದು ಹರ್ಷ ವರ್ಧನ್ ಹೇಳಿದ್ದಾರೆ.

ಕೊರೊನಾ ಬಗ್ಗೆ ಕಾಳಜಿ ಇಲ್ಲದಿರುವುದು ಹಾಗೂ ಅಪಾರ್ಥ ಮಾಡಿಕೊಂಡಿರುವುದು ವೈರಾಣು ಹರಡುವಿಕೆ ಮತ್ತೆ ಹೆಚ್ಚಲು ಕಾರಣವಾಗಿದೆ. ಲಸಿಕೆ ಬಂದಿದೆ ಹಾಗಾಗಿ ಎಲ್ಲಾ ಸರಿಯಾಗಿದೆ ಎಂದು ಜನರು ಯೋಚಿಸುತ್ತಿದ್ದಾರೆ. ಎಲ್ಲರೂ ಕೊವಿಡ್-19 ನಿಯಮಾವಳಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಆರೋಗ್ಯ ಸಚಿವರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ನಮ್ಮದೇ ಕೊರೊನಾ ಲಸಿಕೆ ಪಡೆಯಿರಿ ಎಂದು ಆಫರ್ ನೀಡುತ್ತಿದೆ ಚೀನಾ; ಕ್ವಾಡ್ ಶೃಂಗಸಭೆ ಬಳಿಕ ಅಚ್ಚರಿಯ ಬೆಳವಣಿಗೆ!

ಈ ವರ್ಷದಲ್ಲೇ ಅತ್ಯಂತ ಹೆಚ್ಚು ಕೊರೊನಾ ಕೇಸ್​​ಗಳು ಇಂದು ದಾಖಲು; ಮಹಾರಾಷ್ಟ್ರದ ಹಲವು ನಗರಗಳು ಮತ್ತೆ ಲಾಕ್​

Published On - 8:30 pm, Sat, 13 March 21

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ