AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ತಯಾರಾಗಲಿವೆ: ಆರೋಗ್ಯ ಸಚಿವ ಹರ್ಷ ವರ್ಧನ್ ಘೋಷಣೆ

ಭಾರತವು ಕೊರೊನಾ ವಿರುದ್ಧ 2 ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. 71 ದೇಶಗಳಿಗೂ ಲಸಿಕೆ ಒದಗಿಸಿದೆ. ಕೆನಡಾ, ಬ್ರೆಜಿಲ್ ಹಾಗೂ ಇತರ ಅಭಿವೃದ್ಧಿ ಹೊಂದಿದ ದೇಶಗಳಿಗೂ ಭಾರತ ಕೊರೊನಾ ಲಸಿಕೆ ಕಳುಹಿಸಿದೆ.

ಭಾರತದಲ್ಲಿ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ತಯಾರಾಗಲಿವೆ: ಆರೋಗ್ಯ ಸಚಿವ ಹರ್ಷ ವರ್ಧನ್ ಘೋಷಣೆ
ಡಾ. ಹರ್ಷ್ ವರ್ಧನ್
TV9 Web
| Edited By: |

Updated on:Apr 06, 2022 | 7:11 PM

Share

ಭೋಪಾಲ್: ಕೊವಿಡ್-19 ವಿರುದ್ಧ ಈಗಾಗಲೇ ಎರಡು ಲಸಿಕೆಗಳಿಗೆ ಅನುಮೋದನೆ ನೀಡಿರುವ ಭಾರತದಲ್ಲಿ, ಮುಂದೆ 6ಕ್ಕೂ ಹೆಚ್ಚು ಕೊರೊನಾ ಲಸಿಕೆಗಳು ಬರಲಿವೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಇಂದು (ಮಾರ್ಚ್ 13) ಘೋಷಣೆ ಮಾಡಿದ್ದಾರೆ. ಈವರೆಗೆ ಒಟ್ಟು 1.84 ಕೋಟಿ ಕೊವಿಡ್-19 ಲಸಿಕೆ ಡೋಸ್​ಗಳನ್ನು ಜನರಿಗೆ ನೀಡಲಾಗಿದೆ. 23 ಕೋಟಿ ಕೊವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತವು ಕೊರೊನಾ ವಿರುದ್ಧ 2 ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. 71 ದೇಶಗಳಿಗೂ ಲಸಿಕೆ ಒದಗಿಸಿದೆ. ಕೆನಡಾ, ಬ್ರೆಜಿಲ್ ಹಾಗೂ ಇತರ ಅಭಿವೃದ್ಧಿ ಹೊಂದಿದ ದೇಶಗಳಿಗೂ ಭಾರತ ಕೊರೊನಾ ಲಸಿಕೆ ಕಳುಹಿಸಿದೆ ಎಂದು ರಾಷ್ಟ್ರೀಯ ಪರಿಸರ ಆರೋಗ್ಯ ಅಧ್ಯಯನ ಸಂಸ್ಥೆಯ ಗ್ರೀನ್ ಕ್ಯಾಂಪಸ್ ಉದ್ಘಾಟಿಸಿ ಹರ್ಷ ವರ್ಧನ್ ಮಾತನಾಡಿದ್ದಾರೆ.

ಅರ್ಧ ಡಜನ್​ಗೂ ಹೆಚ್ಚು ಲಸಿಕೆಗಳು ಭಾರತದಲ್ಲಿ ಬರಲಿವೆ ಎಂದು ಹೇಳಿದ ಅವರು ಶನಿವಾರ ಬೆಳಗಿನವರೆಗೆ ಒಟ್ಟು 1.84 ಕೋಟಿ ಲಸಿಕೆ ಡೋಸ್​ಗಳನ್ನು ವಿತರಿಸಲಾಗಿದೆ. ನಿನ್ನೆ (ಮಾರ್ಚ್ 12) 20 ಲಕ್ಷ ಜನರು ಲಸಿಕೆ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ನವ ಭಾರತವನ್ನು ನಿರ್ಮಾಣ ಮಾಡಲು, ಭಾರತವನ್ನು ವಿಶ್ವ ಗುರುವಾಗಿಸಲು ಬಯಸಿದ್ದಾರೆ. ಲಸಿಕೆ, ವಿಜ್ಞಾನವನ್ನು ಗೌರವಿಸಿ. ಲಸಿಕೆ ವಿಚಾರದಲ್ಲಿ ರಾಜಕೀಯ ತರುವುದನ್ನು ಕೊನೆಗೊಳಿಸಬೇಕಾಗಿದೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ನಾವು ಈ ದೂರ ಕ್ರಮಿಸಿದ್ದೇವೆ. 2020 ಕೊವಿಡ್-19 ಹೊರತಾಗಿ ವಿಜ್ಞಾನ ಮತ್ತು ವಿಜ್ಞಾನಿಗಳ ವರ್ಷವೂ ಆಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಮೊದಲು ಕೊವಿಡ್-19 ಪರೀಕ್ಷೆ ಮಾಡಲು ಭಾರತದಲ್ಲಿ ಒಂದೇ ಪ್ರಯೋಗಾಲಯವಿತ್ತು. ಆದರೆ, ಈಗ ಒಟ್ಟು 2,412 ಕೊವಿಡ್ ಪರೀಕ್ಷಾ ಕೇಂದ್ರಗಳಿವೆ. ಕೊರೊನಾ ರೂಪಾಂತರ ತಡೆಗಟ್ಟಲು ಕ್ರಮ ಕೈಗೊಂಡ ಮೊದಲ ದೇಶ ಭಾರತ. ಕೆಲವರು ಗೊಂದಲ ಸೃಷ್ಟಿಮಾಡಲು ಪ್ರಯತ್ನಿಸಿದರು. ಆದರೆ, ಸತ್ಯ ಯಾವತ್ತೂ ಸೋಲುವುದಿಲ್ಲ ಎಂದು ಹರ್ಷ ವರ್ಧನ್ ಹೇಳಿದ್ದಾರೆ.

ಕೊರೊನಾ ಬಗ್ಗೆ ಕಾಳಜಿ ಇಲ್ಲದಿರುವುದು ಹಾಗೂ ಅಪಾರ್ಥ ಮಾಡಿಕೊಂಡಿರುವುದು ವೈರಾಣು ಹರಡುವಿಕೆ ಮತ್ತೆ ಹೆಚ್ಚಲು ಕಾರಣವಾಗಿದೆ. ಲಸಿಕೆ ಬಂದಿದೆ ಹಾಗಾಗಿ ಎಲ್ಲಾ ಸರಿಯಾಗಿದೆ ಎಂದು ಜನರು ಯೋಚಿಸುತ್ತಿದ್ದಾರೆ. ಎಲ್ಲರೂ ಕೊವಿಡ್-19 ನಿಯಮಾವಳಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಆರೋಗ್ಯ ಸಚಿವರು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ನಮ್ಮದೇ ಕೊರೊನಾ ಲಸಿಕೆ ಪಡೆಯಿರಿ ಎಂದು ಆಫರ್ ನೀಡುತ್ತಿದೆ ಚೀನಾ; ಕ್ವಾಡ್ ಶೃಂಗಸಭೆ ಬಳಿಕ ಅಚ್ಚರಿಯ ಬೆಳವಣಿಗೆ!

ಈ ವರ್ಷದಲ್ಲೇ ಅತ್ಯಂತ ಹೆಚ್ಚು ಕೊರೊನಾ ಕೇಸ್​​ಗಳು ಇಂದು ದಾಖಲು; ಮಹಾರಾಷ್ಟ್ರದ ಹಲವು ನಗರಗಳು ಮತ್ತೆ ಲಾಕ್​

Published On - 8:30 pm, Sat, 13 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!