AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​

ದೆಹಲಿ: ಕೊವಿಡ್ ಲಸಿಕೆ ವಿತರಣಾ ಪ್ರಕ್ರಿಯೆಗೆ ಆದ್ಯತೆ ನೀಡುವುದು ಸಹಜವಾಗಿದ್ದು, ಮುಂದಿನ ಜುಲೈ-ಆಗಸ್ಟ್​ನ ವೇಳೆಗೆ 400-500 ಮಿಲಿಯನ್ ಲಸಿಕೆಗಳು ಲಭ್ಯವಾಗಲಿದೆ. ಸುಮಾರು 25ರಿಂದ 30 ಕೋಟಿ ಜನರಿಗೆ ಇದನ್ನು ನೀಡಬಹುದಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು. ಮುಂದಿನ 3-4 ತಿಂಗಳಲ್ಲಿ ಕೋವಿಡ್ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ. ಮೊದಲ ಆದ್ಯತೆಯನ್ನು ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಯೋಧರಿಗೆ ನೀಡಲಾಗುವುದು. ನಂತರದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಬಳಿಕ 50-65 ವಯೋಮಾನದವರಿಗೆ ನೀಡಲಾಗುವುದು. ಇದೆಲ್ಲದರ ನಂತರ, 50 ವರ್ಷಕ್ಕಿಂತ […]

ದೇಶದಲ್ಲಿ ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ -ಸಚಿವ ಹರ್ಷವರ್ಧನ್​
KUSHAL V
|

Updated on: Nov 19, 2020 | 7:47 PM

Share

ದೆಹಲಿ: ಕೊವಿಡ್ ಲಸಿಕೆ ವಿತರಣಾ ಪ್ರಕ್ರಿಯೆಗೆ ಆದ್ಯತೆ ನೀಡುವುದು ಸಹಜವಾಗಿದ್ದು, ಮುಂದಿನ ಜುಲೈ-ಆಗಸ್ಟ್​ನ ವೇಳೆಗೆ 400-500 ಮಿಲಿಯನ್ ಲಸಿಕೆಗಳು ಲಭ್ಯವಾಗಲಿದೆ. ಸುಮಾರು 25ರಿಂದ 30 ಕೋಟಿ ಜನರಿಗೆ ಇದನ್ನು ನೀಡಬಹುದಾಗಿದೆ ಎಂದು ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದರು.

ಮುಂದಿನ 3-4 ತಿಂಗಳಲ್ಲಿ ಕೋವಿಡ್ ಲಸಿಕೆ ಸಿದ್ಧವಾಗಲಿದೆ ಎಂಬ ವಿಶ್ವಾಸವಿದೆ. ಮೊದಲ ಆದ್ಯತೆಯನ್ನು ವೈದ್ಯಕೀಯ ಸಿಬ್ಬಂದಿ ಮತ್ತು ಕೊರೊನಾ ಯೋಧರಿಗೆ ನೀಡಲಾಗುವುದು. ನಂತರದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟವರಿಗೆ, ಬಳಿಕ 50-65 ವಯೋಮಾನದವರಿಗೆ ನೀಡಲಾಗುವುದು. ಇದೆಲ್ಲದರ ನಂತರ, 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹಾಗೂ ಇತರೆ ಕಾಯಿಲೆಯನ್ನು ಹೊಂದಿದವರಿಗೆ ಹೀಗೆ ಹಂತ ಹಂತವಾಗಿ ಲಸಿಕೆಯನ್ನು ನೀಡಲಾಗುವುದು ಎಂದು ಸಚಿವರು ಹೇಳಿದರು. ಎಲ್ಲಾ ಪ್ರಮುಖ ಲಸಿಕೆಗಳಿಗೆ ಕ್ಲಿನಿಕಲ್ ಪ್ರಯೋಗಗಳನ್ನು ಆಯೋಜಿಸುತ್ತಿದ್ದು, ಸುಮಾರು 20 ಲಸಿಕೆಗಳು ಅಭಿವೃದ್ಧಿಯ ವಿವಿಧ ಹಂತಗಳಲ್ಲಿವೆ ಎಂದು ಹೇಳಿದರು.

ದೇಶದಲ್ಲಿ ಪ್ರಯೋಗ ಹಂತದಲ್ಲಿರುವ ಲಸಿಕೆಗಳು ವಿವರ ಸೀರಮ್ ಇನ್​ಸ್ಟಿಟ್ಯೂಟ್​ನ ಆಕ್ಸ್​ಫರ್ಡ್​ ಲಸಿಕೆ 3ನೇ ಹಂತದ ಪ್ರಯೋಗವು ಬಹುತೇಕ ಪೂರ್ಣಗೊಂಡಿದೆ. ಜೊತೆಗೆ, ಭಾರತ್​ ಬಯೋಟೆಕ್ ಮತ್ತು ಭಾರತೀಯ ವೈದ್ಯಕೀಯ ಸಂಶೋಧನೆ ಮಂಡಳಿ (ICMR) ಈಗಾಗಲೇ ಅಭಿವೃದ್ಧಿ ಪಡಿಸಿದ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗ ಪ್ರಾರಂಭವಾಗಿದೆ. ಶೀಘ್ರದಲ್ಲೇ ಡಾ. ರೆಡ್ಡಿಸ್ ಲ್ಯಾಬೊರೇಟರೀಸ್​ನ ರಷ್ಯಾ ಮೂಲದ ಸ್ಪಟ್ನಿಕ್​ 5 ಲಸಿಕೆ 2ಮತ್ತು 3ನೇ ಹಂತದ ಪ್ರಯೋಗದಲ್ಲಿದೆ. ಇದಲ್ಲದೆ ಬಯೋಲಾಜಿಕಲ್ E ಲಿಮಿಟೆಡ್ 1 ಮತ್ತು 2ನೇ ಹಂತದ ಪ್ರಯೋಗಗಳನ್ನು ಪ್ರಾರಂಭಿಸಿದೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ