AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 9 ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸಭೆ; ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ

ಇದಕ್ಕೂ ಮೊದಲು ಕೇಂದ್ರ ಆರೋಗ್ಯ ಇಲಾಖೆ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ ರಾಜ್ಯಗಳ ಆರೋಗ್ಯ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿತ್ತು.

ಇಂದು 9 ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸಭೆ; ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ
ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ
TV9 Web
| Edited By: |

Updated on: Jan 25, 2022 | 8:35 AM

Share

ದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರು ಇಂದು 9 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ವರ್ಚ್ಯುವಲ್​ ಆಗಿ ಸಭೆ ನಡೆಸಲಿದ್ದಾರೆ. ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೊವಿಡ್​ 19 ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬೆಳಗ್ಗೆ 10.30ಕ್ಕೆ ವರ್ಚ್ಯುವಲ್​ ಸಭೆ ನಡೆಯಲಿದೆ ಎಂದು ಎಎನ್​ಐ ತಿಳಿಸಿದೆ. ಇಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರೊಂದಿಗಿನ ಸಭೆಯಲ್ಲಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್​, ಹರ್ಯಾಣ, ಉತ್ತರಾಖಂಡ್​, ದೆಹಲಿ, ಲಡಾಖ್​, ಉತ್ತರಪ್ರದೇಶ ಮತ್ತು ಚಂಡಿಗಢ್​ನ ಆರೋಗ್ಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. 

ಇದಕ್ಕೂ ಮೊದಲು ಕೇಂದ್ರ ಆರೋಗ್ಯ ಇಲಾಖೆ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ದಿಯುದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಅಲ್ಲಿನ ಕೊವಿಡ್​ 19-ಒಮಿಕ್ರಾನ್​ ಪರಿಸ್ಥಿತಿ ಪರಿಶೀಲನೆ ನಡೆಸಿದ್ದರು. ರಾಜ್ಯಗಳಲ್ಲಿರುವ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆಯ ಬಗ್ಗೆ ಪರಿಶೀಲನೆ ನಡೆಸಬೇಕು. ಎಲ್ಲ ಜಿಲ್ಲೆಗಳಲ್ಲೂ ಟೆಲಿಕನ್ಸಲ್ಟೇಶನ್​ ಕೇಂದ್ರಗಳನ್ನು ಸ್ಥಾಪಿಸಬೇಕು. ಹಾಗೇ, ಕೊವಿಡ್​ 19 ವಿರುದ್ಧ ಹೋರಾಡಲು ನಾವು ಸ್ಥಾಪಿಸಿದ ಹೊಸ ಸೌಕರ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ.

ಭಾರತದಲ್ಲಿ ಸೋಮವಾರ  3,06,064 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. 439 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  3,95,43,328ಕ್ಕೆ ಏರಿಕೆಯಾಗಿದೆ. ಮತ್ತು ಮೃತರ ಸಂಖ್ಯೆ 4,89,848ಕ್ಕೆ ತಲುಪಿದೆ. ಭಾರತದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನವೂ ಕೂಡ ಮೂರು ಹಂತದಲ್ಲಿ ವೇಗವಾಗಿ ನಡೆಯುತ್ತಿದೆ. ಸೋಮವಾರದವರೆಗೆ 162.77  ಕೋಟಿ ಡೋಸ್ ಲಸಿಕೆ ನೀಡಲಾಗಿತ್ತು. ಜನವರಿ 10ರಿಂದ ಇಲ್ಲಿಯವರೆಗೆ 87 ಲಕ್ಷ ಮುನ್ನೆಚ್ಚರಿಕೆ ಡೋಸ್​ ನೀಡಲಾಗಿದೆ. ಇನ್ನೊಂದೆಡೆ ಒಮಿಕ್ರಾನ್​ ರೂಪಾಂತರವೆಂಬುದು ಕೊರೊನಾದ ಕೊನೇ ತಳಿ ಎಂಬುದನ್ನು ಊಹಿಸುವುದು ಅಪಾಯ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ದಾಖಲಾಗುತ್ತಿರುವ ಹೊಸ ಕೊವಿಡ್​ 19 ಕೇಸ್​ಗಳಲ್ಲಿ ಶೇ.89ರಷ್ಟು ಒಮಿಕ್ರಾನ್​ ಪ್ರಕರಣಗಳು; ಸಮೀಕ್ಷೆ ವರದಿ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?