AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 9 ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸಭೆ; ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ

ಇದಕ್ಕೂ ಮೊದಲು ಕೇಂದ್ರ ಆರೋಗ್ಯ ಇಲಾಖೆ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ ರಾಜ್ಯಗಳ ಆರೋಗ್ಯ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿತ್ತು.

ಇಂದು 9 ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸಭೆ; ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ
ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ
TV9 Web
| Edited By: |

Updated on: Jan 25, 2022 | 8:35 AM

Share

ದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರು ಇಂದು 9 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ವರ್ಚ್ಯುವಲ್​ ಆಗಿ ಸಭೆ ನಡೆಸಲಿದ್ದಾರೆ. ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೊವಿಡ್​ 19 ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬೆಳಗ್ಗೆ 10.30ಕ್ಕೆ ವರ್ಚ್ಯುವಲ್​ ಸಭೆ ನಡೆಯಲಿದೆ ಎಂದು ಎಎನ್​ಐ ತಿಳಿಸಿದೆ. ಇಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರೊಂದಿಗಿನ ಸಭೆಯಲ್ಲಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್​, ಹರ್ಯಾಣ, ಉತ್ತರಾಖಂಡ್​, ದೆಹಲಿ, ಲಡಾಖ್​, ಉತ್ತರಪ್ರದೇಶ ಮತ್ತು ಚಂಡಿಗಢ್​ನ ಆರೋಗ್ಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. 

ಇದಕ್ಕೂ ಮೊದಲು ಕೇಂದ್ರ ಆರೋಗ್ಯ ಇಲಾಖೆ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ದಿಯುದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಅಲ್ಲಿನ ಕೊವಿಡ್​ 19-ಒಮಿಕ್ರಾನ್​ ಪರಿಸ್ಥಿತಿ ಪರಿಶೀಲನೆ ನಡೆಸಿದ್ದರು. ರಾಜ್ಯಗಳಲ್ಲಿರುವ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆಯ ಬಗ್ಗೆ ಪರಿಶೀಲನೆ ನಡೆಸಬೇಕು. ಎಲ್ಲ ಜಿಲ್ಲೆಗಳಲ್ಲೂ ಟೆಲಿಕನ್ಸಲ್ಟೇಶನ್​ ಕೇಂದ್ರಗಳನ್ನು ಸ್ಥಾಪಿಸಬೇಕು. ಹಾಗೇ, ಕೊವಿಡ್​ 19 ವಿರುದ್ಧ ಹೋರಾಡಲು ನಾವು ಸ್ಥಾಪಿಸಿದ ಹೊಸ ಸೌಕರ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ.

ಭಾರತದಲ್ಲಿ ಸೋಮವಾರ  3,06,064 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. 439 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  3,95,43,328ಕ್ಕೆ ಏರಿಕೆಯಾಗಿದೆ. ಮತ್ತು ಮೃತರ ಸಂಖ್ಯೆ 4,89,848ಕ್ಕೆ ತಲುಪಿದೆ. ಭಾರತದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನವೂ ಕೂಡ ಮೂರು ಹಂತದಲ್ಲಿ ವೇಗವಾಗಿ ನಡೆಯುತ್ತಿದೆ. ಸೋಮವಾರದವರೆಗೆ 162.77  ಕೋಟಿ ಡೋಸ್ ಲಸಿಕೆ ನೀಡಲಾಗಿತ್ತು. ಜನವರಿ 10ರಿಂದ ಇಲ್ಲಿಯವರೆಗೆ 87 ಲಕ್ಷ ಮುನ್ನೆಚ್ಚರಿಕೆ ಡೋಸ್​ ನೀಡಲಾಗಿದೆ. ಇನ್ನೊಂದೆಡೆ ಒಮಿಕ್ರಾನ್​ ರೂಪಾಂತರವೆಂಬುದು ಕೊರೊನಾದ ಕೊನೇ ತಳಿ ಎಂಬುದನ್ನು ಊಹಿಸುವುದು ಅಪಾಯ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ದಾಖಲಾಗುತ್ತಿರುವ ಹೊಸ ಕೊವಿಡ್​ 19 ಕೇಸ್​ಗಳಲ್ಲಿ ಶೇ.89ರಷ್ಟು ಒಮಿಕ್ರಾನ್​ ಪ್ರಕರಣಗಳು; ಸಮೀಕ್ಷೆ ವರದಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!