AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ಲಸಿಕೆ ಪಡೆಯುವವರೇ ಗಮನಿಸಿ; ಕೇಂದ್ರ ಸರ್ಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ

ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ, 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಜನವರಿ 10ರಿಂದ ಕೊರೊನಾ ಲಸಿಕೆ ಕೊಡಲಾಗುತ್ತಿದೆ.

ಕೊವಿಡ್ 19 ಲಸಿಕೆ ಪಡೆಯುವವರೇ ಗಮನಿಸಿ; ಕೇಂದ್ರ ಸರ್ಕಾರದಿಂದ ಬಂದಿದೆ ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 22, 2022 | 3:59 PM

Share

ದೆಹಲಿ: ಬೂಸ್ಟರ್​ ಡೋಸ್ ಸೇರಿ ಕೊವಿಡ್ 19 ಎಲ್ಲ ಲಸಿಕೆಯ (Covid 19 Vaccine) ಎಲ್ಲ ರೀತಿಯ ಡೋಸ್ ತೆಗೆದುಕೊಳ್ಳುವವರೇ ಇರಲಿ..ಇಲ್ಲಿ ಗಮನಿಸಿ. ಕೇಂದ್ರ ಆರೋಗ್ಯ ಸಚಿವಾಲಯ ಒಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಮಿಷನ್ (NHM)ಬಿಡುಗಡೆ ಮಾಡಿರುವ ಹೊಸ ನಿರ್ದೇಶನದ ಅನ್ವಯ, ಯಾವುದೇ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಇರುವುದು ಪ್ರಯೋಗಾಲಯದ ಟೆಸ್ಟ್​​ನಲ್ಲಿ ದೃಢಪಟ್ಟಿದ್ದರೆ, ಅಂಥವರು ಕೊರೊನಾದಿಂದ ಚೇತರಿಸಿಕೊಂಡ ಮೂರು ತಿಂಗಳ ಬಳಿಕ ಕೊರೊನಾ ಲಸಿಕೆ ಪಡೆಯಬೇಕು. ಅದಕ್ಕೂ ಮೊದಲು ಲಸಿಕೆ ಪಡೆಯುವಂತಿಲ್ಲ. ಇದು ಒಂದನೇ ಡೋಸ್, ಎರಡನೇ ಡೋಸ್​ ಮತ್ತು ಇದೀಗ ಆಯ್ದ ವರ್ಗಗಳಿಗೆ ನೀಡಲಾಗುವ ಮೂರನೇ ಡೋಸ್​ ಪಡೆಯುವ ಎಲ್ಲರಿಗೂ ಅನ್ವಯ ಆಗಲಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ವಿಕಾಸ್ ಶೀಲ್​ ಅವರು ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೂ ಪತ್ರ ಬರೆದಿದ್ದಾರೆ. ಇದೀಗ ಕೊವಿಡ್​ 19 ಲಸಿಕೆ ಮುನ್ನೆಚ್ಚರಿಕೆ ಡೋಸ್ ನೀಡುವ ಅಭಿಯಾನವೂ ಶುರುವಾಗಿದೆ. ಕೆಲವರು ಎರಡೂ ಡೋಸ್​ ಪಡೆದಿದ್ದರೂ ಸೌಮ್ಯ ಲಕ್ಷಣವುಳ್ಳ ಕೊರೊನಾಕ್ಕೆ ಒಳಗಾಗಿದ್ದಾರೆ. ಇಂಥವರಿಗೆ ಮೂರನೇ ಡೋಸ್ ಪಡೆಯುವ ಅವಧಿಯಾಗಿದ್ದು, ಅವರಿಗೆ ಲಸಿಕೆ ನೀಡಬೇಕಾ? ಬೇಡವಾ ಎಂದು ಸ್ಪಷ್ಟಪಡಿಸಿ ಎಂದು ಹಲವು ಕಡೆಗಳಿಂದ ನಮಗೆ ಮನವಿಗಳು ಬಂದಿದ್ದವು.  ಹೀಗಾಗಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತಿದ್ದೇವೆ. ಯಾವುದೇ ಕೊವಿಡ್ 19 ಲಸಿಕೆ ಇರಲಿ, ಅದು ಎಷ್ಟನೇ ಡೋಸ್​ ಬೇಕಾದರೂ ಆಗಿರಲಿ..ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಗಳು ಅದರಿಂದ ಚೇತರಿಸಿಕೊಂಡ ಮೂರು ತಿಂಗಳ ಬಳಿಕವೇ ಲಸಿಕೆ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ದೇಶದಲ್ಲಿ ಒಂದೆಡೆ ವಯಸ್ಕರಿಗೆ ಕೊರೊನಾ ಲಸಿಕೆ ನೀಡಿಕೆ ನಡೆಯುತ್ತಿದ್ದರೆ, 15-18 ವರ್ಷದರಿಗೆ ಜನವರಿ 3ರಿಂದ ಕೊವಿಡ್​ 19 ಲಸಿಕೆ ನೀಡಲಾಗುತ್ತಿದೆ. ಹಾಗೇ, ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ, 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಜನವರಿ 10ರಿಂದ ಕೊರೊನಾ ಲಸಿಕೆ ಕೊಡಲಾಗುತ್ತಿದೆ. ಅದರಲ್ಲಿ ಹೀಗೆ ಮೂರನೇ ಡೋಸ್ ಪಡೆಯುವವರು, ಎರಡನೇ ಡೋಸ್ ಪಡೆದು 39 ವಾರಗಳು (9 ತಿಂಗಳು) ಕಳೆದಿರಬೇಕು. ಆದರೆ ಹೀಗೆ 9 ತಿಂಗಳು ಕಳೆದಿದ್ದರೂ, ಒಂದೊಮ್ಮೆ ಕೊರೊನಾ ಸೋಂಕು ತಗುಲಿದೆ ಎಂದಾದರೆ ಅವರು ಕೊವಿಡ್ 19 ಲಸಿಕೆ ಸದ್ಯಕ್ಕೆ ಪಡೆಯುವಂತಿಲ್ಲ. ಸಂಪೂರ್ಣ ಗುಣಮುಖರಾಗಿ 3ತಿಂಗಳ ನಂತರ ತಮ್ಮ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ. ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮಾಡಿದ್ದ ಶಿಫಾರಸ್ಸಿನ ಅನ್ವಯ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ವಿಕಾಸ್​ ಶೀಲ್​ ತಿಳಿಸಿದ್ದಾರೆ.

ಇದನ್ನೂ ಓದಿ: ಹೇಗೆ ಸಾಗ್ತಿದೆ ಮೇಘನಾ ರಾಜ್​ ಕಮ್​ಬ್ಯಾಕ್​ ಜರ್ನಿ? ವಿಡಿಯೋ ಮೂಲಕ ಖುಷಿ ಹಂಚಿಕೊಂಡ ನಟಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ