AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಒತ್ತಡದಿಂದಾಗಿ ಕೋವಾಕ್ಸಿನ್‌ಗೆ ಅನುಮೋದನೆ ನೀಡಲಾಗಿದೆ ಎಂಬ ಮಾಧ್ಯಮ ವರದಿಯಲ್ಲಿ ಹುರುಳಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್​​ನ ವಿಷಯ ತಜ್ಞರ ಸಮಿತಿಯು ಜನವರಿ 1 ಮತ್ತು 2, 2021 ರಂದು ಸಭೆ ನಡೆಸಿದ್ದು ಭಾರತ್ ಬಯೋಟೆಕ್‌ನ ಕೋವಿಡ್ ಲಸಿಕೆಗೆ ನಿರ್ಬಂಧಿತ ತುರ್ತು ಅನುಮೋದನೆಯ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸೂಕ್ತ ಚರ್ಚೆಗಳ ನಂತರ ಶಿಫಾರಸುಗಳನ್ನು ಮಾಡಿದೆ.

ರಾಜಕೀಯ ಒತ್ತಡದಿಂದಾಗಿ ಕೋವಾಕ್ಸಿನ್‌ಗೆ ಅನುಮೋದನೆ ನೀಡಲಾಗಿದೆ ಎಂಬ ಮಾಧ್ಯಮ ವರದಿಯಲ್ಲಿ ಹುರುಳಿಲ್ಲ: ಕೇಂದ್ರ ಆರೋಗ್ಯ ಸಚಿವಾಲಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 17, 2022 | 4:14 PM

Share

ದೆಹಲಿ: ರಾಜಕೀಯ ಒತ್ತಡದಿಂದಾಗಿ ಕೋವಿಡ್-19 ಲಸಿಕೆ ಕೋವಾಕ್ಸಿನ್‌ಗೆ (Covaxin)ನಿಯಂತ್ರಕ ಅನುಮೋದನೆಯನ್ನು ತರಾತುರಿಯಲ್ಲಿ ಮಾಡಲಾಗಿದೆ ಎಂಬ ಮಾಧ್ಯಮ ವರದಿ ಸತ್ಯಕ್ಕೆ ದೂರವಾದುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ (Union Health Ministry)ಹೇಳಿದೆ. ತುರ್ತು ಬಳಕೆಯ ಅಧಿಕಾರಕ್ಕಾಗಿ ಕೋವಿಡ್-19(Covid-19) ಲಸಿಕೆಗಳನ್ನು ಅನುಮೋದಿಸುವಲ್ಲಿ ವೈಜ್ಞಾನಿಕ ವಿಧಾನ ಮತ್ತು ನಿಗದಿತ ಮಾನದಂಡಗಳನ್ನುಅನುಸರಿಸಲಾಗಿದೆ ಎಂದು ಅದು ಹೇಳಿದೆ. ಸ್ಥಳೀಯ ಕೋವಿಡ್-19 ಲಸಿಕೆ ಕೋವಾಕ್ಸಿನ್‌ನ ತಯಾರಕರಾದ ಭಾರತ್ ಬಯೋಟೆಕ್ ಮಾಡಿದ ರಾಜಕೀಯ ಒತ್ತಡದಿಂದಾಗಿ ಕೆಲವು ಪ್ರಕ್ರಿಯೆಗಳನ್ನು ಬಿಟ್ಟುಬಿಡಬೇಕಾಯಿತು. ಅದಕ್ಕಾಗಿ ಕೆಲವು ಕ್ಲಿನಿಕಲ್ ಪ್ರಯೋಗಗಳನ್ನು ವೇಗಗೊಳಿಸಬೇಕಾಯಿತು. ಲಸಿಕೆಗಾಗಿ ನಡೆಸಿದ ಕ್ಲಿನಿಕಲ್ ಪ್ರಯೋಗಗಳ ಮೂರು ಹಂತಗಳಲ್ಲಿ ಹಲವಾರು ಅಕ್ರಮಗಳು ನಡೆದಿವೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಮಾಧ್ಯಮ ವರದಿಗಳು ಸಂಪೂರ್ಣವಾಗಿ ತಪ್ಪುದಾರಿಗೆಳೆಯುವ, ಸುಳ್ಳು ಮತ್ತು ಮಾಹಿತಿಯಿಲ್ಲದವು. ಭಾರತ ಸರ್ಕಾರ ಮತ್ತು ರಾಷ್ಟ್ರೀಯ ನಿಯಂತ್ರಕ (CDSCO) ತುರ್ತು ಬಳಕೆಯ ಅಧಿಕಾರಕ್ಕಾಗಿ ಕೋವಿಡ್ ಲಸಿಕೆಗಳನ್ನು ಅನುಮೋದಿಸುವಲ್ಲಿ ವೈಜ್ಞಾನಿಕ ವಿಧಾನ ಮತ್ತು ನಿಯಮಾವಳಿಗಳನ್ನು ಅನುಸರಿಸಿದೆ ಎಂದು ಸಚಿವಾಲಯ ಹೇಳಿದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ದ ವಿಷಯ ತಜ್ಞರ ಸಮಿತಿಯು (SEC) ಜನವರಿ 1 ಮತ್ತು 2, 2021 ರಂದು ಸಭೆ ನಡೆಸಿದ್ದು ಭಾರತ್ ಬಯೋಟೆಕ್‌ನ ಕೋವಿಡ್ ಲಸಿಕೆಗೆ ನಿರ್ಬಂಧಿತ ತುರ್ತು ಅನುಮೋದನೆಯ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸೂಕ್ತ ಚರ್ಚೆಗಳ ನಂತರ ಶಿಫಾರಸುಗಳನ್ನು ಮಾಡಿದೆ. ಜನವರಿ 2021 ರಲ್ಲಿ ನಿರ್ಬಂಧಿತ ತುರ್ತು ಬಳಕೆಗಾಗಿ ಕೋವಾಕ್ಸಿನ್ ಅನ್ನು ಅನುಮೋದಿಸುವ ಮೊದಲು, , ವಿಷಯ ತಜ್ಞರ ಸಮಿತಿಯು ಲಸಿಕೆಯ ಸುರಕ್ಷತೆ ಮತ್ತು ಇಮ್ಯುನೊಜೆನಿಸಿಟಿಯ ಡೇಟಾವನ್ನು ಪರಿಶೀಲಿಸಿದೆ ಮತ್ತು ಸಾರ್ವಜನಿಕ ಹಿತಾಸಕ್ತಿಯಲ್ಲಿ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗೆ ಅನುಮತಿ ನೀಡಲು ಶಿಫಾರಸು ಮಾಡಿದೆ.

ಕೋವಾಕ್ಸಿನ್‌ನ ಪ್ರಸ್ತಾವಿತ ಡೋಸ್‌ನ ಹಂತ 3 ಕ್ಲಿನಿಕಲ್ ಪ್ರಯೋಗವನ್ನು ಪ್ರಾರಂಭಿಸಲು ಎಸ್‌ಇಸಿಯ ಅನುಮೋದನೆಯು ಭಾರತ್ ಬಯೋಟೆಕ್ ಮತ್ತು ಈ ನಿಟ್ಟಿನಲ್ಲಿ ಸ್ಥಾಪಿತ ಅಭ್ಯಾಸಗಳನ್ನು ಪ್ರಸ್ತುತಪಡಿಸಿದ ವೈಜ್ಞಾನಿಕ ಡೇಟಾವನ್ನು ಆಧರಿಸಿದೆ ಎಂದು ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲದೆ CDSCO ನಲ್ಲಿ ಭಾರತ್ ಬಯೋಟೆಕ್ ಸಲ್ಲಿಸಿದ ನಂತರ, CDSCO ನಲ್ಲಿ ಸರಿಯಾದ ಪ್ರಕ್ರಿಯೆಯ ಅನುಸರಣೆ ಮತ್ತು DGCI ಯಿಂದ ಅನುಮೋದನೆಯ ನಂತರ ಮಾಧ್ಯಮಗಳು ಅವೈಜ್ಞಾನಿಕ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿವೆ.

ಭಾರತ್ ಬಯೋಟೆಕ್ ಮಾಡಿದ  ಸಲ್ಲಿಕೆ ಮತ್ತು ರಾಷ್ಟ್ರೀಯ ನಿಯಂತ್ರದ  ತಜ್ಞರ  ಸಮಿತಿಯಿಂದ ಮಧ್ಯಂತರ ಪರಿಣಾಮಕಾರಿತ್ವ ಮತ್ತು ಸುರಕ್ಷತಾ ದತ್ತಾಂಶದ ಮೌಲ್ಯಮಾಪನದ ಆಧಾರದ ಮೇಲೆ, ಮಾರ್ಚ್ 11, 2021 ರಂದು ಕೋವಿಡ್ ಲಸಿಕೆ ನೀಡಿಕೆಯ ‘ಕ್ಲಿನಿಕಲ್ ಟ್ರಯಲ್ ಮೋಡ್’ ತೆಗೆದುಹಾಕಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ವಿವಿಧ ಷರತ್ತುಗಳು ಮತ್ತು ನಿರ್ಬಂಧಗಳೊಂದಿಗೆ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗಾಗಿ ಕೋವಾಕ್ಸಿನ್ ಸೇರಿದಂತೆ ಕೋವಿಡ್ ಲಸಿಕೆಗಳಿಗೆ ಅಧಿಕಾರವನ್ನು CDSCO ನ ವಿಷಯ ತಜ್ಞರ ಸಮಿತಿಯ ಶಿಫಾರಸುಗಳ ಮೇರೆಗೆ ಮಾತ್ರ ರಾಷ್ಟ್ರೀಯ ನಿಯಂತ್ರಕರಿಂದ ನೀಡಲಾಯಿತು. ವಿಷಯ ತಜ್ಞರ ಸಮಿತಿಯು ಪಲ್ಮನಾಲಜಿ, ಇಮ್ಯುನೊಲಾಜಿ, ಮೈಕ್ರೋಬಯಾಲಜಿ, ಫಾರ್ಮಕಾಲಜಿ, ಪೀಡಿಯಾಟ್ರಿಕ್ಸ್, ಇಂಟರ್ನಲ್ ಮೆಡಿಸಿನ್ ಇತ್ಯಾದಿ ಕ್ಷೇತ್ರಗಳ ತಜ್ಞರನ್ನು ಒಳಗೊಂಡಿದೆ.

Published On - 4:08 pm, Thu, 17 November 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ