Amit Shah: ‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

ಸೋಮವಾರ ಸಂಸತ್ತಿನ ಗ್ರಂಥಾಲಯದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ "ದಂಡ" ಬದಲಿಗೆ, ಅದು ಈಗ "ನ್ಯಾಯ" ಆಗಿದೆ. ವಿಳಂಬದ ಬದಲಿಗೆ, ತ್ವರಿತ ವಿಚಾರಣೆ ಮತ್ತು ತ್ವರಿತ ನ್ಯಾಯ ಇರುತ್ತದೆ, ಮೊದಲು, ಪೊಲೀಸರ ಹಕ್ಕುಗಳನ್ನು ಮಾತ್ರ ರಕ್ಷಿಸಲಾಗಿದೆ ಆದರೆ ಈಗ, ಸಂತ್ರಸ್ತರು ಮತ್ತು ದೂರುದಾರರ ಹಕ್ಕುಗಳನ್ನು ಸಹ ರಕ್ಷಿಸಲಾಗುತ್ತದೆ ಎಂದಿದ್ದಾರೆ.

Amit Shah: 'ದಂಡ' ಬದಲು 'ನ್ಯಾಯ': ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ
ಅಮಿತ್ ಶಾ
Follow us
|

Updated on:Jul 01, 2024 | 2:00 PM

ದೆಹಲಿ ಜುಲೈ 01: ಹೊಸ ಕ್ರಿಮಿನಲ್ ಕಾನೂನುಗಳು (new criminal laws) ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು 77 ವರ್ಷಗಳ ನಂತರ, ಅಪರಾಧ ನ್ಯಾಯ ವ್ಯವಸ್ಥೆಯು ಈಗ ಸಂಪೂರ್ಣವಾಗಿ ‘ಸ್ವದೇಶಿ’ ಆಗಿದ್ದು, ಭಾರತೀಯ ಮೌಲ್ಯಗಳ ಮೇಲೆ ಕಾರ್ಯನಿರ್ವಹಿಸುತ್ತಿದೆ. 75 ವರ್ಷಗಳ ನಂತರ ವಸಾಹತುಶಾಹಿ ಕಾನೂನುಗಳನ್ನು ಭಾರತೀಯ ಸಂಸತ್ತು ಜಾರಿಗೆ ತಂದ ಹೊಸ ಕಾನೂನುಗಳೊಂದಿಗೆ ಜುಲೈ 1 ರ ಸೋಮವಾರದಿಂದ ಜಾರಿಗೆ ಬಂದಿದೆ ಎಂದು ಅವರು ಒತ್ತಿ ಹೇಳಿದರು.

“ದಂಡ” ಬದಲಿಗೆ, ಅದು ಈಗ “ನ್ಯಾಯ” ಆಗಿದೆ. ವಿಳಂಬದ ಬದಲಿಗೆ, ತ್ವರಿತ ವಿಚಾರಣೆ ಮತ್ತು ತ್ವರಿತ ನ್ಯಾಯ ಇರುತ್ತದೆ, ಮೊದಲು, ಪೊಲೀಸರ ಹಕ್ಕುಗಳನ್ನು ಮಾತ್ರ ರಕ್ಷಿಸಲಾಗಿದೆ ಆದರೆ ಈಗ, ಸಂತ್ರಸ್ತರು ಮತ್ತು ದೂರುದಾರರ ಹಕ್ಕುಗಳನ್ನು ಸಹ ರಕ್ಷಿಸಲಾಗುತ್ತದೆ. ” ಎಂದು ಶಾ ಹೇಳಿದ್ದಾರೆ.

ಅಮಿತ್ ಶಾ ಸುದ್ದಿಗೋಷ್ಠಿ

ಹೊಸ ದೃಷ್ಟಿಕೋನವನ್ನು ಪ್ರತಿಬಿಂಬಿಸುವ ಮೂರು ಹೊಸ ಕಾನೂನುಗಳು ಮಧ್ಯರಾತ್ರಿಯಿಂದ ಜಾರಿಗೆ ಬಂದಿವೆ. “ಈಗ, ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಇರುತ್ತದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಇರುತ್ತದೆ. ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್ಎ) ಇರುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಅಪರಾಧಗಳ ಕುರಿತು ಮಾತನಾಡಿದ ಶಾ, ಹೊಸ ಕಾನೂನು ಸಂತ್ರಸ್ತರ ಹೇಳಿಕೆಯನ್ನು ಅವರ ಮನೆಯಲ್ಲಿ ದಾಖಲಿಸಲು ಅವಕಾಶ ಒದಗಿಸುತ್ತದೆ,  ಸಾಮಾಜಿಕ ನಿಂದೆಯಿಂದ ಅವಳನ್ನು ರಕ್ಷಿಸುವ ಆನ್‌ಲೈನ್ ಎಫ್‌ಐಆರ್ ಸೌಲಭ್ಯದ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ.

ಇದನ್ನೂ ಓದಿ: Arvind Kejriwal: ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ಗುಂಪು ಹತ್ಯೆ ಪ್ರಕರಣಕ್ಕೆ ಕಾನೂನಿನಲ್ಲಿ ಅವಕಾಶವಿರಲಿಲ್ಲ. ಅದನ್ನು ಈಗ ವ್ಯಾಖ್ಯಾನಿಸಲಾಗಿದೆ. ಇದು ಬಹುಕಾಲದ ಬೇಡಿಕೆಯಾಗಿತ್ತು. ಅಲ್ಲದೆ ದೇಶದ್ರೋಹದ ಸೆಕ್ಷನ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕಿ ದೇಶ ವಿರೋಧಿ ಚಟುವಟಿಕೆಗಳಿಗೆ ಹೊಸ ಸೆಕ್ಷನ್ ತಂದಿದ್ದೇವೆ. ಈ ಹಿಂದೆ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಅಪರಾಧ. ಈಗ, ಭಾರತದ ಏಕತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇದೆ ”ಎಂದು ಅವರು ಹೇಳಿದ್ದಾರೆ.

ಅಮಿತ್ ಶಾ ಸುದ್ದಿಗೋಷ್ಠಿಯ ಮುಖ್ಯಾಂಶಗಳು

  • ‘ದಂಡ್’ ಬದಲಿಗೆ ಈಗ ‘ನ್ಯಾಯ್’ ಆಗಿದೆ. ವಿಳಂಬದ ಬದಲಿಗೆ, ತ್ವರಿತ ವಿಚಾರಣೆ ಮತ್ತು ತ್ವರಿತ ನ್ಯಾಯ ಇರುತ್ತದೆ.
  • ಮೊದಲು ಪೊಲೀಸರ ಹಕ್ಕುಗಳನ್ನು ಮಾತ್ರ ರಕ್ಷಿಸಲಾಗುತ್ತಿತ್ತು, ಆದರೆ ಈಗ ಸಂತ್ರಸ್ತರು ಮತ್ತು ದೂರುದಾರರ ಹಕ್ಕುಗಳನ್ನು ರಕ್ಷಿಸಲಾಗುವುದು.
  • ಭಾರತೀಯ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ವಿಭಾಗಗಳು ಮತ್ತು ಅಧ್ಯಾಯಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ಅಧ್ಯಾಯಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. 35 ವಿಭಾಗಗಳು ಮತ್ತು 13 ನಿಬಂಧನೆಗಳೊಂದಿಗೆ ಸಂಪೂರ್ಣ ಅಧ್ಯಾಯವನ್ನು ಸೇರಿಸಲಾಗಿದೆ.
  • ಈಗ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಕರ ಅತ್ಯಾಚಾರಕ್ಕೆ  ಮರಣದಂಡನೆ. ಒಬ್ಬರ ಗುರುತನ್ನು ಮರೆಮಾಚುವ ಮೂಲಕ ಅಥವಾ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಲೈಂಗಿಕ ಶೋಷಣೆಗಾಗಿ ಪ್ರತ್ಯೇಕ ಅಪರಾಧವನ್ನು ವ್ಯಾಖ್ಯಾನಿಸಲಾಗಿದೆ.
  • ಸಂತ್ರಸ್ತೆಯ ಹೇಳಿಕೆಯನ್ನು ಆಕೆಯ ಮನೆಯಲ್ಲಿಯೇ ಮಹಿಳಾ ಅಧಿಕಾರಿಗಳು ಮತ್ತು ಅವರ ಕುಟುಂಬದವರ ಸಮ್ಮುಖದಲ್ಲಿ ದಾಖಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್ ಎಫ್‌ಐಆರ್‌ನ ಸೌಲಭ್ಯವನ್ನು ಸಹ ಒದಗಿಸಲಾಗಿದೆ, ಈ ಮೂಲಕ ಬಹಳಷ್ಟು ಮಹಿಳೆಯರನ್ನು ಮುಜುಗರದಿಂದ ರಕ್ಷಿಸಬಹುದು ಎಂದು ನಾವು ನಂಬುತ್ತೇವೆ.
  • ಮೊಟ್ಟಮೊದಲ ಬಾರಿಗೆ ಗುಂಪು ಹತ್ಯೆಯನ್ನು ವ್ಯಾಖ್ಯಾನಿಸಲಾಗಿದ್ದು, ಅಪರಾಧಿಗಳಿಗೆ 7 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
  • ಮುಂದಿನ ಐವತ್ತು ವರ್ಷಗಳನ್ನು ಪರಿಗಣಿಸಿ ಭವಿಷ್ಯದ ತಾಂತ್ರಿಕ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನುಗಳನ್ನು ವಿನ್ಯಾಸಗೊಳಿಸಲಾಗಿದೆ. 99.9 ರಷ್ಟು ಪೊಲೀಸ್ ಠಾಣೆಗಳು ಈಗ ಗಣಕೀಕರಣಗೊಂಡಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:15 pm, Mon, 1 July 24

ತಾಜಾ ಸುದ್ದಿ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
‘ನನ್ನ ದೇವ್ರು’ ಮೂಲಕ ಕಿರತೆರೆಗೆ ಮರಳಿದ ಅಶ್ವಿನಿ ನಕ್ಷತ್ರದ ‘ಹೆಂಡ್ತಿ’
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
ಯುವತಿಯರ ಮುಂದೆ ಬಾಡಿ ಪ್ರದರ್ಶಿಸುತ್ತಿದ್ದ ಯುವಕನಿಗೆ ಪಾಠ ಕಲಿಸಿದ  ಪೊಲೀಸರು
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
‘ರೇಣುಕಾಸ್ವಾಮಿ ಮುಗ್ಧನಲ್ಲ, ವಿಕೃತಕಾಮಿ’; ವಿ ಮನೋಹರ್ ಹೇಳಿಕೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ