AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ನಲ್ಲಿ ಉತ್ತರಾಯಣ ಪತಂಗ್ ಮಹೋತ್ಸವದಲ್ಲಿ ಗಾಳಿಪಟ ಹಾರಿಸಿದ ಅಮಿತ್ ಶಾ

ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುವ ಈ ಹಬ್ಬವನ್ನು ದೇಶದ ವಿವಿಧ ಭಾಗಗಳಲ್ಲಿ ಪೊಂಗಲ್, ಬಿಹು ಮತ್ತು ಮಾಘಿ ಎಂದು ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ದೇಶದ ಹಲವಾರು ಭಾಗಗಳಲ್ಲಿ ಭಕ್ತರು ವಿವಿಧ ಘಾಟ್‌ಗಳಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಗುಜರಾತಿನಲ್ಲಿ, ಈ ಹಬ್ಬವನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ.

ಗುಜರಾತ್‌ನಲ್ಲಿ ಉತ್ತರಾಯಣ ಪತಂಗ್ ಮಹೋತ್ಸವದಲ್ಲಿ ಗಾಳಿಪಟ ಹಾರಿಸಿದ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 14, 2024 | 7:27 PM

Share

ಅಹಮದಾಬಾದ್ ಜನವರಿ 14: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಭಾನುವಾರ ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ ಉತ್ತರಾಯಣ ಪತಂಗ್ ಮಹೋತ್ಸವದಲ್ಲಿ ಪಾಲ್ಗೊಂಡು ಉತ್ತರಾಯಣ ಆಚರಣೆಯ ಭಾಗವಾಗಿ ಬೆಂಬಲಿಗರೊಂದಿಗೆ ಗಾಳಿಪಟ (kite)ಹಾರಿಸಿದರು. ಭಾನುವಾರ ಬೆಳಗ್ಗೆ ಕೇಂದ್ರ ಗೃಹ ಸಚಿವರು ಅಹಮದಾಬಾದ್‌ನ ಜಗನ್ನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಭಾರತೀಯ ಕ್ಯಾಲೆಂಡರ್‌ನಲ್ಲಿ ಪ್ರಮುಖ ಹಬ್ಬವಾದ ಭಕ್ತರು ಮಕರ ಸಂಕ್ರಾಂತಿಯಂದು ಹಿಂದೂ ದೇವತೆಯಾದ ಸೂರ್ಯನಿಗೆ ಅರ್ಪಣೆಗಳನ್ನು ಮಾಡುತ್ತಾರೆ. ಈ ದಿನವು ಸೂರ್ಯನ ಮಕರಕ್ಕೆ ಸಾಗುವ ಮೊದಲ ದಿನವನ್ನು ಸೂಚಿಸುತ್ತದೆ, ಇದು ಚಳಿಗಾಲದ ಆಯನ ಸಂಕ್ರಾಂತಿಯ ಅಂತ್ಯ ಮತ್ತು ದೀರ್ಘ ದಿನಗಳ ಆರಂಭವನ್ನು ಸೂಚಿಸುತ್ತದೆ.

ಪ್ರತಿ ವರ್ಷ ಜನವರಿ 14 ರಂದು ಆಚರಿಸಲಾಗುವ ಈ ಹಬ್ಬವನ್ನು ದೇಶದ ವಿವಿಧ ಭಾಗಗಳಲ್ಲಿ ಪೊಂಗಲ್, ಬಿಹು ಮತ್ತು ಮಾಘಿ ಎಂದು ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ದೇಶದ ಹಲವಾರು ಭಾಗಗಳಲ್ಲಿ ಭಕ್ತರು ವಿವಿಧ ಘಾಟ್‌ಗಳಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಗುಜರಾತಿನಲ್ಲಿ, ಈ ಹಬ್ಬವನ್ನು ಉತ್ತರಾಯಣ ಎಂದು ಆಚರಿಸಲಾಗುತ್ತದೆ. ಏಕೆಂದರೆ ಇದು ಮಕರದಲ್ಲಿ ಸೂರ್ಯನ ಸಂಕ್ರಮಣದ ಮೊದಲ ದಿನವನ್ನು ಸೂಚಿಸುತ್ತದೆ.

ರಾಜ್ಯವು ತನ್ನ ಅಂತರಾಷ್ಟ್ರೀಯ ಗಾಳಿಪಟ ಹಾರುವ ಉತ್ಸವಕ್ಕೆ ಹೆಸರುವಾಸಿಯಾಗಿದೆ. ಬೆಳಗಿನ ಪ್ರಾರ್ಥನೆಯನ್ನು ಮುಗಿಸಿದ ನಂತರ, ಜನರು ತಮ್ಮ ಟೆರೇಸ್‌ಗಳಲ್ಲಿ ಬಣ್ಣಬಣ್ಣದ ಗಾಳಿಪಟ ಹಾರಿಸುತ್ತಾರೆ.

ಇದನ್ನೂ ಓದಿ: ಅಮಿತ್ ಶಾ, ಜೆಪಿ ನಡ್ಡಾಗೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ನೀಡಿದ VHP

ಗಾಳಿಪಟ ಹಾರಿಸುವ ಹಬ್ಬದಲ್ಲಿ ಸೋತ ತಂಡಕ್ಕೆ ಕೈ ಪೋ ಚೆ ಎಂದು ಕೂಗುವುದು ಸಾಮಾನ್ಯವಾಗಿ ಕೇಳಿಬರುತ್ತದೆ. ಅದು ಬಿಟ್ಟರೆ, ಎಳ್ಳು, ಕಡಲೆಕಾಳುಗಳಿಂದ ಮಾಡಿದ ಚಿಕ್ಕಿ, ಚಳಿಗಾಲದ ತರಕಾರಿಗಳಿಂದ ಮಾಡಿದ ಉಂಡಿಯು ಮುಂತಾದ ಖಾದ್ಯಗಳನ್ನು ಜನರು ತಿನ್ನುತ್ತಾರೆ. ಸ್ನೇಹದ ಬಂಧವನ್ನು ಗಟ್ಟಿಗೊಳಿಸುವುದಕ್ಕೂ ಹೆಸರುವಾಸಿಯಾದ ಈ ಹಬ್ಬದಂದು ಖಿಚಡಿ, ಗಾಳಿಪಟ ಹಾರಿಸುವುದು, ಎಳ್ಳು ಸಿಹಿತಿಂಡಿಗಳು ಮತ್ತು ತೆಂಗಿನಕಾಯಿ ಲಡ್ಡು ಮಾಡಿ ಸಂಭ್ರಮಿಸುತ್ತಾರೆ.

ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಸಚಿವ ಜಿತು ವಘಾನಿ ಅವರು ರಾಜ್‌ಕೋಟ್‌ನಲ್ಲಿ ಗಾಳಿಪಟ ಹಾರಿಸುವ ಮೂಲಕ ಕಾರ್ಮಿಕರೊಂದಿಗೆ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಿದರು. ಮೆಹ್ಸಾನಾದಲ್ಲಿ ರೈಲ್ವೇ ಖಾತೆಯ ರಾಜ್ಯ ಸಚಿವ ದರ್ಶನ ಜರ್ದೋಶ್ ಕೂಡ ಉತ್ತರಾಯಣವನ್ನು ಆಚರಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ