AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?
ದೇವಬಂದ್​​ನಲ್ಲಿ ಗೃಹ ಸಚಿವ ಅಮಿತ್​ ಶಾ
TV9 Web
| Edited By: |

Updated on: Jan 29, 2022 | 4:43 PM

Share

ಉತ್ತರ ಪ್ರದೇಶದ ದೇವಬಂದ್​ನಲ್ಲಿ (Deoband In Uttar Pradesh) ಇಂದು ನಡೆಸಬೇಕಿದ್ದ ಚುನಾವಣಾ ಪ್ರಚಾರವನ್ನು ಗೃಹ ಸಚಿವ ಅಮಿತ್​ ಶಾ (Union Home Minister Amit Shah) ಮೊಟಕುಗೊಳಿಸಿದ್ದಾರೆ. ಚುನಾವಣಾ ಆಯೋಗ ಹೇರಿರುವ ಮಿತಿಗೂ ಮೀರಿ ಇಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಪ್ರಚಾರವನ್ನು ಸದ್ಯ ಕೈಬಿಟ್ಟಿದ್ದಾರೆ. ನಂತರ ಮುಜಾಫರ್​ನಗರದ ದೇವಬಂದ್​ ಬಜಾರ್​ಗೆ ತೆರಳಿದ ಅಮಿತ್​ ಶಾ, ಅಲ್ಲಿನ ಶಿವನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೆ, ಜನ ಸಂಪರ್ಕ ಅಭಿಯಾನದಡಿ (Jan Sampark Abhiyan) ಮತದಾರರನ್ನು ಸಂಪರ್ಕಿಸಿ, ಚುನಾವಣಾ ಪ್ರಚಾರ ಕರಪತ್ರ ನೀಡಿದ್ದಾರೆ. 

ಗೃಹ ಸಚಿವ ಅಮಿತ್​ ಶಾ ಉತ್ತರಪ್ರದೇಶದಲ್ಲಿ ಮನೆ-ಮನೆ ಪ್ರಚಾರ ನಡೆಸುತ್ತ, ಜನರಿಗೆ ಕರಪತ್ರ ಹಂಚುತ್ತಿದ್ದಾರೆ. ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ. ಇಂದು ಕೂಡ ಅಮಿತ್​ ಶಾ ದೇವಬಂದ್​​ನಲ್ಲಿ ಮನೆ-ಮನೆ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆದರೆ ಒಮ್ಮೆಲೇ ಅತ್ಯಂತ ಹೆಚ್ಚು ಜನ ಸೇರಿದ್ದರಿಂದ, ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.

ದೇವಬಂದ್​ಗೆ ಭೇಟಿ ನೀಡಿದ ಅಮಿತ್​ ಶಾರನ್ನು ಅಲ್ಲಿನ ಜನರು ಪ್ರೀತಿಯಿಂದ ಸ್ವಾಗತಿಸಿ, ಬಿಜೆಪಿ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ ವಿಡಿಯೋಗಳೂ ವೈರಲ್​ ಆಗಿವೆ. ಹಾಗೇ, ತಮ್ಮ ದೇವಬಂದ್​ ಪ್ರಚಾರ ಕೆಲವೇ ಹೊತ್ತು ನಡೆದರೂ, ಅಲ್ಲಿನ ಜನರು ಬಿಜೆಪಿಗೆ ಅಪಾರ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂತು. ದೇವಬಂದ್​ ಜನತೆಯ ಪ್ರೀತಿ-ವಿಶ್ವಾಸ ಬಿಜೆಪಿಗೆ ಇದೆ ಎಂದು ಅಮಿತ್​ ಶಾ ಕೂಡ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಇಂದು ದೇವ್​ಬಂದ್​​ನಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್​ ಶಾರಿಗೆ ಅಲ್ಲಿನ ಮಹಿಳೆಯರು, ಮಕ್ಕಳು ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ಹೂಮಳೆಗರೆದಿದ್ದಾರೆ. ಒಂದಷ್ಟು ಮಂದಿ ಡ್ರಮ್​​ ಬಾರಿಸುತ್ತ, ರಸ್ತೆಗಳಲ್ಲಿ ನೃತ್ಯ ಮಾಡುವ ಮೂಲಕ ಅಮಿತ್​ ಶಾರನ್ನು ಸ್ವಾಗತಿಸಿದ್ದಾರೆ.  ಒಟ್ಟಾರೆ ತುಂಬ ಉತ್ಸಾಹಭರಿತರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:  Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Follow Us
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್
‘ಸುಮ್ನೆ ಹೋಗಲೋ’; ಕೆಣಕಿದ ಸಿಎಸ್​​ಕೆ ಆಟಗಾರನಿಗೆ ಮೈಚಳಿ ಬಿಡಿಸಿದ ತಿಲಕ್