AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?
ದೇವಬಂದ್​​ನಲ್ಲಿ ಗೃಹ ಸಚಿವ ಅಮಿತ್​ ಶಾ
TV9 Web
| Edited By: |

Updated on: Jan 29, 2022 | 4:43 PM

Share

ಉತ್ತರ ಪ್ರದೇಶದ ದೇವಬಂದ್​ನಲ್ಲಿ (Deoband In Uttar Pradesh) ಇಂದು ನಡೆಸಬೇಕಿದ್ದ ಚುನಾವಣಾ ಪ್ರಚಾರವನ್ನು ಗೃಹ ಸಚಿವ ಅಮಿತ್​ ಶಾ (Union Home Minister Amit Shah) ಮೊಟಕುಗೊಳಿಸಿದ್ದಾರೆ. ಚುನಾವಣಾ ಆಯೋಗ ಹೇರಿರುವ ಮಿತಿಗೂ ಮೀರಿ ಇಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಪ್ರಚಾರವನ್ನು ಸದ್ಯ ಕೈಬಿಟ್ಟಿದ್ದಾರೆ. ನಂತರ ಮುಜಾಫರ್​ನಗರದ ದೇವಬಂದ್​ ಬಜಾರ್​ಗೆ ತೆರಳಿದ ಅಮಿತ್​ ಶಾ, ಅಲ್ಲಿನ ಶಿವನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೆ, ಜನ ಸಂಪರ್ಕ ಅಭಿಯಾನದಡಿ (Jan Sampark Abhiyan) ಮತದಾರರನ್ನು ಸಂಪರ್ಕಿಸಿ, ಚುನಾವಣಾ ಪ್ರಚಾರ ಕರಪತ್ರ ನೀಡಿದ್ದಾರೆ. 

ಗೃಹ ಸಚಿವ ಅಮಿತ್​ ಶಾ ಉತ್ತರಪ್ರದೇಶದಲ್ಲಿ ಮನೆ-ಮನೆ ಪ್ರಚಾರ ನಡೆಸುತ್ತ, ಜನರಿಗೆ ಕರಪತ್ರ ಹಂಚುತ್ತಿದ್ದಾರೆ. ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ. ಇಂದು ಕೂಡ ಅಮಿತ್​ ಶಾ ದೇವಬಂದ್​​ನಲ್ಲಿ ಮನೆ-ಮನೆ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆದರೆ ಒಮ್ಮೆಲೇ ಅತ್ಯಂತ ಹೆಚ್ಚು ಜನ ಸೇರಿದ್ದರಿಂದ, ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.

ದೇವಬಂದ್​ಗೆ ಭೇಟಿ ನೀಡಿದ ಅಮಿತ್​ ಶಾರನ್ನು ಅಲ್ಲಿನ ಜನರು ಪ್ರೀತಿಯಿಂದ ಸ್ವಾಗತಿಸಿ, ಬಿಜೆಪಿ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ ವಿಡಿಯೋಗಳೂ ವೈರಲ್​ ಆಗಿವೆ. ಹಾಗೇ, ತಮ್ಮ ದೇವಬಂದ್​ ಪ್ರಚಾರ ಕೆಲವೇ ಹೊತ್ತು ನಡೆದರೂ, ಅಲ್ಲಿನ ಜನರು ಬಿಜೆಪಿಗೆ ಅಪಾರ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂತು. ದೇವಬಂದ್​ ಜನತೆಯ ಪ್ರೀತಿ-ವಿಶ್ವಾಸ ಬಿಜೆಪಿಗೆ ಇದೆ ಎಂದು ಅಮಿತ್​ ಶಾ ಕೂಡ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಇಂದು ದೇವ್​ಬಂದ್​​ನಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್​ ಶಾರಿಗೆ ಅಲ್ಲಿನ ಮಹಿಳೆಯರು, ಮಕ್ಕಳು ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ಹೂಮಳೆಗರೆದಿದ್ದಾರೆ. ಒಂದಷ್ಟು ಮಂದಿ ಡ್ರಮ್​​ ಬಾರಿಸುತ್ತ, ರಸ್ತೆಗಳಲ್ಲಿ ನೃತ್ಯ ಮಾಡುವ ಮೂಲಕ ಅಮಿತ್​ ಶಾರನ್ನು ಸ್ವಾಗತಿಸಿದ್ದಾರೆ.  ಒಟ್ಟಾರೆ ತುಂಬ ಉತ್ಸಾಹಭರಿತರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:  Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ