AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?
ದೇವಬಂದ್​​ನಲ್ಲಿ ಗೃಹ ಸಚಿವ ಅಮಿತ್​ ಶಾ
TV9 Web
| Edited By: |

Updated on: Jan 29, 2022 | 4:43 PM

Share

ಉತ್ತರ ಪ್ರದೇಶದ ದೇವಬಂದ್​ನಲ್ಲಿ (Deoband In Uttar Pradesh) ಇಂದು ನಡೆಸಬೇಕಿದ್ದ ಚುನಾವಣಾ ಪ್ರಚಾರವನ್ನು ಗೃಹ ಸಚಿವ ಅಮಿತ್​ ಶಾ (Union Home Minister Amit Shah) ಮೊಟಕುಗೊಳಿಸಿದ್ದಾರೆ. ಚುನಾವಣಾ ಆಯೋಗ ಹೇರಿರುವ ಮಿತಿಗೂ ಮೀರಿ ಇಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಪ್ರಚಾರವನ್ನು ಸದ್ಯ ಕೈಬಿಟ್ಟಿದ್ದಾರೆ. ನಂತರ ಮುಜಾಫರ್​ನಗರದ ದೇವಬಂದ್​ ಬಜಾರ್​ಗೆ ತೆರಳಿದ ಅಮಿತ್​ ಶಾ, ಅಲ್ಲಿನ ಶಿವನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೆ, ಜನ ಸಂಪರ್ಕ ಅಭಿಯಾನದಡಿ (Jan Sampark Abhiyan) ಮತದಾರರನ್ನು ಸಂಪರ್ಕಿಸಿ, ಚುನಾವಣಾ ಪ್ರಚಾರ ಕರಪತ್ರ ನೀಡಿದ್ದಾರೆ. 

ಗೃಹ ಸಚಿವ ಅಮಿತ್​ ಶಾ ಉತ್ತರಪ್ರದೇಶದಲ್ಲಿ ಮನೆ-ಮನೆ ಪ್ರಚಾರ ನಡೆಸುತ್ತ, ಜನರಿಗೆ ಕರಪತ್ರ ಹಂಚುತ್ತಿದ್ದಾರೆ. ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ. ಇಂದು ಕೂಡ ಅಮಿತ್​ ಶಾ ದೇವಬಂದ್​​ನಲ್ಲಿ ಮನೆ-ಮನೆ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆದರೆ ಒಮ್ಮೆಲೇ ಅತ್ಯಂತ ಹೆಚ್ಚು ಜನ ಸೇರಿದ್ದರಿಂದ, ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.

ದೇವಬಂದ್​ಗೆ ಭೇಟಿ ನೀಡಿದ ಅಮಿತ್​ ಶಾರನ್ನು ಅಲ್ಲಿನ ಜನರು ಪ್ರೀತಿಯಿಂದ ಸ್ವಾಗತಿಸಿ, ಬಿಜೆಪಿ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ ವಿಡಿಯೋಗಳೂ ವೈರಲ್​ ಆಗಿವೆ. ಹಾಗೇ, ತಮ್ಮ ದೇವಬಂದ್​ ಪ್ರಚಾರ ಕೆಲವೇ ಹೊತ್ತು ನಡೆದರೂ, ಅಲ್ಲಿನ ಜನರು ಬಿಜೆಪಿಗೆ ಅಪಾರ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂತು. ದೇವಬಂದ್​ ಜನತೆಯ ಪ್ರೀತಿ-ವಿಶ್ವಾಸ ಬಿಜೆಪಿಗೆ ಇದೆ ಎಂದು ಅಮಿತ್​ ಶಾ ಕೂಡ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಇಂದು ದೇವ್​ಬಂದ್​​ನಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್​ ಶಾರಿಗೆ ಅಲ್ಲಿನ ಮಹಿಳೆಯರು, ಮಕ್ಕಳು ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ಹೂಮಳೆಗರೆದಿದ್ದಾರೆ. ಒಂದಷ್ಟು ಮಂದಿ ಡ್ರಮ್​​ ಬಾರಿಸುತ್ತ, ರಸ್ತೆಗಳಲ್ಲಿ ನೃತ್ಯ ಮಾಡುವ ಮೂಲಕ ಅಮಿತ್​ ಶಾರನ್ನು ಸ್ವಾಗತಿಸಿದ್ದಾರೆ.  ಒಟ್ಟಾರೆ ತುಂಬ ಉತ್ಸಾಹಭರಿತರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:  Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ