UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ

UP Assembly Election: ಉತ್ತರ ಪ್ರದೇಶದ ದೇವಬಂದ್​​ನಲ್ಲಿ ಅಮಿತ್​ ಶಾ ನಡೆಸಬೇಕಿದ್ದ ಚುನಾವಣಾ ಪ್ರಚಾರ ಮೊಟಕು; ಅಂಥದ್ದೇನಾಯ್ತು?
ದೇವಬಂದ್​​ನಲ್ಲಿ ಗೃಹ ಸಚಿವ ಅಮಿತ್​ ಶಾ
Follow us
| Updated By: Lakshmi Hegde

Updated on: Jan 29, 2022 | 4:43 PM

ಉತ್ತರ ಪ್ರದೇಶದ ದೇವಬಂದ್​ನಲ್ಲಿ (Deoband In Uttar Pradesh) ಇಂದು ನಡೆಸಬೇಕಿದ್ದ ಚುನಾವಣಾ ಪ್ರಚಾರವನ್ನು ಗೃಹ ಸಚಿವ ಅಮಿತ್​ ಶಾ (Union Home Minister Amit Shah) ಮೊಟಕುಗೊಳಿಸಿದ್ದಾರೆ. ಚುನಾವಣಾ ಆಯೋಗ ಹೇರಿರುವ ಮಿತಿಗೂ ಮೀರಿ ಇಲ್ಲಿ ಜನ ಸೇರಿದ್ದ ಹಿನ್ನೆಲೆಯಲ್ಲಿ ಪ್ರಚಾರವನ್ನು ಸದ್ಯ ಕೈಬಿಟ್ಟಿದ್ದಾರೆ. ನಂತರ ಮುಜಾಫರ್​ನಗರದ ದೇವಬಂದ್​ ಬಜಾರ್​ಗೆ ತೆರಳಿದ ಅಮಿತ್​ ಶಾ, ಅಲ್ಲಿನ ಶಿವನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲದೆ, ಜನ ಸಂಪರ್ಕ ಅಭಿಯಾನದಡಿ (Jan Sampark Abhiyan) ಮತದಾರರನ್ನು ಸಂಪರ್ಕಿಸಿ, ಚುನಾವಣಾ ಪ್ರಚಾರ ಕರಪತ್ರ ನೀಡಿದ್ದಾರೆ. 

ಗೃಹ ಸಚಿವ ಅಮಿತ್​ ಶಾ ಉತ್ತರಪ್ರದೇಶದಲ್ಲಿ ಮನೆ-ಮನೆ ಪ್ರಚಾರ ನಡೆಸುತ್ತ, ಜನರಿಗೆ ಕರಪತ್ರ ಹಂಚುತ್ತಿದ್ದಾರೆ. ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಸದ್ಯ ಯಾವುದೇ ರಾಜಕೀಯ ಪಕ್ಷಗಳಿಗೆ ರೋಡ್​ ಶೋ ನಡೆಸಲಾಗಲಿ, ದೊಡ್ಡಮಟ್ಟದ ಪ್ರಚಾರ ಸಭೆ ನಡೆಸಲಾಗಲಿ ಚುನಾವಣಾ ಆಯೋಗ ಅನುಮತಿ ನೀಡಿಲ್ಲ. ಹಾಗಿದ್ದಾಗ್ಯೂ ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸ್ವಲ್ಪ ಸಡಿಲಿಕೆ ನೀಡಿದೆ. ಇಂದು ಕೂಡ ಅಮಿತ್​ ಶಾ ದೇವಬಂದ್​​ನಲ್ಲಿ ಮನೆ-ಮನೆ ಚುನಾವಣಾ ಪ್ರಚಾರ ನಡೆಸುತ್ತಿದ್ದರು. ಆದರೆ ಒಮ್ಮೆಲೇ ಅತ್ಯಂತ ಹೆಚ್ಚು ಜನ ಸೇರಿದ್ದರಿಂದ, ಅರ್ಧದಲ್ಲೇ ಮೊಟಕುಗೊಳಿಸಿದ್ದಾರೆ.

ದೇವಬಂದ್​ಗೆ ಭೇಟಿ ನೀಡಿದ ಅಮಿತ್​ ಶಾರನ್ನು ಅಲ್ಲಿನ ಜನರು ಪ್ರೀತಿಯಿಂದ ಸ್ವಾಗತಿಸಿ, ಬಿಜೆಪಿ ಪರ ಘೋಷಣೆ ಕೂಗಿ ಬೆಂಬಲ ವ್ಯಕ್ತಪಡಿಸಿದ ವಿಡಿಯೋಗಳೂ ವೈರಲ್​ ಆಗಿವೆ. ಹಾಗೇ, ತಮ್ಮ ದೇವಬಂದ್​ ಪ್ರಚಾರ ಕೆಲವೇ ಹೊತ್ತು ನಡೆದರೂ, ಅಲ್ಲಿನ ಜನರು ಬಿಜೆಪಿಗೆ ಅಪಾರ ಬೆಂಬಲ ವ್ಯಕ್ತಪಡಿಸಿದ್ದು ಕಂಡುಬಂತು. ದೇವಬಂದ್​ ಜನತೆಯ ಪ್ರೀತಿ-ವಿಶ್ವಾಸ ಬಿಜೆಪಿಗೆ ಇದೆ ಎಂದು ಅಮಿತ್​ ಶಾ ಕೂಡ ಕೆಲವು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಇಂದು ದೇವ್​ಬಂದ್​​ನಲ್ಲಿ ಚುನಾವಣೆ ಪ್ರಚಾರಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್​ ಶಾರಿಗೆ ಅಲ್ಲಿನ ಮಹಿಳೆಯರು, ಮಕ್ಕಳು ತಮ್ಮ ಮನೆಯ ಬಾಲ್ಕನಿಯಲ್ಲಿ ನಿಂತು ಹೂಮಳೆಗರೆದಿದ್ದಾರೆ. ಒಂದಷ್ಟು ಮಂದಿ ಡ್ರಮ್​​ ಬಾರಿಸುತ್ತ, ರಸ್ತೆಗಳಲ್ಲಿ ನೃತ್ಯ ಮಾಡುವ ಮೂಲಕ ಅಮಿತ್​ ಶಾರನ್ನು ಸ್ವಾಗತಿಸಿದ್ದಾರೆ.  ಒಟ್ಟಾರೆ ತುಂಬ ಉತ್ಸಾಹಭರಿತರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:  Murder: ಗೆಳೆಯನನ್ನು ಕೊಂದು, ರೈಲಿನ ಕೆಳಗೆ ಹಾಕಿ ಅಪಘಾತವೆಂದು ಕತೆ ಕಟ್ಟಿದ ಯುವಕ!

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ