AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಶ್ರೀ ನಾರಾಯಣಗುರು ಜಯಂತಿಗೆ ಶುಭಕೋರಿದ ಕೇಂದ್ರ ಗೃಹಸಚಿವ ಅಮಿತ್ ಶಾ

ಗಣರಾಜ್ಯೋತ್ಸವದ ಸಮಯದಲ್ಲಿ ಸ್ಥಬ್ಧ ಚಿತ್ರಕ್ಕೆ ಅವಕಾಶ ನೀಡಿಲ್ಲವೆಂದು ವಿವಾದ ಉಂಟಾಗಿತ್ತು. ಅಲ್ಲದೆ, ಶಾಲಾ ಪುಸ್ತಕದಿಂದ ನಾರಾಯಣ ಗುರು ಅವರ ಪಠ್ಯ ಕೈ ಬಿಟ್ಟಿರುವ ಬಗ್ಗೆಯೂ ವಿವಾದಕ್ಕೆ ಕಾರಣವಾಗಿತ್ತು. ಈ ಎಲ್ಲದರ ನಡುವೆ ಕೇಂದ್ರ ಗೃಹಸಚಿವ ಅಮಿತ್ ಅವರು ಇಂದು ನಾರಾಯಣ ಗುರು ಅವರ ಜಯಂತಿಗೆ ಶುಭಕೋರಿ ಮಳಯಾಳಂನಲ್ಲಿ ಟ್ವೀಟ್ ಮಾಡಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರು ಜಯಂತಿಗೆ ಶುಭಕೋರಿದ ಕೇಂದ್ರ ಗೃಹಸಚಿವ ಅಮಿತ್ ಶಾ
ಬ್ರಹ್ಮಶ್ರೀ ನಾರಾಯಣಗುರು ಜಯಂತಿಗೆ ಶುಭಕೋರಿದ ಕೇಂದ್ರ ಗೃಹಸಚಿವ ಅಮಿತ್ ಶಾ
Follow us
Rakesh Nayak Manchi
|

Updated on: Aug 31, 2023 | 4:39 PM

ನವದೆಹಲಿ, ಆಗಸ್ಟ್ 31: ಇಂದು ಬ್ರಹ್ಮಶ್ರೀ ನಾರಾಯಣ ಗುರು (Bhramhashri Narayana Guru) ಜಯಂತಿ ಆಚರಣೆಯನ್ನು ಕೇರಳ, ಕರ್ನಾಟಕದ ತುಳುನಾಡಿನಲ್ಲಿ ಆಚರಿಸಲಾಗುತ್ತದೆ. ಅದರಂತೆ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಳಯಾಳಂ ಭಾಷಣೆಯಲ್ಲಿ ಟ್ವೀಟ್ ಮಾಡಿ ನಾರಾಯಣ ಗುರು ಜಯಂತಿಗೆ ಶುಭಕೋರಿದ್ದಾರೆ.

“ಋಷಿವರ್ಯರೂ ಮತ್ತು ಸಮಾಜ ಸುಧಾರಕ ಶ್ರೀ ನಾರಾಯಣಗುರು ಅವರ ಜನ್ಮದಿನದಂದು ನಾನು ನಮಸ್ಕರಿಸುತ್ತೇನೆ. ಶ್ರೀ ನಾರಾಯಣಗುರುಗಳು ಸುಜ್ಞಾನದ ಶಿಖರವಾಗಿದ್ದರು, ಅವರ ಚಿಂತನೆಗಳು ಸಾಮಾಜಿಕ ಗಡಿಗಳನ್ನು ಮೀರಿ ವಿವಿಧ ಸಮುದಾಯಗಳ ನಡುವೆ ಸಹಬಾಳ್ವೆಯ ಮಾದರಿಗಳನ್ನು ಸೃಷ್ಟಿಸಿದವು. ಆಧ್ಯಾತ್ಮಿಕ ಶ್ರೇಷ್ಠತೆಯಿಂದ ಸಶಕ್ತ ಸಮಾಜವನ್ನು ಹೇಗೆ ರೂಪಿಸಬೇಕೆಂದು ಅವರ ಜೀವನವು ನಮಗೆ ತೋರಿಸುತ್ತದೆ” ಎಂದು ಅಮಿತ್ ಶಾ ಅವರು ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಟ್ವೀಟ್

ಈ ಹಿಂದೆ ನಾರಾಯಣ ಗುರು ವಿಚಾರದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಪಠ್ಯದಿಂದ ಇವರನ್ನು ಕೈಬಿಡಲಾಗಿತ್ತು. ಹಾಗೇ ಇವರ ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರಕ್ಕೆ ಅವಕಾಶ ನೀಡಿರಲಿಲ್ಲವೆಂದು ವಿವಾದವೂ ಹುಟ್ಟುಕೊಂಡಿತ್ತು. ಈ ಎಲ್ಲದರ ನಡುವೆ ಇದೀಗ ಅಮಿತ್ ಶಾ ಅವರು ನಾರಾಯಣ ಗುರು ಜಯಂತಿಗೆ ಶುಭಾಶಯ ಕೋರಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ನಾಳೆ ಅಮಿತ್ ಶಾ ರಿಪೋರ್ಟ್ ಕಾರ್ಡ್ ಕೇಳಿದಾಗ ಇಸ್ರೋ ಮಾಡಿದ್ದು ನಾವು ಎಂದು ಹೇಳಿ: ಮಲ್ಲಿಕಾರ್ಜುನ ಖರ್ಗೆ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪ್ರದರ್ಶಿಸುವುದಕ್ಕಾಗಿ ಅನುಮೋದನೆ ನೀಡಲು ಕೇರಳ ಸಲ್ಲಿಸಿದ ಸ್ತಬ್ಧ ಚಿತ್ರವನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿತ್ತು. ಪ್ರವಾಸೋದ್ಯಮದ ಸಾಮರ್ಥ್ಯದ ಜೊತೆಗೆ ಮಹಿಳಾ ಸಬಲೀಕರಣದ ಸಂದೇಶವನ್ನು ಸಾರುವ ಚಡಯಮಂಗಲಂ ಜಟಾಯುಪಾರ ಮಾದರಿಯನ್ನು ಕೇರಳ ಸಿದ್ಧಪಡಿಸಿದೆ. ಈ ಸ್ತಬ್ಧ ಚಿತ್ರದ ಮುಂದೆ ಶ್ರೀ ನಾರಾಯಣ ಗುರು ಪ್ರತಿಮೆಯನ್ನು ಇರಿಸಲು ರಾಜ್ಯವು ಉದ್ದೇಶಿಸಿತ್ತು.

ಎಸ್​ಎಸ್​ಎಲ್​ಸಿ ಪುಸ್ತಕದಲ್ಲಿ ಇದ್ದ ನಾರಾಯಣ ಗುರು ಬಗೆಗಿನ ಪಠ್ಯವನ್ನು ಕೈಬಿಡಲಾಗಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ನಂತರ ಎಚ್ಚೆತ್ತ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ, 10ನೇ ತರಗತಿ ಬದಲಾಗಿ ಏಳನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದ ಭಾಗ-2ರ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣೆ ವಿಭಾಗದಲ್ಲಿ ಗುರುಗಳ ಜೀವನ ಚರಿತ್ರೆಯನ್ನು ಅಳವಡಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ