AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah in West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕಿಂತಲೂ ಹೆಚ್ಚು ಸೀಟು ಗೆಲ್ಲಲಿದೆ: ಅಮಿತ್ ಶಾ

West Bengal Assembly Elections 2021: ಬಿಜೆಪಿ ಕಾರ್ಯಕರ್ತರೊಬ್ಬರ ಹಿರಿವಯಸ್ಸಿನ ಅಮ್ಮನ ಮೇಲೆ ಹಲ್ಲೆ ನಡೆದಿತ್ತು. ಆಕೆ ನಿನ್ನೆ ಮರಣ ಹೊಂದಿದ್ದಾರೆ. ಆದರೆ ಮಮತಾ ದೀದಿ ಮಹಿಳೆಯರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಜನರು ಈ ರೀತಿಯ ದ್ವಂದ್ವದ ಬಗ್ಗೆ ಅರಿವು ಇದೆ ಎಂದು ಅಮಿತ್ ಶಾ ಹೇಳಿದ್ದಾರೆ.

Amit Shah in West Bengal: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 200ಕ್ಕಿಂತಲೂ ಹೆಚ್ಚು ಸೀಟು ಗೆಲ್ಲಲಿದೆ: ಅಮಿತ್ ಶಾ
ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರುವ ಅಮಿತ್ ಶಾ
ರಶ್ಮಿ ಕಲ್ಲಕಟ್ಟ
|

Updated on:Mar 30, 2021 | 4:04 PM

Share

ನಂದಿಗ್ರಾಮ: ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಸುವೇಂದು ಅಧಿಕಾರಿ ಪರ ಚುನಾವಣಾ ಪ್ರಚಾರ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಇಲ್ಲಿ 200ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದ್ದಾರೆ. ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಪರಾಭವಗೊಳಿಸಿದರೆ ಇಡೀ ರಾಜ್ಯದ ಪರಿಬೊರ್ತನ್ (ಅಭಿವೃದ್ಧಿ) ಇಲ್ಲಿಂದಲೇ ಆರಂಭವಾಗುತ್ತದೆ ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ.

ನಾನು ಇಲ್ಲಿಗೆ ಬಂದ ಕೂಡಲೇ ದುಃಖದ ಸುದ್ದಿಯೊಂದು ಸಿಕ್ಕಿತು. ಅದೇನೆಂದರೆ ಮಮತಾ ಬ್ಯಾನರ್ಜಿ ವಾಸಿಸುವ ಪ್ರದೇಶದಿಂದ 5 ಕಿಮೀ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಮಮತಾ ಬ್ಯಾನರ್ಜಿ ಈ ಪ್ರದೇಶದಲ್ಲಿ ಇರುವ ಹೊತ್ತಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಯುವುದಾದರೆ ಇಲ್ಲಿ ಮಹಿಳೆಯರು ಎಷ್ಟು ಸುರಕ್ಷಿತರಾಗಿರುತ್ತಾರೆ? ಎಂದು ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿದ ಶಾ ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರೊಬ್ಬರ ಹಿರಿವಯಸ್ಸಿನ ಅಮ್ಮನ ಮೇಲೆ ಹಲ್ಲೆ ನಡೆದಿತ್ತು. ಆಕೆ ನಿನ್ನೆ ಮರಣ ಹೊಂದಿದ್ದಾರೆ. ಆದರೆ ಮಮತಾ ದೀದಿ ಮಹಿಳೆಯರ ಭದ್ರತೆ ಬಗ್ಗೆ ಮಾತನಾಡುತ್ತಿದ್ದಾರೆ. ಪಶ್ಚಿಮ ಬಂಗಾಳದ ಜನರು ಈ ರೀತಿಯ ದ್ವಂದ್ವದ ಬಗ್ಗೆ ಅರಿವು ಇದೆ. ಇಡೀ ಬಂಗಾಳ ನುಸುಳುಕಾರರನ್ನು ಬಯಸುವುದಿಲ್ಲ, ಅವರು ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನವನ್ನು ಬಯಸುತ್ತಿದ್ದಾರೆ ಎಂದಿದ್ದಾರೆ.

ನಂದಿಗ್ರಾಮದಲ್ಲಿ ಇಂದು ಸೇರಿರುವ ಜನಸಮೂಹ ನೋಡಿದರೆ ಸುವೇಂದು ಅಧಿಕಾರಿ ಗೆಲ್ಲುವುದು ಖಚಿತ ಎಂದಿದ್ದಾರೆ ಶಾ. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ ಜನಸಮೂಹ ಜೈ ಶ್ರೀರಾಮ್, ನರೇಂದ್ರ ಮೋದಿ ಜಿಂದಾಬಾದ್, ಅಮಿತ್ ಶಾ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.

ಹೂವಿನಿಂದ ಶೃಂಗಾರಗೊಳಸಿದ ವಾಹನದಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದ ಅಮಿತ್ ಶಾ , ಪೂರ್ವ ಮಿಡ್ನಾಪುರದ ಬೆತುರಿಯಾ ಮತ್ತು ರಾಯಪುರ ನಡುವೆ 4 ಕಿಮೀ ರೋಡ್ ಶೋ ನಡೆಸಿದ್ದಾರೆ.

ನಾಲ್ಕು ಜಿಲ್ಲೆಗಳ 30 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 1ರಂದು ಚುನಾವಣೆ ನಡೆಯಲಿದ್ದು, ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಾಯಕ ಸುವೇಂದು ಅಧಿಕಾರಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ. ನಂದಿಗ್ರಾಮ ಸುವೇಂದು ಅವರ ತವರು ಆಗಿದ್ದರೂ, ಭೂಸ್ವಾದೀನದ ವಿರುದ್ಧ ಹೋರಾಟದಲ್ಲಿ ಮಮತಾ ಬ್ಯಾನರ್ಜಿ ಅವರು ಗೆಲುವು ಸಾಧಿಸಿದ ಕ್ಷೇತ್ರವಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಮತ್ತು ಸುವೇಂದು ಪಾಲಿಗೆ ಇದು ಪ್ರತಿಷ್ಠೆಯ ಕಣವಾಗಿದೆ.

ಕಳೆದ ಮೂರು ದಿನಗಳಿಂದ ಮಮತಾ ನಂದಿಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಅಮಿತ್ ಮಾಳವಿಯ, 30 ವಿಧಾನಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನದ ನಡೆಯಲಿದೆ. ಮಮತಾ ಬ್ಯಾನರ್ಜಿ ಕಳೆದ ಮೂರು ದಿನಗಳಿಂದ ನಂದಿಗ್ರಾಮ ಬಿಟ್ಟು ಹೊರಗೆ ಹೋಗಿಲ್ಲ. ಸೋಲಿನ ಭಯದಿಂದಾಗಿ ಆಕೆ ಆ ಕ್ಷೇತ್ರ ಬಿಟ್ಟು ಹೊರಗೆ ಹೋಗಿಲ್ಲ, ಅದೇ ವೇಳೆ ಚುನಾವಣೆ ನಡೆಯಲಿರುವ ಇತರ ಕ್ಷೇತ್ರಗಳನ್ನು ಅವರು ನಿರ್ಲಕ್ಷಿಸಿದ್ದಾರೆ. ಮಮತಾ ಪರಾಭವಗೊಳ್ಳಲಿದ್ದಾರೆ. ಎರಡನೇ ಹಂತದ ಮತದಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: West Bengal Elections 2021: ಟಿಎಂಸಿ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿದ್ದರು ಎನ್ನಲಾದ ಬಿಜೆಪಿ ಕಾರ್ಯಕರ್ತನ 85 ವರ್ಷದ ವೃದ್ಧತಾಯಿ ನಿಧನ

West Bengal Assembly Elections 2021: ನಂದಿಗ್ರಾಮದಲ್ಲಿ 8 ಕಿಮೀ ಪಾದಯಾತ್ರೆಯನ್ನು ಗಾಲಿಕುರ್ಚಿಯಲ್ಲೇ ಕುಳಿತು ಮುನ್ನಡೆಸಿದ ಮಮತಾ ಬ್ಯಾನರ್ಜಿ

Published On - 4:01 pm, Tue, 30 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!