AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸ್ಸಾಂ ಹೊರತಾಗಿ ಭಾರತೀಯ ಕಲೆ-ಸಂಸ್ಕೃತಿ ಪರಿಪೂರ್ಣವಾಗುವುದಿಲ್ಲ: ಅಮಿತ್ ಶಾ

ಬೋಡೊಲ್ಯಾಂಡ್ ಟೆರಿಟೋರಿಯಲ್ ಒಪ್ಪಂದ ಮಾಡುವ ಮೂಲಕ ಅಸ್ಸಾಂನಲ್ಲಿ ಶಾಂತಿ ಸ್ಥಾಪನೆಗೆ ಮೋದಿ ಕೆಲಸ ಮಾಡಿದ್ದಾರೆ. ಯುವಜನರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.

ಅಸ್ಸಾಂ ಹೊರತಾಗಿ ಭಾರತೀಯ ಕಲೆ-ಸಂಸ್ಕೃತಿ ಪರಿಪೂರ್ಣವಾಗುವುದಿಲ್ಲ: ಅಮಿತ್ ಶಾ
ಅಸ್ಸಾಂನಲ್ಲಿ ಅಮಿತ್ ಶಾ
TV9 Web
| Edited By: |

Updated on:Apr 06, 2022 | 11:18 PM

Share

ಗುವಹಾಟಿ: ರಾಜ್ಯದ ಭಾಷೆ, ಸಂಸ್ಕೃತಿಯನ್ನು ಬಲಪಡಿಸದೆ ದೇಶದ ಉನ್ನತಿ ಸಾಧ್ಯವಿಲ್ಲ ಎಂದು ಬಿಜೆಪಿ ನಂಬುತ್ತದೆ. ಅಸ್ಸಾಂ ಕಲೆ-ಸಂಸ್ಕೃತಿಯ ಹೊರತಾಗಿ ಭಾರತೀಯ ಕಲೆ-ಸಂಸ್ಕೃತಿಯು ಪರಿಪೂರ್ಣವಾಗುವುದಿಲ್ಲ ಎಂಲದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಹೇಳಿದರು.

ಅಸ್ಸಾಂನ ಇತಿಹಾಸ, ರಂಗಭೂಮಿ ಸಾಹಿತ್ಯ, ಕಲೆ ಹಾಗೂ ಕಾವ್ಯ ಕ್ಷೇತ್ರಕ್ಕೆ ಅದಮ್ಯ ಸೇವೆ ಸಲ್ಲಿಸಿರುವ ಆಚಾರ್ಯ ಶಂಕರ್​ದೇವ್​ರ ಜನ್ಮಸ್ಥಳಕ್ಕೆ ಕಾಂಗ್ರೆಸ್ ಏನೂ ಮಾಡಿಲ್ಲ. ಆದರೆ, ಬಿಜೆಪಿ ರಾಜ್ಯದ ಭಾಷೆ, ಸಂಸ್ಕೃತಿ, ಕಲೆಯನ್ನು ಅಭಿವೃದ್ಧಿಪಡಿಸುವುದನ್ನು ಬಯಸುತ್ತದೆ ಎಂದು ಈಶಾನ್ಯ ರಾಜ್ಯಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಕಾಮ್​ರೂಪ್​ನಲ್ಲಿ ಮಾತನಾಡಿದರು.

ಅಸ್ಸಾಂನಲ್ಲಿ 80ರ ದಶಕದ ಆರಂಭದಲ್ಲಿ ನಡೆದ ಘಟನೆಗಳಿಂದ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದರು. ಅಸ್ಸಾಂ ಶಾಂತಿ ಕದಡಿದ್ದ ಆ ಸನ್ನಿವೇಶದಲ್ಲಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿತ್ತು. ಆ ಬಳಿಕ, ರಾಜ್ಯದ ಅಭಿವೃದ್ಧಿ ಆಗುತ್ತಿದೆ ಮತ್ತು ಮುಂದೆಯೂ ಆಗುತ್ತದೆ. ಆದರೆ, ಸೈದ್ಧಾಂತಿಕ ಬದಲಾವಣೆ ಕೂಡ ಮುಖ್ಯ ಎಂದು ಶಾ ಅಭಿಪ್ರಾಯಪಟ್ಟರು.

ಅಸ್ಸಾಂನಲ್ಲಿ ಈ ಹಿಂದಿನ ಕಾಲವೊಂದಿತ್ತು. ಆಗ ಈ ಪ್ರದೇಶದ (ಈಶಾನ್ಯ ರಾಜ್ಯಗಳ) ಪ್ರತ್ಯೇಕತಾವಾದಿಗಳು ಯುವಜನರ ಕೈಗೆ ಆಯುಧಗಳನ್ನು ಕೊಡುತ್ತಿದ್ದರು. ಆದರೆ, ಈಗ ಅಂಥಾ ಪರಿಸ್ಥಿತಿ ಇಲ್ಲ. ಯುವಜನರೂ ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ. ಹೊಸ ಉದ್ಯೋಗಗಳನ್ನು ಕಂಡುಕೊಂಡು ಜಾಗತಿಕವಾಗಿ, ಸ್ಪರ್ಧಾತ್ಮಕವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಅಸ್ಸಾಂ ಬಗೆಗೆ ಅಭಿಮಾನದ ಮಾತುಗಳನ್ನಾಡಿದರು.

ಬೋಡೊಲ್ಯಾಂಡ್ ಟೆರಿಟೋರಿಯಲ್ ಒಪ್ಪಂದ ಮಾಡುವ ಮೂಲಕ ಅಸ್ಸಾಂನಲ್ಲಿ ಶಾಂತಿ ಸ್ಥಾಪನೆಗೆ ಮೋದಿ ಕೆಲಸ ಮಾಡಿದ್ದಾರೆ ಎಂದಿದ್ದಾರೆ. ಬೋಡೊ ಯುವಕರು ಈಗ ಆಯುಧಗಳನ್ನು ತೊರೆದು ಸಮಾಜದಲ್ಲಿ ಸ್ಥಾನ ಕಂಡುಕೊಂಡಿದ್ದಾರೆ ಎಂದು ಹೇಳಿದರು.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕೆಲವರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಂಥವರು ಮುಂದೆ ಬಂದು ಕೃಷಿ ಕಾಯ್ದೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸರ್ಕಾರದ ಜೊತೆಯಾಗಬೇಕು ಎಂದು ಅಮಿತ್ ಶಾ ಹೇಳಿದರು.

ತೆಲಂಗಾಣ, ಪಶ್ಚಿಮ ಬಂಗಾಳ ಬಳಿಕ ಅಮಿತ್ ಶಾ ಇದೀಗ ಈಶಾನ್ಯ ರಾಜ್ಯಗಳ ಕಡೆಗೆ ಮುಖಮಾಡಿದ್ದಾರೆ. ಅಸ್ಸಾಂ ಹಾಗೂ ಮಣಿಪುರದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಅಸ್ಸಾಂಗೆ ಭೇಟಿ ಕೊಟ್ಟಿರುವ ಅಮಿತ್ ಶಾ ಸಾರ್ವಜನಿಕ ಕಾರ್ಯಕ್ರಮಗಳು, ಸರ್ಕಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭಗಳಲ್ಲಿ ಭಾಗವಹಿಸಿದ್ದಾರೆ. ಏಪ್ರಿಲ್​ನಲ್ಲಿ ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಭೇಟಿ ರಾಜಕೀಯ ಕಣದ ರಂಗೇರಿಸಿದೆ.

ಇಂದು, ಗುವಹಾಟಿಯ ಎರಡನೆಯ ವೈದ್ಯಕೀಯ ಕಾಲೇಜು, ಒಂಭತ್ತು ಕಾನೂನು ಕಾಲೇಜು ಹಾಗೂ ಬಟದ್ರವ ಠಾಣೆಗೆ ಕಾಮ್​ರೂಪ್​ನಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್, ರಾಜ್ಯ ಸಚಿವರು, ಡಿಜಿಪಿ ಮುಂತಾದ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಯಲ್ಲಿ ಭಾಗವಹಿಸಿದರು.

2021 ವಿಧಾನಸಭೆ ಚುನಾವಣೆವರೆಗೆ ಪ್ರತಿ ತಿಂಗಳು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ ಅಮಿತ್ ಶಾ

Published On - 8:31 pm, Sat, 26 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ