AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್‌ನಲ್ಲಿ MBBS ಪಠ್ಯ ಪುಸ್ತಕಗಳ ಹಿಂದಿ ಆವೃತ್ತಿ ಬಿಡುಗಡೆ ಮಾಡಿದ ಅಮಿತ್ ಶಾ

97 ತಜ್ಞರ ತಂಡವು ಭೋಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 232 ದಿನಗಳಿಂದ ಪುಸ್ತಕಗಳ ತಯಾರಿಕೆಯಲ್ಲಿ ಕೆಲಸ ಮಾಡುತ್ತಿದ್ದು ಪುಸ್ತಕವನ್ನು ಇಂಗ್ಲಿಷ್‌ನಿಂದ ಹಿಂದಿಗೆ ಅನುವಾದ ಮಾಡಲಾಗುತ್ತಿದೆ.

ಭೋಪಾಲ್‌ನಲ್ಲಿ MBBS ಪಠ್ಯ ಪುಸ್ತಕಗಳ ಹಿಂದಿ ಆವೃತ್ತಿ ಬಿಡುಗಡೆ ಮಾಡಿದ ಅಮಿತ್ ಶಾ
ಅಮಿತ್ ಶಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 16, 2022 | 8:51 PM

Share

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಭಾನುವಾರ ಭೋಪಾಲ್‌ನಲ್ಲಿ (Bhopal) ಎಂಬಿಬಿಎಸ್ (MBBS) ಕೋರ್ಸ್ ಪುಸ್ತಕಗಳ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಉಪಸ್ಥಿತರಿದ್ದರು. ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆದರೂ ಇಂಗ್ಲಿಷ್‌ನ ಜಾಲಕ್ಕೆ ಸಿಲುಕಿ ಹಲವು ಬಾರಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ವಿದ್ಯಾಭ್ಯಾಸವನ್ನೇ ತೊರೆದ ಬಡವರ ಮಕ್ಕಳ ಬದುಕಿನಲ್ಲಿ ಇಂದು ಅಮಿತ್ ಶಾ ಹೊಸ ಬೆಳಕು ತಂದಿದ್ದಾರೆ ಎಂದು ಸಿಎಂ ಚೌಹಾಣ್ ಹೇಳಿದರು. ದೇಶದಲ್ಲಿ ಹಿಂದಿ ಭಾಷೆಯಲ್ಲಿ ಎಂಬಿಬಿಎಸ್ ಕೋರ್ಸ್ ಆರಂಭಿಸಿದ ಮೊದಲ ರಾಜ್ಯ ಮಧ್ಯಪ್ರದೇಶ. ಆರಂಭದಲ್ಲಿ, ಅನಾಟಮಿ, ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿ ಒಳಗೊಂಡಂತೆ ಹಿಂದಿಯಲ್ಲಿ ಅಧ್ಯಯನ ಮಾಡಲು ಮೂರು ವಿಷಯಗಳನ್ನು ಆಯ್ಕೆ ಮಾಡಲಾಗಿದೆ.

97 ತಜ್ಞರ ತಂಡವು ಭೋಪಾಲ್‌ನ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 232 ದಿನಗಳಿಂದ ಪುಸ್ತಕಗಳ ತಯಾರಿಕೆಯಲ್ಲಿ ಕೆಲಸ ಮಾಡುತ್ತಿದ್ದು ಪುಸ್ತಕವನ್ನು ಇಂಗ್ಲಿಷ್‌ನಿಂದ ಹಿಂದಿಗೆ ಅನುವಾದ ಮಾಡಲಾಗುತ್ತಿದೆ. ಈ ಕ್ರಮವು ಹಿಂದಿ ಮಾಧ್ಯಮದಲ್ಲಿ ಶಿಕ್ಷಣದ ಪ್ರಗತಿಯಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಭಾನುವಾರ ಹೇಳಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಸಾರಂಗ್, “ಇದೊಂದು ದೊಡ್ಡ ದಿನ. ದೇಶದಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶದಲ್ಲಿ ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ಪ್ರಾರಂಭವಾಗಲಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪಠ್ಯಪುಸ್ತಕಗಳ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡಲಿದ್ದಾರೆ. ಮೊದಲ ವರ್ಷದ ಅನಾಟಮಿ, ಫಿಸಿಯಾಲಜಿ ಮತ್ತು ಬಯೋಕೆಮಿಸ್ಟ್ರಿ ಪುಸ್ತಕಗಳನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

“ಇದು ನನಗೆ ಸಂತೋಷದ ವಿಷಯವಾಗಿದೆ. ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ ಸಾಧ್ಯವಾದರೆ, ಯಾವುದೇ ಕೋರ್ಸ್ ಹಿಂದಿಯಲ್ಲಿ ಸಾಧ್ಯ ಎಂಬುದು ಈಗ ಸ್ಪಷ್ಟವಾಗಿದೆ. ಇದು ಯುವಜನರ ಜೀವನದಲ್ಲಿ, ವಿಶೇಷವಾಗಿ ಹಿಂದಿ ಹಿನ್ನೆಲೆಯಿಂದ ಬಂದವರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರುತ್ತದೆ” ಎಂದು ಅವರು ಹೇಳಿದರು. ಹಿಂದಿಯಲ್ಲಿ ಎಂಬಿಬಿಎಸ್ ಕೋರ್ಸ್ ಆರಂಭಿಸಿರುವುದು ಭಾವನಾತ್ಮಕ ಕ್ಷಣವಾಗಿದೆ ಎಂದು ಸಚಿವರು ಹೇಳಿದರು. “ನನ್ನ ತಂದೆ ಕೂಡ ಹಿಂದಿ ಸಾಹಿತ್ಯಾಸಕ್ತರಾಗಿದ್ದರು, ಅವರಿಗೂ ಅದರ ಕನಸಿತ್ತು, ಇಂದು ಅವರ ಆಶೀರ್ವಾದದಿಂದ ನಾನು ಅದನ್ನು ಪ್ರಾರಂಭಿಸುತ್ತಿದ್ದೇನೆ, ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡ ನಂತರ, ಇದಕ್ಕಿಂತ ದೊಡ್ಡ ಕೆಲಸ ಮಾಡಲಾಗಲಿಲ್ಲ, ಇಂಗ್ಲಿಷ್ ಭಾಷೆ ಗುಲಾಮಗಿರಿಯ ಸಂಕೇತ. ಹಿಂದಿ ಎಲ್ಲೋ ಹಿಂದುಳಿದಿತ್ತು” ಎಂದು ಸಾರಂಗ್ ಹೇಳಿದ್ದಾರೆ.

ಇದು ಸುಲಭದ ಕೆಲಸವಾಗಿರಲಿಲ್ಲ. ಆದರೆ ನಾವು ಅದನ್ನು ಅತ್ಯಂತ ಸುಲಭವಾದ ಭಾಷೆಯಲ್ಲಿ ತಯಾರಿಸಿದ್ದೇವೆ. ನಾವು ಇದನ್ನು ಸಿದ್ಧಪಡಿಸಿದ್ದೇವೆ ಆದ್ದರಿಂದ ಇದು ವಿದ್ಯಾರ್ಥಿಗಳ ಅಧ್ಯಯನಕ್ಕೆ ಸಹಕಾರಿಯಾಗುತ್ತದೆ” ಎಂದು ಭಾಷಾಂತರದಲ್ಲಿ ತೊಡಗಿರುವ ತಜ್ಞರು ಎಎನ್ಐಗೆ ತಿಳಿಸಿದ್ದಾರೆ. ಮೆಡಿಕಲ್ ಬಯೋಕೆಮಿಸ್ಟ್ರಿಯ ಹೊಸ ಆವೃತ್ತಿಯು ಸೋಡಿಯಂ, ಪೊಟಾಸಿಯಂ, ವಾಟರ್ ಹೋಮಿಯೋಸ್ಟಾಸಿಸ್, ಬಯೋಕೆಮಿಸ್ಟ್ರಿ ಟೆಕ್ನಿಕ್ಸ್, ವಿಕಿರಣ, ರೇಡಿಯೋಐಸೋಟೋಪ್‌ಗಳು ಮತ್ತು ಪರಿಸರ ಮಾಲಿನ್ಯಕಾರಕಗಳು ಮತ್ತು ಟಾಕ್ಸಿನ್‌ಗಳನ್ನು ಒಳಗೊಂಡಿರುವ ಕೆಲವು ಹೊಸ ಅಧ್ಯಾಯಗಳ ತರ್ಜುಮೆಯನ್ನು ಒಳಗೊಂಡಿದೆ ಎಂದು ತಜ್ಞರು ಹೇಳಿದರು. ಇದಲ್ಲದೆ, ಮಾಹಿತಿ ಹೆಚ್ಚು ನೆನಪಿಡುವಂತಾಗಲು ಹಲವಾರು ಹೊಸ ಲೈನ್ ಡಯಾಗ್ರಂ, ಟೇಬಲ್ ಮತ್ತು ಟೆಕ್ಸ್ಟ್ ಬಾಕ್ಸ್ ಸೇರಿಸಲಾಗಿದೆ.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?