AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀನಗರ ತಲುಪಿದ ಅಮಿತ್​ ಶಾ; ಉಗ್ರರ ದಾಳಿಯಿಂದ ಮೃತರಾದ ಪೊಲೀಸ್ ಅಧಿಕಾರಿಯ ಕುಟುಂಬ ಭೇಟಿ, ಸರ್ಕಾರಿ ಉದ್ಯೋಗದ ಭರವಸೆ

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್​ 370ನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಮಿತ್​ ಶಾ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಈ ಮೂರು ದಿನಗಳಲ್ಲಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಶ್ರೀನಗರ ತಲುಪಿದ ಅಮಿತ್​ ಶಾ; ಉಗ್ರರ ದಾಳಿಯಿಂದ ಮೃತರಾದ ಪೊಲೀಸ್ ಅಧಿಕಾರಿಯ ಕುಟುಂಬ ಭೇಟಿ, ಸರ್ಕಾರಿ ಉದ್ಯೋಗದ ಭರವಸೆ
ಮೃತ ಪೊಲೀಸ್ ಅಧಿಕಾರಿಯ ಕುಟುಂಬ ಭೇಟಿ ಮಾಡಿದ ಅಮಿತ್​ ಶಾ
TV9 Web
| Edited By: |

Updated on:Oct 23, 2021 | 1:25 PM

Share

ಗೃಹಸಚಿವ ಅಮಿತ್ ಶಾ ಅವರ ಜಮ್ಮು-ಕಾಶ್ಮೀರ (Amit Shah Jammu-Kashmir Visit) ಪ್ರವಾಸ ಇಂದಿನಿಂದ ಶುರುವಾಗಿದ್ದು, ಈಗಾಗಲೇ ಶ್ರೀನಗರಕ್ಕೆ ತೆರಳಿದ್ದಾರೆ. ಶ್ರೀನಗರ ತಲುಪಿದ ಅಮಿತ್​ ಶಾ ಮೊಟ್ಟಮೊದಲು ಹುತಾತ್ಮ ಪೊಲೀಸ್ ಅಧಿಕಾರಿಯೊಬ್ಬರ ಕುಟುಂಬವನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ.  ಕಳೆದ ಜೂನ್​ ತಿಂಗಳಲ್ಲಿ ಫರ್ವೀಜ್​ ಅಹ್ಮದ್​ ದಾರ್​ ಎಂಬ ಪೊಲೀಸ್ ಅಧಿಕಾರಿ ಇಬ್ಬರು ಉಗ್ರರಿಂದ ದಾಳಿಗೆ ಒಳಗಾಗಿದ್ದರು. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.  

ಅವರ ಪತ್ನಿ, 13 ವರ್ಷದ ಮಗಳು ಮತ್ತು 10 ವರ್ಷದ ಮಗನನ್ನು ಇಂದು ಅಮಿತ್​ ಶಾ ಭೇಟಿಯಾಗಿದ್ದಾರೆ. ಇಡೀ ದೇಶ ನಿಮ್ಮೊಂದಿಗೆ ಇದೆ. ಪೊಲೀಸ್​ ಅಧಿಕಾರಿ ದಾರ್​ ಹಾಗೂ ಇನ್ನೂ ಅನೇಕ ರಕ್ಷಣಾ ಅಧಿಕಾರಿಗಳು ದೇಶಕ್ಕಾಗಿ ತಮ್ಮ ಜೀವವನ್ನೇ ತ್ಯಜಿಸಿದ್ದಾರೆ. ಅವರ ತ್ಯಾಗವನ್ನೆಂದೂ ನಾವು ಮರೆಯುವುದಿಲ್ಲ ಎಂದು ಹೇಳಿದ್ದಾರೆ. ಇದೇ ಹೊತ್ತಲ್ಲಿ ಫರ್ವೇಜ್​​ ದಾರ್​ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆಯನ್ನೂ ಕೊಟ್ಟಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್​ 370ನ್ನು ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಅಮಿತ್​ ಶಾ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಈ ಮೂರು ದಿನಗಳಲ್ಲಿ ಅವರು ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ ಶ್ರೀನಗರ ಏರ್​ಪೋರ್ಟ್ ತಲುಪಿದ ಅಮಿತ್​ ಶಾ ಅವರನ್ನು ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಸ್ವಾಗತಿಸಿದರು.ಇದೇ ವೇಳೆ ಅಲ್ಲಿನ ಹಲವು ಉನ್ನತಾಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಅಮಿತ್​ ಶಾ ಅಲ್ಲಿನ ಭದ್ರತಾ ಸಿಬ್ಬಂದಿಯೊಂದಿಗೆ ಉನ್ನತ ಮಟ್ಟದ ಭದ್ರತಾ ಪರಿಶೀಲನೆ ಸಭೆ ನಡೆಸಲಿದ್ದಾರೆ. ಶ್ರೀನಗರ-ಶರ್ಜಾಹ್(ಯುಎಇ)​ ನಡುವಿನ ಮೊದಲ ವಿಮಾನ ಹಾರಾಟಕ್ಕೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿಲಿದ್ದಾರೆ. ಶ್ರೀನಗರದಿಂದ ಶಾರ್ಜಾಹ್​​ಗೆ ವಿಮಾನ ಹಾರಾಟ ಶುರುಮಾಡುವುದಾಗಿ ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಳೆದ ತಿಂಗಳು ಕಾಶ್ಮೀರಕ್ಕೆ ಭೇಟಿ ನೀಡಿದ್ದಾಗ ಭರವಸೆ ನೀಡಿದ್ದರು.

ಇದನ್ನೂ ಓದಿ: ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ನಿಂದನೆ ಮಾಡಿಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Prabhas Birthday: ‘ಬಾಹುಬಲಿ’ಗೂ ಮುನ್ನವೇ ಆಕ್ಷನ್ ಸಿನಿಮಾಗಳಲ್ಲಿ ಧೂಳೆಬ್ಬಿಸಿದ್ದ ಪ್ರಭಾಸ್; ಯಾವುವು ಆ ಚಿತ್ರಗಳು?

Published On - 1:24 pm, Sat, 23 October 21

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​