AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರೊಟ್ಟಿಗೆ ನಿನ್ನೆ ರಾತ್ರಿ ಕಳೆದ ಗೃಹ ಸಚಿವ ಅಮಿತ್​ ಶಾ; ಹುತಾತ್ಮರಿಗೆ ಗೌರವ

ಉಗ್ರರ ಬಗ್ಗೆ ಪ್ರಧಾನಿ ಮೋದಿ ಸರ್ಕಾರ ಶೂನ್ಯ ಸಹಿಷ್ಣುತಾ ಮನೋಭಾವ ಹೊಂದಿದೆ. ಕಾಶ್ಮೀರ ಕಣಿವೆಯಲ್ಲಿ ಸಂಪೂರ್ಣವಾಗಿ ಶಾಂತಿ ನೆಲೆಸುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಅಮಿತ್​ ಶಾ ಹೇಳಿದರು.

ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರೊಟ್ಟಿಗೆ ನಿನ್ನೆ ರಾತ್ರಿ ಕಳೆದ ಗೃಹ ಸಚಿವ ಅಮಿತ್​ ಶಾ; ಹುತಾತ್ಮರಿಗೆ ಗೌರವ
ಯೋಧರೊಂದಿಗೆ ಊಟ ಮಾಡಿದ ಅಮಿತ್​ ಶಾ
TV9 Web
| Edited By: |

Updated on: Oct 26, 2021 | 11:42 AM

Share

ದೆಹಲಿ: ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ (Jammu-Kashmir Visit) ಹಮ್ಮಿಕೊಂಡು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಗೃಹ ಸಚಿವ ಅಮಿತ್​ ಶಾ, ನಿನ್ನೆ ರಾತ್ರಿ  ಪುಲ್ವಾಮಾದ ಸಿಆರ್​ಪಿಎಫ್​ ಕ್ಯಾಂಪ್​​​ನಲ್ಲಿ ಕಳೆದಿದ್ದಾರೆ. ಅವರು ನಿನ್ನೆ ಸಂಜೆ ದೆಹಲಿಗೆ ವಾಪಸ್​ ಆಗಬೇಕಿತ್ತು. ಆದರೆ ಅಮಿತ್​ ಶಾ (Amit Shah) ಹಾಗೆ ಮಾಡಲಿಲ್ಲ. 2019ರಲ್ಲಿ ಪುಲ್ವಾಮಾ(Pulwama)ದಲ್ಲಿ ನಡೆದ ಆತ್ಮಾಹುತಿ ಬಾಂಬ್​ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದರು. ನಿನ್ನೆ  ಸಿಆರ್​ಪಿಎಫ್​​ ಕ್ಯಾಂಪ್​​ನಲ್ಲಿ ಕಳೆದ ಅಮಿತ್​ ಶಾ ಅಂದು ಹುತಾತ್ಮರಾಧ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಇದ್ದರು. ಸಿಆರ್​ಪಿಎಫ್​ ಸಿಬ್ಬಂದಿಯೊಂದಿಗೆ ರಾತ್ರಿ ಔತಣಕೂಟ ನಡೆಸಿದರು. 

ಅದಕ್ಕೂ ಮೊದಲು ಭದ್ರತಾ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅಮಿತ್​ ಶಾ, ಉಗ್ರರ ಬಗ್ಗೆ ಪ್ರಧಾನಿ ಮೋದಿ ಸರ್ಕಾರ ಶೂನ್ಯ ಸಹಿಷ್ಣುತಾ ಮನೋಭಾವ ಹೊಂದಿದೆ. ಕಾಶ್ಮೀರ ಕಣಿವೆಯಲ್ಲಿ ಸಂಪೂರ್ಣವಾಗಿ ಶಾಂತಿ ನೆಲೆಸುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಹೇಳಿದರು. ಸಿಆರ್​ಪಿಎಫ್​ ಕ್ಯಾಂಪ್​​ನಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸೇನೆ, ಬಿಎಸ್​ಎಫ್​, ಸಿಆರ್​ಪಿಎಫ್​ ಅಥವಾ ಎಸ್​ಎಸ್​ಬಿ ಯಾವುದೇ ವಿಭಾಗವಾಗಿರಲಿ ಅವರು ನಮ್ಮ ದೇಶದ ಗಡಿಯ ಇಂಚಿಂಚನ್ನೂ ಕಾಪಾಡುತ್ತಿದ್ದಾರೆ. ಅಂಥವರೊಟ್ಟಿಗೆ ನಾನು ಕಾಲ ಕಳೆಯುವುದು ನಿಜಕ್ಕೂ ನನಗೆ ಖುಷಿಕೊಟ್ಟ ವಿಚಾರ.  ನನ್ನ ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿ ಇದು ನನ್ನ ಕೊನೆಯ ಮತ್ತು ಅತ್ಯಂತ ಮುಖ್ಯವಾದ ಕಾರ್ಯಕ್ರಮ ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಕಾನೂನು-ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿದೆ. ಪ್ರಧಾನಿ ಮೋದಿಯವರು ಇಲ್ಲಿ ಶಾಂತಿ ಸ್ಥಾಪನೆಗೆ ಪಣತೊಟ್ಟಿದ್ದಾರೆ. ಹಾಗೇ, ಜಮ್ಮು-ಕಾಶ್ಮೀರದಲ್ಲಿ ಶಾಂತಿ, ಕಾನೂನು-ಸುವ್ಯವಸ್ಥೆ ಸ್ಥಾಪನೆಯಾಗುವುದನ್ನು ನನ್ನ ಜೀವಿತಾವಧಿಯಲ್ಲಿ ನೋಡುತ್ತೇನೆ ಎಂಬ ಭರವಸೆ ಇದೆ.  ಇಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅಂಥ ರಕ್ತಪಾತದ ಉಗ್ರದಾಳಿಗಳು ನಡೆದಿಲ್ಲ. ಆರ್ಟಿಕಲ್​ 370ನ್ನು ರದ್ದುಗೊಳಿಸಿದ್ದನ್ನು ಇಲ್ಲಿನ ಜನರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಪರೀಕ್ಷೆಯಲ್ಲಿ ಹೆಚ್ಚು ಅಂಕ ತೆಗೆದಿಲ್ಲ ಎಂದಿದ್ದಕ್ಕೆ ರೈಲಿನ ಕೆಳಗೆ ಕೂತು, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು