AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರೊಟ್ಟಿಗೆ ನಿನ್ನೆ ರಾತ್ರಿ ಕಳೆದ ಗೃಹ ಸಚಿವ ಅಮಿತ್​ ಶಾ; ಹುತಾತ್ಮರಿಗೆ ಗೌರವ

ಉಗ್ರರ ಬಗ್ಗೆ ಪ್ರಧಾನಿ ಮೋದಿ ಸರ್ಕಾರ ಶೂನ್ಯ ಸಹಿಷ್ಣುತಾ ಮನೋಭಾವ ಹೊಂದಿದೆ. ಕಾಶ್ಮೀರ ಕಣಿವೆಯಲ್ಲಿ ಸಂಪೂರ್ಣವಾಗಿ ಶಾಂತಿ ನೆಲೆಸುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಅಮಿತ್​ ಶಾ ಹೇಳಿದರು.

ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರೊಟ್ಟಿಗೆ ನಿನ್ನೆ ರಾತ್ರಿ ಕಳೆದ ಗೃಹ ಸಚಿವ ಅಮಿತ್​ ಶಾ; ಹುತಾತ್ಮರಿಗೆ ಗೌರವ
ಯೋಧರೊಂದಿಗೆ ಊಟ ಮಾಡಿದ ಅಮಿತ್​ ಶಾ
TV9 Web
| Edited By: |

Updated on: Oct 26, 2021 | 11:42 AM

Share

ದೆಹಲಿ: ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸ (Jammu-Kashmir Visit) ಹಮ್ಮಿಕೊಂಡು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಗೃಹ ಸಚಿವ ಅಮಿತ್​ ಶಾ, ನಿನ್ನೆ ರಾತ್ರಿ  ಪುಲ್ವಾಮಾದ ಸಿಆರ್​ಪಿಎಫ್​ ಕ್ಯಾಂಪ್​​​ನಲ್ಲಿ ಕಳೆದಿದ್ದಾರೆ. ಅವರು ನಿನ್ನೆ ಸಂಜೆ ದೆಹಲಿಗೆ ವಾಪಸ್​ ಆಗಬೇಕಿತ್ತು. ಆದರೆ ಅಮಿತ್​ ಶಾ (Amit Shah) ಹಾಗೆ ಮಾಡಲಿಲ್ಲ. 2019ರಲ್ಲಿ ಪುಲ್ವಾಮಾ(Pulwama)ದಲ್ಲಿ ನಡೆದ ಆತ್ಮಾಹುತಿ ಬಾಂಬ್​ ದಾಳಿಯಿಂದ 40 ಯೋಧರು ಹುತಾತ್ಮರಾಗಿದ್ದರು. ನಿನ್ನೆ  ಸಿಆರ್​ಪಿಎಫ್​​ ಕ್ಯಾಂಪ್​​ನಲ್ಲಿ ಕಳೆದ ಅಮಿತ್​ ಶಾ ಅಂದು ಹುತಾತ್ಮರಾಧ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ ಅವರೊಂದಿಗೆ ಲೆಫ್ಟಿನೆಂಟ್​ ಗವರ್ನರ್​ ಮನೋಜ್​ ಸಿನ್ಹಾ ಇದ್ದರು. ಸಿಆರ್​ಪಿಎಫ್​ ಸಿಬ್ಬಂದಿಯೊಂದಿಗೆ ರಾತ್ರಿ ಔತಣಕೂಟ ನಡೆಸಿದರು. 

ಅದಕ್ಕೂ ಮೊದಲು ಭದ್ರತಾ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅಮಿತ್​ ಶಾ, ಉಗ್ರರ ಬಗ್ಗೆ ಪ್ರಧಾನಿ ಮೋದಿ ಸರ್ಕಾರ ಶೂನ್ಯ ಸಹಿಷ್ಣುತಾ ಮನೋಭಾವ ಹೊಂದಿದೆ. ಕಾಶ್ಮೀರ ಕಣಿವೆಯಲ್ಲಿ ಸಂಪೂರ್ಣವಾಗಿ ಶಾಂತಿ ನೆಲೆಸುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಹೇಳಿದರು. ಸಿಆರ್​ಪಿಎಫ್​ ಕ್ಯಾಂಪ್​​ನಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಸೇನೆ, ಬಿಎಸ್​ಎಫ್​, ಸಿಆರ್​ಪಿಎಫ್​ ಅಥವಾ ಎಸ್​ಎಸ್​ಬಿ ಯಾವುದೇ ವಿಭಾಗವಾಗಿರಲಿ ಅವರು ನಮ್ಮ ದೇಶದ ಗಡಿಯ ಇಂಚಿಂಚನ್ನೂ ಕಾಪಾಡುತ್ತಿದ್ದಾರೆ. ಅಂಥವರೊಟ್ಟಿಗೆ ನಾನು ಕಾಲ ಕಳೆಯುವುದು ನಿಜಕ್ಕೂ ನನಗೆ ಖುಷಿಕೊಟ್ಟ ವಿಚಾರ.  ನನ್ನ ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿ ಇದು ನನ್ನ ಕೊನೆಯ ಮತ್ತು ಅತ್ಯಂತ ಮುಖ್ಯವಾದ ಕಾರ್ಯಕ್ರಮ ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಕಾನೂನು-ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿದೆ. ಪ್ರಧಾನಿ ಮೋದಿಯವರು ಇಲ್ಲಿ ಶಾಂತಿ ಸ್ಥಾಪನೆಗೆ ಪಣತೊಟ್ಟಿದ್ದಾರೆ. ಹಾಗೇ, ಜಮ್ಮು-ಕಾಶ್ಮೀರದಲ್ಲಿ ಶಾಂತಿ, ಕಾನೂನು-ಸುವ್ಯವಸ್ಥೆ ಸ್ಥಾಪನೆಯಾಗುವುದನ್ನು ನನ್ನ ಜೀವಿತಾವಧಿಯಲ್ಲಿ ನೋಡುತ್ತೇನೆ ಎಂಬ ಭರವಸೆ ಇದೆ.  ಇಲ್ಲಿನ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಅಂಥ ರಕ್ತಪಾತದ ಉಗ್ರದಾಳಿಗಳು ನಡೆದಿಲ್ಲ. ಆರ್ಟಿಕಲ್​ 370ನ್ನು ರದ್ದುಗೊಳಿಸಿದ್ದನ್ನು ಇಲ್ಲಿನ ಜನರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಪರೀಕ್ಷೆಯಲ್ಲಿ ಹೆಚ್ಚು ಅಂಕ ತೆಗೆದಿಲ್ಲ ಎಂದಿದ್ದಕ್ಕೆ ರೈಲಿನ ಕೆಳಗೆ ಕೂತು, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?