AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amit Shah Telangana Tour: ಕೇಂದ್ರ ಗೃಹ ಸಚಿವ ಅಮಿತ್​ ಶಾ ತೆಲಂಗಾಣ ಪ್ರವಾಸ ಪಟ್ಟಿ ಸಿದ್ದ

Amit Shah Telangana Tour: ಶನಿವಾರ ಸಂಜೆ 6.30 ಕ್ಕೆ ಹೈದರಾಬಾದ್ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ತುಕ್ಕುಗೂಡದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಅಮಿತ್​ ಶಾ ಪಾಲ್ಗೊಳ್ಳಲಿದ್ದಾರೆ. ಆ ನಂತರ ರಾತ್ರಿ 8.25ಕ್ಕೆ ಡೆಲ್ಲಿಗೆ ವಾಪಸ್​ ಪ್ರಯಾಣ ಮಾಡಲಿದ್ದಾರೆ.

Amit Shah Telangana Tour: ಕೇಂದ್ರ ಗೃಹ ಸಚಿವ ಅಮಿತ್​ ಶಾ ತೆಲಂಗಾಣ ಪ್ರವಾಸ ಪಟ್ಟಿ ಸಿದ್ದ
ಕೇಂದ್ರ ಗೃಹ ಸಚಿವ ಅಮಿತ್​ ಶಾ ತೆಲಂಗಾಣ ಪ್ರವಾಸ ಪಟ್ಟಿ ಸಿದ್ದ
TV9 Web
| Edited By: ಸಾಧು ಶ್ರೀನಾಥ್​|

Updated on: May 12, 2022 | 8:12 PM

Share

ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೈದರಾಬಾದ್ ಪ್ರವಾಸ ಪಟ್ಟಿ ಸಿದ್ದಗೊಂಡಿದೆ. ತೆಲಂಗಾಣ ಬಿಜೆಪಿ ರಾಜ್ಯ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ (Bandi Sanjay Kumar) ಎರಡನೆಯ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್​ ಶಾ ಭಾಗವಹಿಸಲಿದ್ದಾರೆ (Amit Shah Hyderabad Tour). ಕೇಂದ್ರ ಸಹಕಾರ ಮತ್ತು ಗೃಹ ಖಾತೆ ಸಚಿವ ಅಮಿತ್​ ಶಾ ಅವರ ಹೈದರಾಬಾದ್ ಪ್ರವಾಸ ಪಟ್ಟಿಅಂತಿಮಗೊಂಡಿದೆ. ತೆಲಂಗಾಣ ಬಿಜೆಪಿ ರಾಜ್ಯ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪ್ರಜಾ ಸಂಗ್ರಾಮ ಯಾತ್ರೆ (Praja Sangrama Yatra) ಮುಕ್ತಾಯ ಹಂತಕ್ಕೆ ಬಂದಿದ್ದು, ಕೊನೆಯ ಚರಣದಲ್ಲಿ ಕೇಂದ್ರ ಸಚಿವ ಅಮಿತ್​ ಶಾ ಉಪಸ್ಥಿತರಾಗಲಿದ್ದಾರೆ. ಈ ಸಂದರ್ಭದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ಇದೇ ಮೇ 14 ರಂದು ಶನಿವಾರ ಹೈದರಾಬಾದಿಗೆ ಬರಲಿರುವ ಅಮಿತ್​ ಶಾ, ಮಧ್ಯಾಹ್ನ 2.30 ಕ್ಕೆ ಬೇಗಂ ಪೇಟೆ ವಿಮಾನ ನಿಲ್ದಾಣದಲ್ಲಿ ಇಳಿಯಲಿದ್ದಾರೆ. 3 ಗಂಟೆಗೆ ಸೆಂಟ್ರಲ್ ಫೋರೆನ್ಸಿಕ್ ಸೈನ್ಸ್​ ಲ್ಯಾಬೊರೇಟರಿಗೆ ಭೇಟಿ ನೀಡಲಿದ್ದಾರೆ. ಸಂಜೆ 4.30ರವರೆಗೂ ಅಲ್ಲಿರಲಿದ್ದಾರೆ.

ಹಾಗೆಯೇ, ಸಂಜೆ 5 ಗಂಟೆಗೆ ಶಂಷಾಬಾದ್ ಏರ್​​ಪೋರ್ಟ್​​​ನಲ್ಲಿರುವ ನೋವಾಟೆಲ್ (Novotel Hotel) ಹೋಟೆಲಿಗೆ ತೆರಳಲಿದ್ದಾರೆ. 6.30 ಕ್ಕೆ ಹೈದರಾಬಾದ್ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯಲ್ಲಿರುವ ತುಕ್ಕುಗೂಡದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಅಮಿತ್​ ಶಾ ಪಾಲ್ಗೊಳ್ಳಲಿದ್ದಾರೆ. ಆ ನಂತರ ರಾತ್ರಿ 8 ಗಂಟೆಗೆ ಸಭಾ ಸ್ಥಳದಿಂದ ಏರ್​ ಪೋರ್ಟ್​ ಗೆ ತೆರಳಲಿದ್ದಾರೆ. ರಾತ್ರಿ 8.25ಕ್ಕೆ ಡೆಲ್ಲಿಗೆ ವಾಪಸ್​ ಪ್ರಯಾಣ ಮಾಡಲಿದ್ದಾರೆ. ಸಂಜೆ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾರೀ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿದೆ.

To read in Telugu click the link here

ಇತರೆ ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ  ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!