AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalit Convention: ಉತ್ತರ ಪ್ರದೇಶದಲ್ಲಿ ದಲಿತ ಸಮಾವೇಶವನ್ನುದ್ದೇಶಿ ಮಾತನಾಡಲಿದ್ದಾರೆ ಅಮಿತ್ ಶಾ

ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ (ಏಪ್ರಿಲ್ 14) ಮುಂಚಿತವಾಗಿ ದಲಿತ ಸಮುದಾಯವನ್ನು ಓಲೈಸಲು ಬಿಜೆಪಿಯು ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುರುವಾರ ‘ಸಾಮಾಜಿಕ ನ್ಯಾಯ ಸಪ್ತಾಹ’ವನ್ನು ಪ್ರಾರಂಭಿಸಿತು

Dalit Convention: ಉತ್ತರ ಪ್ರದೇಶದಲ್ಲಿ ದಲಿತ ಸಮಾವೇಶವನ್ನುದ್ದೇಶಿ ಮಾತನಾಡಲಿದ್ದಾರೆ ಅಮಿತ್ ಶಾ
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 07, 2023 | 7:00 AM

Share

ಮುಖ್ಯಾಂಶಗಳು

  • ಕೌಶಂಬಿ ಉತ್ಸವದ ಅಂಗವಾಗಿ ದಲಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಅಮಿತ್ ಶಾ
  • ಏಪ್ರಿಲ್ 7 ರಿಂದ ಏಪ್ರಿಲ್ 9 ರವರೆಗೆ ನಡೆಯಲಿದೆ ಕೌಶಂಬಿ ಉತ್ಸವ
  • ಉತ್ಸವದ ಉದ್ಘಾಟನೆ, ಕ್ರೀಡಾಕೂಟದ ಸಮಾರೋಪ ಹಾಗೂ ದಲಿತರ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು(ಏಪ್ರಿಲ್ 7) ಉತ್ತರ ಪ್ರದೇಶದ(Uttar Pradesh) ಕೌಶಾಂಬಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಕೌಶಂಬಿ ಉತ್ಸವದ ಅಂಗವಾಗಿ ದಲಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೌಶಾಂಬಿ ಉತ್ಸವವನ್ನು ಏಪ್ರಿಲ್ 7 ರಿಂದ ಏಪ್ರಿಲ್ 9 ರವರೆಗೆ ಸಂಸದ ವಿನೋದ್ ಸೋನ್ಕರ್ ಆಯೋಜಿಸಿದ್ದಾರೆ. ಉತ್ಸವದ ಉದ್ಘಾಟನೆ, ಕ್ರೀಡಾಕೂಟದ ಸಮಾರೋಪ ಹಾಗೂ ದಲಿತರ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಅದೇ ವೇಳೆ ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಶಾ ಭಾಗಿಯಾಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ದಲಿತ ಸಮಾವೇಶದ ಮೂಲಕ ಬಿಜೆಪಿ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷ (BSP) ಮತ್ತು ಸಮಾಜವಾದಿ ಪಕ್ಷದ (SP) ಮತದಾರರನ್ನು ಸೆಳೆಯಲು ಸಿದ್ಧತೆ ನಡೆಸಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ (ಏಪ್ರಿಲ್ 14) ಮುಂಚಿತವಾಗಿ ದಲಿತ ಸಮುದಾಯವನ್ನು ಓಲೈಸಲು ಬಿಜೆಪಿಯು ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುರುವಾರ ‘ಸಾಮಾಜಿಕ ನ್ಯಾಯ ಸಪ್ತಾಹ’ವನ್ನು ಪ್ರಾರಂಭಿಸಿತು. 2024 ರ ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟು ಬಿಜೆಪಿ ಈ ಹೆಜ್ಜೆಯಿಟ್ಟಿದೆ.

ಸಾಮಾಜಿಕ ನ್ಯಾಯ ಸಪ್ತಾಹದಡಿ ಬಿಜೆಪಿ ಯುವಮೋರ್ಚಾ ಶುಕ್ರವಾರ ವೈದ್ಯಕೀಯ ಶಿಬಿರ ಮತ್ತು ಸಮುದಾಯದ ಊಟದ ಕಾರ್ಯಕ್ರಮ ಆಯೋಜಿಸಿದ್ದು, ಮರುದಿನ ಪರಿಶಿಷ್ಟ ಪಂಗಡ ಮೋರ್ಚಾ ಬುಡಕಟ್ಟು ಯುವಕರಿಗೆ ಸಮಾವೇಶ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ದಲಿತರು ಒಟ್ಟು ಜನಸಂಖ್ಯೆಯ ಶೇಕಡ 22 ರಷ್ಟಿದ್ದಾರೆ. ಏಪ್ರಿಲ್ 14 ರಿಂದ ಮೇ 5 ರವರೆಗೆ ರಾಜ್ಯಾದ್ಯಂತ ಸರಣಿ ವಿಚಾರ ಸಂಕಿರಣಗಳು ನಡೆಯಲಿದ್ದು, 1995 ರಲ್ಲಿ ಅತಿಥಿ ಗೃಹದ ಘಟನೆಯಲ್ಲಿ ಬಿಜೆಪಿ ನಾಯಕರು ಸಮಾಜವಾದಿ ಪಕ್ಷದ ಗೂಂಡಾಗಳಿಂದ ಮಾಯಾವತಿ ಅವರ ಜೀವವನ್ನು ಹೇಗೆ ಉಳಿಸಿದರು ಎಂಬುದನ್ನು ನಾವು ಜನರಿಗೆ ತಿಳಿಸುತ್ತೇವೆ.ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈಗ ಕಾನ್ಶಿರಾಮ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ. ಆದರೆ ದಲಿತ ಸಮಾಜವು ಅವರನ್ನು ತಮ್ಮ “ದೊಡ್ಡ ಎದುರಾಳಿ” ಎಂದು ಪರಿಗಣಿಸುತ್ತದೆ ಎಂದು ಉತ್ತರ ಪ್ರದೇಶ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷ ರಾಮಚಂದ್ರ ಕನೋಜಿಯಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ