AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalit Convention: ಉತ್ತರ ಪ್ರದೇಶದಲ್ಲಿ ದಲಿತ ಸಮಾವೇಶವನ್ನುದ್ದೇಶಿ ಮಾತನಾಡಲಿದ್ದಾರೆ ಅಮಿತ್ ಶಾ

ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ (ಏಪ್ರಿಲ್ 14) ಮುಂಚಿತವಾಗಿ ದಲಿತ ಸಮುದಾಯವನ್ನು ಓಲೈಸಲು ಬಿಜೆಪಿಯು ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುರುವಾರ ‘ಸಾಮಾಜಿಕ ನ್ಯಾಯ ಸಪ್ತಾಹ’ವನ್ನು ಪ್ರಾರಂಭಿಸಿತು

Dalit Convention: ಉತ್ತರ ಪ್ರದೇಶದಲ್ಲಿ ದಲಿತ ಸಮಾವೇಶವನ್ನುದ್ದೇಶಿ ಮಾತನಾಡಲಿದ್ದಾರೆ ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Apr 07, 2023 | 7:00 AM

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು(ಏಪ್ರಿಲ್ 7) ಉತ್ತರ ಪ್ರದೇಶದ(Uttar Pradesh) ಕೌಶಾಂಬಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಕೌಶಂಬಿ ಉತ್ಸವದ ಅಂಗವಾಗಿ ದಲಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೌಶಾಂಬಿ ಉತ್ಸವವನ್ನು ಏಪ್ರಿಲ್ 7 ರಿಂದ ಏಪ್ರಿಲ್ 9 ರವರೆಗೆ ಸಂಸದ ವಿನೋದ್ ಸೋನ್ಕರ್ ಆಯೋಜಿಸಿದ್ದಾರೆ. ಉತ್ಸವದ ಉದ್ಘಾಟನೆ, ಕ್ರೀಡಾಕೂಟದ ಸಮಾರೋಪ ಹಾಗೂ ದಲಿತರ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಅದೇ ವೇಳೆ ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಶಾ ಭಾಗಿಯಾಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ದಲಿತ ಸಮಾವೇಶದ ಮೂಲಕ ಬಿಜೆಪಿ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷ (BSP) ಮತ್ತು ಸಮಾಜವಾದಿ ಪಕ್ಷದ (SP) ಮತದಾರರನ್ನು ಸೆಳೆಯಲು ಸಿದ್ಧತೆ ನಡೆಸಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ (ಏಪ್ರಿಲ್ 14) ಮುಂಚಿತವಾಗಿ ದಲಿತ ಸಮುದಾಯವನ್ನು ಓಲೈಸಲು ಬಿಜೆಪಿಯು ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುರುವಾರ ‘ಸಾಮಾಜಿಕ ನ್ಯಾಯ ಸಪ್ತಾಹ’ವನ್ನು ಪ್ರಾರಂಭಿಸಿತು. 2024 ರ ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟು ಬಿಜೆಪಿ ಈ ಹೆಜ್ಜೆಯಿಟ್ಟಿದೆ.

ಸಾಮಾಜಿಕ ನ್ಯಾಯ ಸಪ್ತಾಹದಡಿ ಬಿಜೆಪಿ ಯುವಮೋರ್ಚಾ ಶುಕ್ರವಾರ ವೈದ್ಯಕೀಯ ಶಿಬಿರ ಮತ್ತು ಸಮುದಾಯದ ಊಟದ ಕಾರ್ಯಕ್ರಮ ಆಯೋಜಿಸಿದ್ದು, ಮರುದಿನ ಪರಿಶಿಷ್ಟ ಪಂಗಡ ಮೋರ್ಚಾ ಬುಡಕಟ್ಟು ಯುವಕರಿಗೆ ಸಮಾವೇಶ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ದಲಿತರು ಒಟ್ಟು ಜನಸಂಖ್ಯೆಯ ಶೇಕಡ 22 ರಷ್ಟಿದ್ದಾರೆ. ಏಪ್ರಿಲ್ 14 ರಿಂದ ಮೇ 5 ರವರೆಗೆ ರಾಜ್ಯಾದ್ಯಂತ ಸರಣಿ ವಿಚಾರ ಸಂಕಿರಣಗಳು ನಡೆಯಲಿದ್ದು, 1995 ರಲ್ಲಿ ಅತಿಥಿ ಗೃಹದ ಘಟನೆಯಲ್ಲಿ ಬಿಜೆಪಿ ನಾಯಕರು ಸಮಾಜವಾದಿ ಪಕ್ಷದ ಗೂಂಡಾಗಳಿಂದ ಮಾಯಾವತಿ ಅವರ ಜೀವವನ್ನು ಹೇಗೆ ಉಳಿಸಿದರು ಎಂಬುದನ್ನು ನಾವು ಜನರಿಗೆ ತಿಳಿಸುತ್ತೇವೆ.ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈಗ ಕಾನ್ಶಿರಾಮ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ. ಆದರೆ ದಲಿತ ಸಮಾಜವು ಅವರನ್ನು ತಮ್ಮ “ದೊಡ್ಡ ಎದುರಾಳಿ” ಎಂದು ಪರಿಗಣಿಸುತ್ತದೆ ಎಂದು ಉತ್ತರ ಪ್ರದೇಶ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷ ರಾಮಚಂದ್ರ ಕನೋಜಿಯಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ