AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

370ನೇ ವಿಧಿ ರದ್ದುಗೊಳಿಸುವ ಮುನ್ನ ಅಮಿತ್ ಶಾ ಜತೆಗೆ ನಡೆದ ಸಭೆ ಹೇಗಿತ್ತು?; ತಮ್ಮ ಪುಸ್ತಕದಲ್ಲಿ ವಿವರಿಸಿದ ಕೆಜೆಎಸ್ ಧಿಲ್ಲೋನ್

ಸೇನೆಯ ಆಯಕಟ್ಟಿನ ಶ್ರೀನಗರ ಮೂಲದ XV ಕಾರ್ಪ್ಸ್‌ನ ಮುಖ್ಯಸ್ಥರಾಗಿದ್ದ ನಿವೃತ್ತ ಲೆಫ್ಟಿನೆಂಟ್ ಜನರಲ್,ಗೃಹ ಸಚಿವರೊಂದಿಗಿನ ಭೇಟಿಯ ಬಗ್ಗೆ ಹೆಚ್ಚು ಬಹಿರಂಗಪಡಿಸಲಿಲ್ಲ. ನಮ್ಮ ಮಾತುಕತೆ ಹೊತ್ತಲ್ಲಿ ಆಲೂ ಪರಾಠ ಮತ್ತು ಪ್ರಸಿದ್ಧ ಗುಜರಾತಿ ಖಾದ್ಯ 'ಧೋಕ್ಲಾ' ಒಳಗೊಂಡಿರುವ ರುಚಿಕರವಾದ ಆಹಾರದ ಹೊರತಾಗಿ ಬಹಳಷ್ಟು ಸೂಕ್ಷ್ಮ ವಿಷಯಗಳು ಮತ್ತು ಪ್ರಮುಖ ಅಂಶಗಳು ಚರ್ಚೆಗೆ ಮೇಜಿನ ಮೇಲಿದ್ದವು".

370ನೇ ವಿಧಿ ರದ್ದುಗೊಳಿಸುವ ಮುನ್ನ ಅಮಿತ್ ಶಾ ಜತೆಗೆ ನಡೆದ ಸಭೆ ಹೇಗಿತ್ತು?; ತಮ್ಮ ಪುಸ್ತಕದಲ್ಲಿ ವಿವರಿಸಿದ ಕೆಜೆಎಸ್ ಧಿಲ್ಲೋನ್
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 12, 2023 | 8:29 PM

Share

ದೆಹಲಿ: ಜೂನ್ 2019 ರಲ್ಲಿ ಶ್ರೀನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರ ಭೇಟಿಯು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) 370 ನೇ ವಿಧಿಯನ್ನು ರದ್ದುಗೊಳಿಸುವ ಸರ್ಕಾರದ ಸಂಕಲ್ಪಕ್ಕೆ ಅಂತಿಮ ತೀರ್ಮಾನ ಕೈಗೊಳ್ಳುವುದಕ್ಕೆ ಆಗಿತ್ತು ಎಂದು ಎಂದು ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆಜೆಎಸ್ ಧಿಲ್ಲೋನ್  (Lt General (retired) KJS Dhillon)ತಮ್ಮ ಬಿಡುಗಡೆಯಾಗಲಿರುವ ಪುಸ್ತಕದಲ್ಲಿ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಲೆಥ್‌ಪೋರಾ ಬಳಿ 2019 ರಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಹುತಾತ್ಮರಾದ 40 ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೆ ಗೌರವ ಸೂಚಕವಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಧಿಲ್ಲೋನ್ ಅವರು ಬರೆದ ‘ಕಿತ್ನೆ ಘಾಜಿ ಆಯೆ ಕಿತ್ನೆ ಘಾಜಿ ಗಯೇ’ ಫೆಬ್ರವರಿ 14 ರಂದು ಬಿಡುಗಡೆಯಾಗಲಿದೆ. ಜೂನ್ 26, 2019 ರಂದು ಅಮಿತ್ ಶಾ ಅವರ ಭೇಟಿಯು ಘೋಷಣೆಯ ಪೂರ್ವಭಾವಿ ಎಂದು ಈಗಾಗಲೇ ಹೇಳಲಾಗಿದೆ. “ನನಗೆ ಬೆಳಿಗ್ಗೆ 2 ಗಂಟೆಗೆ ಕರೆ ಬಂದಿತು, ಬೆಳಿಗ್ಗೆ 7 ಗಂಟೆಗೆ ಗೃಹ ಸಚಿವರೊಂದಿಗಿನ ಸಭೆಯ ಬಗ್ಗೆ ನನಗೆ ತಿಳಿಸಲಾಯಿತು” ಎಂದು ಲೆಫ್ಟಿನೆಂಟ್ ಜನರಲ್ ( ನಿವೃತ್ತಿ) ಧಿಲ್ಲೋನ್ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

ಸೇನೆಯ ಆಯಕಟ್ಟಿನ ಶ್ರೀನಗರ ಮೂಲದ XV ಕಾರ್ಪ್ಸ್‌ನ ಮುಖ್ಯಸ್ಥರಾಗಿದ್ದ ನಿವೃತ್ತ ಲೆಫ್ಟಿನೆಂಟ್ ಜನರಲ್,ಗೃಹ ಸಚಿವರೊಂದಿಗಿನ ಭೇಟಿಯ ಬಗ್ಗೆ ಹೆಚ್ಚು ಬಹಿರಂಗಪಡಿಸಲಿಲ್ಲ. ನಮ್ಮ ಮಾತುಕತೆ ಹೊತ್ತಲ್ಲಿ ಆಲೂ ಪರಾಠ ಮತ್ತು ಪ್ರಸಿದ್ಧ ಗುಜರಾತಿ ಖಾದ್ಯ ‘ಧೋಕ್ಲಾ’ ಒಳಗೊಂಡಿರುವ ರುಚಿಕರವಾದ ಆಹಾರದ ಹೊರತಾಗಿ ಬಹಳಷ್ಟು ಸೂಕ್ಷ್ಮ ವಿಷಯಗಳು ಮತ್ತು ಪ್ರಮುಖ ಅಂಶಗಳು ಚರ್ಚೆಗೆ ಮೇಜಿನ ಮೇಲಿದ್ದವು”. ಈ ಚರ್ಚೆಗಳಲ್ಲಿ ಈ ಐಚಿಹಾಸಿಕ ನಿರ್ಣಯಕ್ಕೆ ಪಾಕಿಸ್ತಾನದ ಪ್ರತಿಕ್ರಿಯೆಯನ್ನು ಅರ್ಥಮಾಡಿಕೊಳ್ಳುವುದು ಸೇರಿದೆ ಎಂದು ಅವರು ಹೇಳಿದರು. “ಗೃಹ ಸಚಿವರು ಕಾರ್ಯಸೂಚಿಯೊಂದಿಗೆ ಅರಿತಿದ್ದರು.ಅವರು ನಿಸ್ಸಂಶಯವಾಗಿ ವ್ಯಾಪಕವಾದ ಸಂಶೋಧನೆ ಮತ್ತು ಹೋಮ್ ವರ್ಕ್ ಮಾಡಿದ್ದಾರೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಹೇಳಿದರು.

ಸಭೆಯ ಕೊನೆಯಲ್ಲಿ, “ನನ್ನ ಸ್ಪಷ್ಟ ಮತ್ತು ವೈಯಕ್ತಿಕ ದೃಷ್ಟಿಕೋನದ ಬಗ್ಗೆ ನನ್ನನ್ನು ಕೇಳಲಾಯಿತು. ನನ್ನ ತಕ್ಷಣದ ಪ್ರತಿಕ್ರಿಯೆ ಎಂದರೆ ‘ಅಗರ್ ಇತಿಹಾಸ್ ಲಿಖ್ನಾ ಹೈ, ತೊ ಕಿಸಿ ಕೋ ಇತಿಹಾಸ್ ಬನಾನಾ ಪಡೆಗಾ’ (ನಾವು ಇತಿಹಾಸವನ್ನು ರಚಿಸಿದರೆ ಮಾತ್ರ ನಾವು ಇತಿಹಾಸವನ್ನು ಬರೆಯಬಹುದು)” ಎಂದು ಲೆಫ್ಟಿನೆಂಟ್ ಜನರಲ್ (ನಿವೃತ್ತ) ಧಿಲ್ಲೋನ್ ಪುಸ್ತಕದಲ್ಲಿ ಹೇಳಿದ್ದಾರೆ.

ಆಗಸ್ಟ್ 5, 2019 ರಂದು ಸರ್ಕಾರವು ಶ್ರೀನಗರದಲ್ಲಿ ಕೊನೆಯ ಸಭೆಯಾಗಿದ್ದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವುದು ಮತ್ತು ಅದನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುತ್ತದೆ ಎಂದು ಘೋಷಿಸಿತು.

ಯಾವುದೇ ಜೀವ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಗಡಿಯಾಚೆಯಿಂದ ಸುಳ್ಳುಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಅಧಿಕಾರಿಗಳು ಇಂಟರ್ನೆಟ್ ಅನ್ನು ಮುಚ್ಚಬೇಕಾಯಿತು ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಹೇಳಿದ್ದಾರೆ. “ಇದರ ಕೊನೆಯಲ್ಲಿ, ಉದ್ದೇಶವನ್ನು ಸಾಧಿಸಲಾಗಿದೆ ಎಂದು ನಾನು ನನ್ನ ಹೆಮ್ಮೆಯಿಂದ ಹೇಳುತ್ತೇನೆ” ಎಂದು ಕಾಶ್ಮೀರದ ಸ್ಥಳೀಯ ಸೇನಾ ಕಮಾಂಡ್‌ನ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಧಿಲ್ಲೋನ್ ಹೇಳಿರುವುದು ಈ ಪುಸ್ತಕದಲ್ಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​