AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

370ನೇ ವಿಧಿ ರದ್ದುಗೊಳಿಸುವ ಮುನ್ನ ಅಮಿತ್ ಶಾ ಜತೆಗೆ ನಡೆದ ಸಭೆ ಹೇಗಿತ್ತು?; ತಮ್ಮ ಪುಸ್ತಕದಲ್ಲಿ ವಿವರಿಸಿದ ಕೆಜೆಎಸ್ ಧಿಲ್ಲೋನ್

ಸೇನೆಯ ಆಯಕಟ್ಟಿನ ಶ್ರೀನಗರ ಮೂಲದ XV ಕಾರ್ಪ್ಸ್‌ನ ಮುಖ್ಯಸ್ಥರಾಗಿದ್ದ ನಿವೃತ್ತ ಲೆಫ್ಟಿನೆಂಟ್ ಜನರಲ್,ಗೃಹ ಸಚಿವರೊಂದಿಗಿನ ಭೇಟಿಯ ಬಗ್ಗೆ ಹೆಚ್ಚು ಬಹಿರಂಗಪಡಿಸಲಿಲ್ಲ. ನಮ್ಮ ಮಾತುಕತೆ ಹೊತ್ತಲ್ಲಿ ಆಲೂ ಪರಾಠ ಮತ್ತು ಪ್ರಸಿದ್ಧ ಗುಜರಾತಿ ಖಾದ್ಯ 'ಧೋಕ್ಲಾ' ಒಳಗೊಂಡಿರುವ ರುಚಿಕರವಾದ ಆಹಾರದ ಹೊರತಾಗಿ ಬಹಳಷ್ಟು ಸೂಕ್ಷ್ಮ ವಿಷಯಗಳು ಮತ್ತು ಪ್ರಮುಖ ಅಂಶಗಳು ಚರ್ಚೆಗೆ ಮೇಜಿನ ಮೇಲಿದ್ದವು".

370ನೇ ವಿಧಿ ರದ್ದುಗೊಳಿಸುವ ಮುನ್ನ ಅಮಿತ್ ಶಾ ಜತೆಗೆ ನಡೆದ ಸಭೆ ಹೇಗಿತ್ತು?; ತಮ್ಮ ಪುಸ್ತಕದಲ್ಲಿ ವಿವರಿಸಿದ ಕೆಜೆಎಸ್ ಧಿಲ್ಲೋನ್
ಅಮಿತ್ ಶಾ
ರಶ್ಮಿ ಕಲ್ಲಕಟ್ಟ
|

Updated on: Feb 12, 2023 | 8:29 PM

Share

ದೆಹಲಿ: ಜೂನ್ 2019 ರಲ್ಲಿ ಶ್ರೀನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರ ಭೇಟಿಯು ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) 370 ನೇ ವಿಧಿಯನ್ನು ರದ್ದುಗೊಳಿಸುವ ಸರ್ಕಾರದ ಸಂಕಲ್ಪಕ್ಕೆ ಅಂತಿಮ ತೀರ್ಮಾನ ಕೈಗೊಳ್ಳುವುದಕ್ಕೆ ಆಗಿತ್ತು ಎಂದು ಎಂದು ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆಜೆಎಸ್ ಧಿಲ್ಲೋನ್  (Lt General (retired) KJS Dhillon)ತಮ್ಮ ಬಿಡುಗಡೆಯಾಗಲಿರುವ ಪುಸ್ತಕದಲ್ಲಿ ಹೇಳಿದ್ದಾರೆ. ದಕ್ಷಿಣ ಕಾಶ್ಮೀರದ ಲೆಥ್‌ಪೋರಾ ಬಳಿ 2019 ರಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿಯಲ್ಲಿ ಹುತಾತ್ಮರಾದ 40 ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗೆ ಗೌರವ ಸೂಚಕವಾಗಿ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಧಿಲ್ಲೋನ್ ಅವರು ಬರೆದ ‘ಕಿತ್ನೆ ಘಾಜಿ ಆಯೆ ಕಿತ್ನೆ ಘಾಜಿ ಗಯೇ’ ಫೆಬ್ರವರಿ 14 ರಂದು ಬಿಡುಗಡೆಯಾಗಲಿದೆ. ಜೂನ್ 26, 2019 ರಂದು ಅಮಿತ್ ಶಾ ಅವರ ಭೇಟಿಯು ಘೋಷಣೆಯ ಪೂರ್ವಭಾವಿ ಎಂದು ಈಗಾಗಲೇ ಹೇಳಲಾಗಿದೆ. “ನನಗೆ ಬೆಳಿಗ್ಗೆ 2 ಗಂಟೆಗೆ ಕರೆ ಬಂದಿತು, ಬೆಳಿಗ್ಗೆ 7 ಗಂಟೆಗೆ ಗೃಹ ಸಚಿವರೊಂದಿಗಿನ ಸಭೆಯ ಬಗ್ಗೆ ನನಗೆ ತಿಳಿಸಲಾಯಿತು” ಎಂದು ಲೆಫ್ಟಿನೆಂಟ್ ಜನರಲ್ ( ನಿವೃತ್ತಿ) ಧಿಲ್ಲೋನ್ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

ಸೇನೆಯ ಆಯಕಟ್ಟಿನ ಶ್ರೀನಗರ ಮೂಲದ XV ಕಾರ್ಪ್ಸ್‌ನ ಮುಖ್ಯಸ್ಥರಾಗಿದ್ದ ನಿವೃತ್ತ ಲೆಫ್ಟಿನೆಂಟ್ ಜನರಲ್,ಗೃಹ ಸಚಿವರೊಂದಿಗಿನ ಭೇಟಿಯ ಬಗ್ಗೆ ಹೆಚ್ಚು ಬಹಿರಂಗಪಡಿಸಲಿಲ್ಲ. ನಮ್ಮ ಮಾತುಕತೆ ಹೊತ್ತಲ್ಲಿ ಆಲೂ ಪರಾಠ ಮತ್ತು ಪ್ರಸಿದ್ಧ ಗುಜರಾತಿ ಖಾದ್ಯ ‘ಧೋಕ್ಲಾ’ ಒಳಗೊಂಡಿರುವ ರುಚಿಕರವಾದ ಆಹಾರದ ಹೊರತಾಗಿ ಬಹಳಷ್ಟು ಸೂಕ್ಷ್ಮ ವಿಷಯಗಳು ಮತ್ತು ಪ್ರಮುಖ ಅಂಶಗಳು ಚರ್ಚೆಗೆ ಮೇಜಿನ ಮೇಲಿದ್ದವು”. ಈ ಚರ್ಚೆಗಳಲ್ಲಿ ಈ ಐಚಿಹಾಸಿಕ ನಿರ್ಣಯಕ್ಕೆ ಪಾಕಿಸ್ತಾನದ ಪ್ರತಿಕ್ರಿಯೆಯನ್ನು ಅರ್ಥಮಾಡಿಕೊಳ್ಳುವುದು ಸೇರಿದೆ ಎಂದು ಅವರು ಹೇಳಿದರು. “ಗೃಹ ಸಚಿವರು ಕಾರ್ಯಸೂಚಿಯೊಂದಿಗೆ ಅರಿತಿದ್ದರು.ಅವರು ನಿಸ್ಸಂಶಯವಾಗಿ ವ್ಯಾಪಕವಾದ ಸಂಶೋಧನೆ ಮತ್ತು ಹೋಮ್ ವರ್ಕ್ ಮಾಡಿದ್ದಾರೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಹೇಳಿದರು.

ಸಭೆಯ ಕೊನೆಯಲ್ಲಿ, “ನನ್ನ ಸ್ಪಷ್ಟ ಮತ್ತು ವೈಯಕ್ತಿಕ ದೃಷ್ಟಿಕೋನದ ಬಗ್ಗೆ ನನ್ನನ್ನು ಕೇಳಲಾಯಿತು. ನನ್ನ ತಕ್ಷಣದ ಪ್ರತಿಕ್ರಿಯೆ ಎಂದರೆ ‘ಅಗರ್ ಇತಿಹಾಸ್ ಲಿಖ್ನಾ ಹೈ, ತೊ ಕಿಸಿ ಕೋ ಇತಿಹಾಸ್ ಬನಾನಾ ಪಡೆಗಾ’ (ನಾವು ಇತಿಹಾಸವನ್ನು ರಚಿಸಿದರೆ ಮಾತ್ರ ನಾವು ಇತಿಹಾಸವನ್ನು ಬರೆಯಬಹುದು)” ಎಂದು ಲೆಫ್ಟಿನೆಂಟ್ ಜನರಲ್ (ನಿವೃತ್ತ) ಧಿಲ್ಲೋನ್ ಪುಸ್ತಕದಲ್ಲಿ ಹೇಳಿದ್ದಾರೆ.

ಆಗಸ್ಟ್ 5, 2019 ರಂದು ಸರ್ಕಾರವು ಶ್ರೀನಗರದಲ್ಲಿ ಕೊನೆಯ ಸಭೆಯಾಗಿದ್ದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವುದು ಮತ್ತು ಅದನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುತ್ತದೆ ಎಂದು ಘೋಷಿಸಿತು.

ಯಾವುದೇ ಜೀವ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದರ ಜೊತೆಗೆ ಗಡಿಯಾಚೆಯಿಂದ ಸುಳ್ಳುಗಳನ್ನು ಪ್ರಚಾರ ಮಾಡುತ್ತಿರುವುದರಿಂದ ಅಧಿಕಾರಿಗಳು ಇಂಟರ್ನೆಟ್ ಅನ್ನು ಮುಚ್ಚಬೇಕಾಯಿತು ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಹೇಳಿದ್ದಾರೆ. “ಇದರ ಕೊನೆಯಲ್ಲಿ, ಉದ್ದೇಶವನ್ನು ಸಾಧಿಸಲಾಗಿದೆ ಎಂದು ನಾನು ನನ್ನ ಹೆಮ್ಮೆಯಿಂದ ಹೇಳುತ್ತೇನೆ” ಎಂದು ಕಾಶ್ಮೀರದ ಸ್ಥಳೀಯ ಸೇನಾ ಕಮಾಂಡ್‌ನ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಧಿಲ್ಲೋನ್ ಹೇಳಿರುವುದು ಈ ಪುಸ್ತಕದಲ್ಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ