AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಐ ಮಾಜಿ ನಿರ್ದೇಶಕ ಅಲೋಕ್​ ವರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುಪಿಎಸ್​ಸಿಗೆ ಶಿಫಾರಸ್ಸು ಮಾಡಿದ ಕೇಂದ್ರ ಸರ್ಕಾರ

2018ರಲ್ಲಿ ರಾಕೇಶ್ ಆಸ್ತಾನಾರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದಾಗ ಅಲೋಕ್​ ವರ್ಮಾ ತೀವ್ರ ಅಸಮಾಧಾನಗೊಂಡಿದ್ದರು. ಅದೆಷ್ಟೋ ಹಿರಿಯ ಅಧಿಕಾರಿಗಳನ್ನೆಲ್ಲ ಬದಿಗೊತ್ತಿ, ಇವರನ್ನು ಸಿಬಿಐ ವಿಶೇಷ ನಿರ್ದೇಶಕನ ಸ್ಥಾನಕ್ಕೆ ನೇಮಕ ಮಾಡಿದ್ದು ಅಲೋಕ್​ ವರ್ಮಾ ಕೋಪಕ್ಕೆ ಕಾರಣವಾಗಿತ್ತು.

ಸಿಬಿಐ ಮಾಜಿ ನಿರ್ದೇಶಕ ಅಲೋಕ್​ ವರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಯುಪಿಎಸ್​ಸಿಗೆ ಶಿಫಾರಸ್ಸು ಮಾಡಿದ ಕೇಂದ್ರ ಸರ್ಕಾರ
ಅಲೋಕ್ ವರ್ಮಾ
TV9 Web
| Edited By: |

Updated on: Aug 02, 2021 | 1:24 PM

Share

ದೆಹಲಿ: ಸಿಬಿಐ ಮಾಜಿ ನಿರ್ದೇಶಕ (CBI) ಅಲೋಕ್​ ವರ್ಮಾ  (Alok Verma)ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಲೋಕಸೇವಾ ಆಯೋಗ(UPSC)ಕ್ಕೆ ಕೇಂದ್ರ ಸರ್ಕಾರ ಶಿಫಾರಸ್ಸು ಮಾಡಿದೆ. ಅಲೋಕ್​ ವರ್ಮಾ ಸಿಬಿಐ ನಿರ್ದೇಶಕ (Former CBI Director) ರಾಗಿದ್ದಾಗ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಮತ್ತು ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಯುಪಿಎಸ್​ಸಿಗೆ ಹೇಳಿದೆ.

2018ರಲ್ಲಿ ಅಲೋಕ್​ ವರ್ಮಾ ಮತ್ತು ರಾಕೇಶ್ ಅಸ್ತಾನಾ ನಡುವಿನ ಪರಸ್ಪರ ಭ್ರಷ್ಟಾಚಾರ ಆರೋಪದಿಂದ ತುಂಬ ದೊಡ್ಡಮಟ್ಟದ ವಿವಾದ ಎದ್ದಿತ್ತು. ಕೊನೆಗೂ ರಾಕೇಶ್ ಅಸ್ತಾನಾಗೆ ಸಿಬಿಐ ಕ್ಲೀನ್​ಚಿಟ್​ ಕೊಟ್ಟಿದೆ. ಆದರೆ ಅಂದಿನ ವಿವಾದದ ಕೇಂದ್ರಬಿಂದು ಅಲೋಕ್​ ವರ್ಮಾರೇ ಆಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಮತ್ತು ಸಿಬ್ಬಂದಿ ಹಾಗೂ ತರಬೇತಿ ಇಲಾಖೆ, ಯುಪಿಎಸ್​ಸಿಗೆ ಶಿಫಾರಸು ಮಾಡಿದೆ. ಅಷ್ಟೇ ಅಲ್ಲ, ಸಿಬಿಐ ನಿರ್ದೇಶಕನಾಗಿದ್ದಾಗ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸದೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಅಲೋಕ್​ ವರ್ಮಾಗೆ ದಂಡ ವಿಧಿಸಬೇಕು ಎಂದೂ ಕೇಂದ್ರ ಸರ್ಕಾರ ಹೇಳಿದೆ. ಹಾಗೊಮ್ಮೆ ಇದನ್ನು ಯುಪಿಎಸ್​ಸಿ ಪರಿಗಣಿಸಿದರೆ, ಅಲೋಕ್​ ವರ್ಮಾರ ಪಿಂಚಣಿ, ನಿವೃತ್ತಿ ನಂತರದ ಅನುಕೂಲತೆಗಳ ಮೇಲೆ ಪರಿಣಾಮ ಬೀರಲಿದೆ.

ಏನಿದು ವಿವಾದ? 2018ರಲ್ಲಿ ರಾಕೇಶ್ ಆಸ್ತಾನಾರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದಾಗ ಅಲೋಕ್​ ವರ್ಮಾ ತೀವ್ರ ಅಸಮಾಧಾನಗೊಂಡಿದ್ದರು. ಅದೆಷ್ಟೋ ಹಿರಿಯ ಅಧಿಕಾರಿಗಳನ್ನೆಲ್ಲ ಬದಿಗೊತ್ತಿ, ಇವರನ್ನು ಸಿಬಿಐ ವಿಶೇಷ ನಿರ್ದೇಶಕನ ಸ್ಥಾನಕ್ಕೆ ನೇಮಕ ಮಾಡಿದ್ದು ಅಲೋಕ್​ ವರ್ಮಾ ಕೋಪಕ್ಕೆ ಕಾರಣವಾಗಿತ್ತು. ಅವರಿಬ್ಬರ ಕಿತ್ತಾಟ ಪರಸ್ಪರ ಬಹಿರಂಗವಾಗಿ ಭ್ರಷ್ಟಾಚಾರ ಆರೋಪ ಮಾಡಿಕೊಳ್ಳುವಷ್ಟರ ಮಟ್ಟಿಗೆ ಹೋಗಿತ್ತು. ಮಾಂಸರಫ್ತು ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸತೀಶ್​ ಸನಾ ಎಂಬುವರಿಗೆ ಕ್ಲೀನ್​ ಚಿಟ್​ ನೀಡಲು ಅಲೋಕ್​ ವರ್ಮಾ ಲಂಚ ಪಡೆದಿದ್ದಾರೆ ಎಂಬ ಆರೋಪವನ್ನು ರಾಕೇಶ್ ಆಸ್ತಾನಾ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ರಾಕೇಶ್​ ಆಸ್ತಾನಾ ವಿರುದ್ಧ ಅಲೋಕ್​ ವರ್ಮಾ ಕೂಡ ಭ್ರಷ್ಟಾಚಾರ ಆರೋಪ ಮಾಡಿದ್ದರು. ನಂತರ ಕೇಂದ್ರ ಸರ್ಕಾರ ಇವರಿಬ್ಬರನ್ನೂ ರಾತ್ರೋರಾತ್ರಿ ಕಡ್ಡಾಯ ರಜೆಯ ಮೇಲೆ ಕಳಿಸಿತ್ತು. ಆದಾಗ್ಯೂ ಅಲೋಕ್​ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿ, ಮತ್ತೆ ಅಧಿಕಾರಕ್ಕೆ ಮರಳಿದ್ದರು. ಹಾಗೆ ಮರಳಿದ ಅಲೋಕ್​ ವರ್ಮಾರನ್ನು ಕೇಂದ್ರ ಸರ್ಕಾರ ಬೇರೆಡೆಗೆ ವರ್ಗಾಯಿಸಿತ್ತು. ಅದಾದ ಬಳಿಕ ರಾಕೇಶ್ ಆಸ್ತಾನಾಗೆ ಎಲ್ಲ ಪ್ರಕರಣಗಳಲ್ಲೂ ಸಿಬಿಐ ಕ್ಲೀನ್​ಚಿಟ್​ ನೀಡಿದೆ.

ಇದನ್ನೂ ಓದಿ: ಗಡಿ ಸಂಘರ್ಷವನ್ನು ಅಸ್ಸಾಂ ಸಿಎಂ ಪ್ರತಿಷ್ಠೆಯ ವಿಷಯವನ್ನಾಗಿ ಪರಿಗಣಿಸಿದ್ದಾರೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್​ ಸಂಸದ

Union Home Ministry recommends action against former CBI director Alok Verm

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ