AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ

ಈ ವರ್ಷದ ಆರಂಭದಲ್ಲಿ, ದೆಹಲಿ ಎಲ್ ಜಿ ವಿಕೆ ಸಕ್ಸೇನಾ ಅವರು ಸತ್ಯೇಂದ್ರ ಜೈನ್ ವಿರುದ್ಧದ ಸುಲಿಗೆ ಆರೋಪಗಳ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸುಲಿಗೆ ಆರೋಪಗಳ ತನಿಖೆಗೆ ಎಲ್‌ಜಿ ಒಪ್ಪಿಗೆ ಕೋರಿ ಕಳೆದ ವರ್ಷ ನವೆಂಬರ್‌ನಲ್ಲಿ ಸಿಬಿಐ ಬರೆದ ಪತ್ರದಲ್ಲಿ, ಜೈನ್ ಅವರು ತಿಹಾರ್ ಜೈಲಿನಿಂದ ಉನ್ನತ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ
ಸತ್ಯೇಂದ್ರ ಜೈನ್
ರಶ್ಮಿ ಕಲ್ಲಕಟ್ಟ
|

Updated on: Mar 29, 2024 | 7:53 PM

Share

ದೆಹಲಿ ಮಾರ್ಚ್ 29: ‘ರಕ್ಷಣಾ ಹಣ’ ಎಂದು ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಅವರಿಂದ ₹10 ಕೋಟಿ ಸುಲಿಗೆ ಮಾಡಿದ ಆರೋಪದ ಮೇಲೆ ಜೈಲು ಪಾಲಾದ ಎಎಪಿ ನಾಯಕ ಸತ್ಯೇಂದ್ರ ಜೈನ್ (Satyendar Jain) ವಿರುದ್ಧ ಸಿಬಿಐ (CBI) ತನಿಖೆಗೆ ಕೇಂದ್ರ ಗೃಹ ಸಚಿವಾಲಯ (Union home ministry) ಅನುಮತಿ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಜೈನ್ ಮತ್ತು ತಿಹಾರ್ ಜೈಲಿನ ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರು ತಿಹಾರ್‌ನಿಂದ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಮತ್ತು ಉನ್ನತ ಮಟ್ಟದ ಕೈದಿಗಳಿಂದ ರಕ್ಷಣಾ ಹಣವನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal)  ಇಡಿ ಬಂಧನದಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿ ಎಲ್ ಜಿ ವಿಕೆ ಸಕ್ಸೇನಾ ಅವರು ಸತ್ಯೇಂದ್ರ ಜೈನ್ ವಿರುದ್ಧದ ಸುಲಿಗೆ ಆರೋಪಗಳ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸುಲಿಗೆ ಆರೋಪಗಳ ತನಿಖೆಗೆ ಎಲ್‌ಜಿ ಒಪ್ಪಿಗೆ ಕೋರಿ ಕಳೆದ ವರ್ಷ ನವೆಂಬರ್‌ನಲ್ಲಿ ಸಿಬಿಐ ಬರೆದ ಪತ್ರದಲ್ಲಿ, ಜೈನ್ ಅವರು ತಿಹಾರ್ ಜೈಲಿನಿಂದ ಉನ್ನತ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಚಂದ್ರಶೇಖರ್ ಅವರಿಗೆ ಜೈಲಿನಲ್ಲಿ ಶಾಂತಿಯುತವಾಗಿ ಮತ್ತು ಆರಾಮವಾಗಿ ಬದುಕು ಸಾಗಿಸಲು “ರಕ್ಷಣಾ ಹಣ” ವಾಗಿ ₹ 10 ಕೋಟಿಗೆ ಬೇಡಿಕೆ ಇಟ್ಟಿದ್ದರು ಎಂದಿತ್ತು.

ಜೈನ್ ಅವರು ದೆಹಲಿಯ ವಿವಿಧ ಜೈಲುಗಳಾದ ತಿಹಾರ್, ರೋಹಿಣಿ ಮತ್ತು ಮಂಡೋಲಿಯಲ್ಲಿ ಆರಾಮವಾಗಿ ವಾಸಿಸಲು ಅನುಕೂಲವಾಗುವಂತೆ 2018-21ರ ಅವಧಿಯಲ್ಲಿ ವೈಯಕ್ತಿಕವಾಗಿ ಅಥವಾ ಅವರ ಸಹಚರರ ಮೂಲಕ ವಿವಿಧ ಕಂತುಗಳಲ್ಲಿ ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯ ‘ಹಿಂದೂ ಶಕ್ತಿ’ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್

ಸತ್ಯೇಂದ್ರ ಜೈನ್ ಅವರನ್ನು ಮೇ 2022 ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಬಂಧಿಸಲಾಯಿತು. ಅವರ ಕೊನೆಯ ಜಾಮೀನು ಅರ್ಜಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗುವಂತೆ ಸುಪ್ರೀಂಕೋರ್ಟ್ ಅವರಿಗೆ ಸೂಚಿಸಿತು. ಮೇ 26, 2023 ರಂದು ಅವರು ಜೈಲಿನ ಸ್ನಾನಗೃಹದಲ್ಲಿ ಬಿದ್ದ ನಂತರ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ನೀಡಲಾಯಿತು. ಜಾಮೀನು ಅವಧಿಯಲ್ಲಿ ಅವರು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ