ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ನೀಡುವ ವೇಗ ಹೆಚ್ಚಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಅಜಯ್​ಕುಮಾರ್​ ಭಲ್ಲಾ

ಯಾವುದೇ ರಾಜ್ಯದಲ್ಲಿ ಲಾಕ್​ಡೌನ್​ ತೆರವುಗೊಳಿಸುವಾಗ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ, ಕಾರ್ಯತಂತ್ರ ರೂಪಿಸದೆ ತೆಗೆಯುವಂತಿಲ್ಲ. ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಮತ್ತು ವ್ಯಾಕ್ಸಿನೇಶನ್​ ಎಂಬ ನಾಲ್ಕು ಕ್ರಮಗಳನ್ನು ಒಳಗೊಂಡೇ ಲಾಕ್​ಡೌನ್ ತೆರವು ಮಾಡಬೇಕು ಎಂದು ಅಜಯ್​ ಭಲ್ಲಾ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ನೀಡುವ ವೇಗ ಹೆಚ್ಚಿಸಿ ಎಂದು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಅಜಯ್​ಕುಮಾರ್​ ಭಲ್ಲಾ
ಅಜಯ್​ ಕುಮಾರ್ ಭಲ್ಲಾ
Follow us
| Updated By: Lakshmi Hegde

Updated on: Jun 19, 2021 | 2:51 PM

ಕೊರೊನಾ ಮೊದಲ ಅಲೆ ತುಸು ತಗ್ಗುತ್ತಿದ್ದಂತೆ ದೇಶ ಸಹಜ ಸ್ಥಿತಿಗೆ ಮರಳಿತ್ತು. ಆದರೆ ಆಗಲೇ ಮುಂಬೈ-ಮಹಾರಾಷ್ಟ್ರದಲ್ಲಿ ಎರಡನೇ ಅಲೆ ಎದ್ದಾಗಿತ್ತು. ಆದರೂ ಉಳಿದ ರಾಜ್ಯಗಳು ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಎಲ್ಲ ರೀತಿಯ ಗುಂಪುಗೂಡುವಿಕೆ, ಕಾರ್ಯಚಟುವಟಿಕೆಗಳು ಮುಂದುವರಿದೇ ಇದ್ದವು. ಅದರ ಪರಿಣಾಮ ಕೊವಿಡ್​ 19 ಎರಡನೇ ಅಲೆ ಅದೆಷ್ಟು ಭೀಕರವಾಯಿತೆಂದರೆ ಸೋಂಕಿನ ಪ್ರಸರಣ, ಸಾವಿನ ಸಂಖ್ಯೆಗಳೆಲ್ಲ ಮೊದಲ ಅಲೆಗಿಂತಲೂ ದ್ವಿಗುಣಗೊಂಡವು. ಹಾಗೇ, ಈಗ ಕೊರೊನಾ 2ನೇ ಅಲೆ ತಗ್ಗುತ್ತಿದೆ..ಮತ್ತೆ ಮಹಾರಾಷ್ಟ್ರದಲ್ಲಿ ಮೂರನೇ ಅಲೆ ಎದ್ದ ಬಗ್ಗೆ ವರದಿಯೂ ಆಗುತ್ತಿದೆ. ಇದೇ ಹೊತ್ತಲ್ಲಿ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್​ ಭಲ್ಲಾ, ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.

ಇಷ್ಟು ದಿನ ಕೊರೊನಾ ಸೋಂಕಿನ ಪ್ರಸರಣ ಉಲ್ಬಣಗೊಂಡಿದ್ದ ಪರಿಣಾಮ ಬಹುತೇಕ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಾಕ್​ಡೌನ್​, ಕರ್ಫ್ಯೂದಂಥ ನಿಯಮಗಳನ್ನು ಹೇರಲಾಗಿತ್ತು. ಆದರೆ ಈಗ ಸಕ್ರಿಯ ಪ್ರಕರಣಗಳು ಕಡಿಮೆಯಾಗುತ್ತಿರುವ ಬೆನ್ನಲ್ಲೇ ನಿರ್ಬಂಧಗಳನ್ನು ತೆಗೆಯಲಾಗುತ್ತಿದೆ. ನಿರ್ಬಂಧಗಳನ್ನು ತೆರವುಗೊಳಿಸುವಾಗ ಅಥವಾ ಹೇರುವಾಗ ಆಯಾ ಪ್ರದೇಶಗಳಲ್ಲಿನ ಸಂದರ್ಭವನ್ನು ತಳಮಟ್ಟದಲ್ಲಿ ಪರಿಶೀಲಿಸಬೇಕು ಎಂದು ಪತ್ರದಲ್ಲಿ ಅಜಯ್​ ಭಲ್ಲಾ ತಿಳಿಸಿದ್ದಾರೆ.

ಯಾವುದೇ ರಾಜ್ಯದಲ್ಲಿ ಲಾಕ್​ಡೌನ್​ ತೆರವುಗೊಳಿಸುವಾಗ ಮುನ್ನೆಚ್ಚರಿಕಾ ಕ್ರಮಗಳಿಲ್ಲದೆ, ಕಾರ್ಯತಂತ್ರ ರೂಪಿಸದೆ ತೆಗೆಯುವಂತಿಲ್ಲ. ಟೆಸ್ಟ್​-ಟ್ರ್ಯಾಕ್​-ಟ್ರೀಟ್​ ಮತ್ತು ವ್ಯಾಕ್ಸಿನೇಶನ್​ ಎಂಬ ನಾಲ್ಕು ಕ್ರಮಗಳನ್ನು ಒಳಗೊಂಡೇ ಲಾಕ್​ಡೌನ್ ತೆರವು ಮಾಡಬೇಕು ಎಂದು ಅಜಯ್​ ಭಲ್ಲಾ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಕೊರೊನಾ ಸರಪಳಿ ಮುರಿಯಲು ಲಸಿಕೆಯೇ ನಿರ್ಣಾಯಕವಾಗಿದೆ. ಹಾಗಾಗಿ ಎಲ್ಲ ಸರ್ಕಾರಗಳೂ ತಮ್ಮ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಸಿಕೆ ನೀಡುವ ವೇಗವನ್ನು ಹೆಚ್ಚಿಸಬೇಕು. ಹಾಗೇ, ಎಲ್ಲ ರಾಜ್ಯಗಳೂ ಆಯಾ ಜಿಲ್ಲಾಡಳಿತಗಳು, ಸ್ಥಳೀಯ ಆಡಳಿತಗಳಿಗೆ ಕೊರೊನಾ ನಿಯಂತ್ರಣ ಸಂಬಂಧ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅಜಯ್​ ಭಲ್ಲಾ ಹೇಳಿದ್ದಾರೆ.

ಇದನ್ನೂ ಓದಿ: ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!